ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 400 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಸುಮಂತ ಕುಪ್ಪಸ್ತ ಹಾಗೂ ಅಂಕಿತಾ ಬಡಿಗೇರ 600ಕ್ಕೆ 586 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜಯ ರಾಠೋಡ 585 ಅಂಕಗಳನ್ನು ಪಡೆದು ದ್ವಿತೀಯ ಮತ್ತು ಅಪ್ಸಾನಾ ನದಾಫ್ ಹಾಗೂ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ