liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು.

ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ ಮದ್ಯವೊಂದಕ್ಕೆ ಜನ ಫಿದಾ ಆಗಿದ್ದಾರೆ. ಅದು ಯಾವುದು ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ನಿರಂತರವಾಗಿ ಮದ್ಯ ಮತ್ತು ಬಿಯರ್ ಬೆಲೆ ಸಹ ಹೆಚ್ಚಾಗುತ್ತಲ್ಲೇ ಇದೆ. ಕರ್ನಾಟಕ ಸರ್ಕಾರವು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿದಾಗ, ಮದ್ಯ ಕಂಪನಿಗಳು ಹಾಗೂ ಮದ್ಯ ಪ್ರಿಯರಿಂದಲೂ ವಿರೋಧ ವ್ಯಕ್ತವಾಗುತ್ತಿತ್ತು. ಅಲ್ಲದೇ ಮದ್ಯದ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುವುದರಿಂದ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ. ಮದ್ಯದ ಬೆಲೆ ಹೆಚ್ಚಳದ ನಡುವೆಯೂ ವಿಸ್ಕಿ ಭರ್ಜರಿ ಮಾರಾಟವಾಗಿದ್ದು, ವಿಸ್ಕಿ ಮಾರಾಟದಲ್ಲಿ ಕರ್ನಾಟಕವು ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿಯೇ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಹೊಸ ದಾಖಲೆಯಾಗಿದೆ. ಇನ್ನು ಇದರಲ್ಲಿ ಶೇ.58ರಷ್ಟು ವಿಸ್ಕಿ ಮಾರಾಟವು ದಕ್ಷಿಣ ಭಾರತದ ಭಾಗದಲ್ಲೇ ಆಗಿದೆ. ಅಲ್ಲದೇ ಇದರಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ಹೇಳಲಾಗಿದೆ. ಸಿಐಎಬಿಸಿ (ಭಾರತೀಯ ಮದ್ಯ ಮಾರಾಟಗಾರರ ಒಕ್ಕೂಟ) ಅಂಕಿ-ಅಂಶವು ಈ ವಿಷಯವನ್ನು ಬಹಿರಂಗಪಡಿಸಿದೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಬಿಯರ್ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿಸ್ಕಿಗೂ ಬೇಡಿಕೆ ಹೆಚ್ಚಾಗಿದೆ. ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್ ವಿಸ್ಕಿ, ರಮ್, ಜಿನ್‌, ವೋಡ್ಕಾ, ಬ್ರಾಂಡಿ ಸೇರಿದಂತೆ ವಿವಿಧ ಮದ್ಯಗಳ ಮಾರಾಟದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಅಲ್ಲದೇ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ. ಮಾರ್ಚ್‌ 31ರ ಆರ್ಥಿಕ ವರ್ಷದಲ್ಲಿ ಅಂತ್ಯದ ವೇಳೆಗೆ ಈ ರಾಜ್ಯಗಳಲ್ಲಿ 23.18 ಕೋಟಿ ಬಾಕ್ಸ್ ವಿಸ್ಕಿ ಮಾರಾಟವಾಗಿದೆ. ಇನ್ನು ದೇಶದ ಉಳಿದ ರಾಜ್ಯಗಳು ಒಟ್ಟಾರೆ ಶೇ.42ರಷ್ಟು ಪಾಲು ಮಾರಾಟವಾಗಿದೆ ಎಂದು ಅಂಕಿ – ಅಂಶವು ಉಲ್ಲೇಖ ಮಾಡಿದೆ.

ದಕ್ಷಿಣದಲ್ಲೇ ಹೆಚ್ಚು:
ಇನ್ನು ವಿಸ್ಕಿ ಮಾರಾಟದಲ್ಲಿ ಕರ್ನಾಟಕವೇ ಪ್ರಥಮ ಸ್ಥಾನದಲ್ಲಿದ್ದಾರೆ. ದಕ್ಷಿಣ ಭಾರತದ ಐದು ರಾಜ್ಯಗಳು ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ 6.88 ಕೋಟಿ ಕೇಸ್‌(ಬಾಕ್ಸ್‌)ಗಳು ಮಾರಾಟವಾಗುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದಾದ ನಂತರದಲ್ಲಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ಸ್ಥಾನ ಪಡೆದಿವೆ. ಇನ್ನು ಮೊದಲ ಆರು ಸ್ಥಾನಗಳಲ್ಲಿ ದಕ್ಷಿಣ ಭಾರತದ ಪ್ರದೇಶಗಳೇ ಇವೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ