liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು.

ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ ಮದ್ಯವೊಂದಕ್ಕೆ ಜನ ಫಿದಾ ಆಗಿದ್ದಾರೆ. ಅದು ಯಾವುದು ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ನಿರಂತರವಾಗಿ ಮದ್ಯ ಮತ್ತು ಬಿಯರ್ ಬೆಲೆ ಸಹ ಹೆಚ್ಚಾಗುತ್ತಲ್ಲೇ ಇದೆ. ಕರ್ನಾಟಕ ಸರ್ಕಾರವು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿದಾಗ, ಮದ್ಯ ಕಂಪನಿಗಳು ಹಾಗೂ ಮದ್ಯ ಪ್ರಿಯರಿಂದಲೂ ವಿರೋಧ ವ್ಯಕ್ತವಾಗುತ್ತಿತ್ತು. ಅಲ್ಲದೇ ಮದ್ಯದ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುವುದರಿಂದ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ. ಮದ್ಯದ ಬೆಲೆ ಹೆಚ್ಚಳದ ನಡುವೆಯೂ ವಿಸ್ಕಿ ಭರ್ಜರಿ ಮಾರಾಟವಾಗಿದ್ದು, ವಿಸ್ಕಿ ಮಾರಾಟದಲ್ಲಿ ಕರ್ನಾಟಕವು ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿಯೇ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಹೊಸ ದಾಖಲೆಯಾಗಿದೆ. ಇನ್ನು ಇದರಲ್ಲಿ ಶೇ.58ರಷ್ಟು ವಿಸ್ಕಿ ಮಾರಾಟವು ದಕ್ಷಿಣ ಭಾರತದ ಭಾಗದಲ್ಲೇ ಆಗಿದೆ. ಅಲ್ಲದೇ ಇದರಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ಹೇಳಲಾಗಿದೆ. ಸಿಐಎಬಿಸಿ (ಭಾರತೀಯ ಮದ್ಯ ಮಾರಾಟಗಾರರ ಒಕ್ಕೂಟ) ಅಂಕಿ-ಅಂಶವು ಈ ವಿಷಯವನ್ನು ಬಹಿರಂಗಪಡಿಸಿದೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಬಿಯರ್ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿಸ್ಕಿಗೂ ಬೇಡಿಕೆ ಹೆಚ್ಚಾಗಿದೆ. ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್ ವಿಸ್ಕಿ, ರಮ್, ಜಿನ್‌, ವೋಡ್ಕಾ, ಬ್ರಾಂಡಿ ಸೇರಿದಂತೆ ವಿವಿಧ ಮದ್ಯಗಳ ಮಾರಾಟದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಅಲ್ಲದೇ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ. ಮಾರ್ಚ್‌ 31ರ ಆರ್ಥಿಕ ವರ್ಷದಲ್ಲಿ ಅಂತ್ಯದ ವೇಳೆಗೆ ಈ ರಾಜ್ಯಗಳಲ್ಲಿ 23.18 ಕೋಟಿ ಬಾಕ್ಸ್ ವಿಸ್ಕಿ ಮಾರಾಟವಾಗಿದೆ. ಇನ್ನು ದೇಶದ ಉಳಿದ ರಾಜ್ಯಗಳು ಒಟ್ಟಾರೆ ಶೇ.42ರಷ್ಟು ಪಾಲು ಮಾರಾಟವಾಗಿದೆ ಎಂದು ಅಂಕಿ – ಅಂಶವು ಉಲ್ಲೇಖ ಮಾಡಿದೆ.

ದಕ್ಷಿಣದಲ್ಲೇ ಹೆಚ್ಚು:
ಇನ್ನು ವಿಸ್ಕಿ ಮಾರಾಟದಲ್ಲಿ ಕರ್ನಾಟಕವೇ ಪ್ರಥಮ ಸ್ಥಾನದಲ್ಲಿದ್ದಾರೆ. ದಕ್ಷಿಣ ಭಾರತದ ಐದು ರಾಜ್ಯಗಳು ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ 6.88 ಕೋಟಿ ಕೇಸ್‌(ಬಾಕ್ಸ್‌)ಗಳು ಮಾರಾಟವಾಗುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದಾದ ನಂತರದಲ್ಲಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ಸ್ಥಾನ ಪಡೆದಿವೆ. ಇನ್ನು ಮೊದಲ ಆರು ಸ್ಥಾನಗಳಲ್ಲಿ ದಕ್ಷಿಣ ಭಾರತದ ಪ್ರದೇಶಗಳೇ ಇವೆ.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ