ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ