ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಎಸ್.ಡಿ.ಎಗಳನ್ನು ನಿಯೋಜಿಸಿರುವುದನ್ನು ಕೈ ಬಿಡಬೇಕು ಎಂದು ತಹಸೀಲ್ದಾರ್‌ರಗೆ ಗ್ರಾಪಂ ನೌಕರರು ಗುರುವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಪಂ ನೌಕರರು, ತಹಸೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಗ್ರಾಮ ಪಂಚಾಯಿತಿಗೆ ಸಂಬAಧಿಸಿದAತೆ ಸಾಮಾನ್ಯ ಸಭೆ ನಿರ್ವಹಣೆ, ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿ,ಕರ ವಸೂಲಾತಿ ಆಂದೋಲನ, ಇಸ್ವತ್ತು ಉತಾರೆ ಜನನ-ಮರಣ ಉತಾರೆ ವಿತರಿಸುವುದು ಅವಶ್ಯವಿರುತ್ತದೆ.ಒಂದುವೇಳೆ ನಾವು ಪಂಚಾಯಿತಿಯಲ್ಲಿ ಇಲ್ಲದಿದ್ದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.ರೈತರಿಗೆ ಸಂಬAಧಿಸಿದAತೆ ಬೆಳೆ ಕಟಾವು ಮಾಡುವುದು, ಇಲಾಖೆಯ ಆನಲೈನ್ ಸೇವೆಗಳು ನಿರ್ವಹಿಸುವುದು,ಸೆ.17 ರಿಂದ ಅ.2ರವರೆಗೆ ಗಾಂಧೀಜಿ ಜಯಂತಿ ನಿಮಿತ್ಯ ವಿಶೇಷ ಅಭಿಯಾನ ಸ್ವಚ್ಛತಾ ಅಭಿಯಾನ,ವಾರ್ಡಸಭೆ, ಗ್ರಾಮಸಭೆ ನಡೆಸಿ ತಾಪಂ ಕಚೇರಿಗೆ ಸಲ್ಲಿಸುವ ಜವಾಬ್ದಾರಿ ಕಾರ್ಯದರ್ಶಿಗಳು,ಎಸ್‌ಡಿಎಗಳಿಗೆ ಇರುತ್ತದೆ.ಆದ್ದರಿಂದ ಈ ಎಲ್ಲ ಕೆಲಸಗಳ ಒತ್ತಡದ ಮಧ್ಯೆ ನಮಗೆ ತರಬೇತಿಯನ್ನೂ ನೀಡದೇ ಕೇಂದ್ರಸ್ಥಾನದಲ್ಲಿಯೇ ಸಮೀಕ್ಷೆಗೆ ನಿಯೋಜಿಸದೇ ಬೇರೊಂದು ಸ್ಥಳಕ್ಕೆ ನೇಮಿಸಿರುವುದು ಹತ್ತಾರು ತೊಂದರೆಗೆ ಕಾರಣವಾಗುತ್ತದೆ.ಕೂಡಲೇ ಸಮೀಕ್ಷೆ ಕಾರ್ಯದಿಂದ ಗ್ರಾಪಂ ಕಾರ್ಯದರ್ಶಿ,ಎಸ್.ಡಿ.ಎ ಅವರನ್ನು ಕೈ ಬಿಡಬೇಕು ಎಂದು ವಿನಂತಿಸಿದರು.

ಮನವಿ ಸಲ್ಲಿಕೆ ಸಮಯದಲ್ಲಿ ಎಸ್.ವಾಯ್.ದ್ಯಾಮಗೊಂಡ, ಅಶೋಕ ಕೊರವೇರ, ಎ.ಎಸ್.ಬಿರಾದಾರ, ರಂಗರಾಜು, ಪಿ.ವಾಯ್.ಚಲವಾದಿ, ಜಿ.ಎಲ್.ಬಿರಾದಾರ, ಸಿ.ಬಿ.ಹೊಳಿ, ಟಿ.ಎಂ.ಕೋಲಕಾರ, ಎಸ್.ಎಸ್.ಬಂಗಾರಗುAಡ ,ಯಮನೂರಿ ಲಮಾಣಿ, ಸಿ.ಎನ್.ಊರನ್ನವರ,ಜಿ.ಎಸ್.ಬಿರಾದಾರ,ಬಿ.ಬಿ.ಬಿರಾದಾರ, ರವಿಕಾಂತ ಮೇಟಿ, ಬಾಬು ಪೋತೆಗೋಳ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ