ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು.

ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ ಅವರ ಗೆಲುವಿನಲ್ಲಿ ಶಾಂತಗೌಡರ ಪಾತ್ರ ಅತ್ಯಂತ ಹಿರಿದಾಗಿದೆ.ಅವರು ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಶಾಸಕರಾಗಿ ಆಯ್ಕೆಯಾಗಿ ಜನಸೇವೆ ಮಾಡಲಿ ಎಂದು ಹೇಳಿದರು.

ಇನ್ನೋರ್ವ ಮುಖಂಡ ಬಸವರಾಜ ಭಜಂತ್ರಿ ಮಾತನಾಡಿ, ಶಾಂತಗೌಡ ಪಾಟೀಲ ನಡಹಳ್ಳಿಯವರು ಕಾಂಗ್ರೆಸ್ ಪಕ್ಷದ ಸಲುವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ.ಅವರು ಮುಂಬರುವ ದಿನಮಾನಗಳಲ್ಲಿ ಉನ್ನತ ಸ್ಥಾನದಲ್ಲಿ ಪಕ್ಷದ ನಾಯಕರು ಗುರುತಿಸಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಶಾಂತಗೌಡ ಪಾಟೀಲರು ಒಳ್ಳೆಯ ಸಮಾಜಸೇವಕರು,ಹೋರಾಟಗಾರರು.ಮುಂಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ.ಸಕ್ರಿಯ ರಾಜಕಾರಣದಿಂದ ದೂರವಾದರೆ ಅಭಿಮಾನಿಗಳು ಅನಾಥರಾಗುತ್ತಾರೆ.ಅವರ ಸಲುವಾಗಿ ರಾಜಕಾರಣದಲ್ಲಿ ಇರಿ ಎಂದು ಸಲಹೆ ಮಾಡಿದರು.

ಪಂಚಮಸಾಲಿ ಸಮಾಜದ ಯುವ ಮುಖಂಡ ಕಾಮರಾಜ ಬಿರಾದಾರ ಮಾತನಾಡಿ, ಸಮಾಜ ಸೇವೆ,ಹೋರಾಟದ ಬದುಕಿನ ಮೂಲಕ ಬೆಳೆದಿರುವ ಶಾಂತಗೌಡರು ಮುಂಬರುವ ದಿನಗಳಲ್ಲಿ ತಮ್ಮ ಬಳಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡುವ ಶಕ್ತಿಯನ್ನು ಇನ್ನಷ್ಟು ಭಗವಂತ ಅವರಿಗೆ ಕರುಣಿಸಲಿ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ತಿಪ್ಪಣ್ಣ ದೊಡಮನಿ, ಶಾಂತಗೌಡ ಪಾಟೀಲ ನಡಹಳ್ಳಿ ಅವರ ಆಪ್ತ ಹುಲಗಪ್ಪ ನಾಯ್ಕಮಕ್ಕಳ,ಮುಖಂಡ ಮಲ್ಲು ಅಪರಾಧಿ, ಅಬ್ದುಲಮಜೀದ ಶಿರೋಳ,ಗ್ರಾಪಂ ಸದಸ್ಯ ಅಭಿನಂದನ ಕಡೇಹಳ್ಳಿ, ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ , ಅನ್ಯಾಯ,ಭ್ರಷ್ಟಾಚಾರ ಕಂಡರೆ ನನಗೆ ಸಹಿಸುವುದಕ್ಕೆ ಆಗುವುದಿಲ್ಲ.ನಾನು ಸಕ್ರಿಯ ರಾಜಕಾರಣದಿಂದ ದೂರವು ಆಗಿಲ್ಲ.ಕುಟುಂಬ ಸದಸ್ಯರಿಗೆ ಸಮಯ ಕೊಡುವುದಕ್ಕಾಗಿ ತುಸು ಅಂತರವಿದ್ದೇನೆ.ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಪ್ರತಿ ಹಳ್ಳಿಗೂ ಭೇಟಿ ನೀಡಿ ಎಲ್ಲರ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇವತ್ತಿನ ರಾಜಕಾರಣ ತುಂಬಾ ಹದಗೆಟ್ಟಿದೆ.ತತ್ವಜ್ಞಾನಿ ಪ್ಲೇಟೋ ಹೇಳಿದಂತೆ ರಾಜಕಾರಣ ಮಾಡುವವನಿಗೆ ಕುಟುಂಬ ಇರಬಾರದು ಎಂದಿದ್ದಾರೆ.ಕುಟುಂಬ ಇದ್ದರೆ ಅವರಲ್ಲಿ ಸ್ವಾರ್ಥ ಮನೆ ಮಾಡುತ್ತದೆ.ಹೆಂಡತಿ, ಮಗ, ಮಗಳನ್ನು ಎಂಎಲ್‌ಎ ಎಂದು ಬೆಳೆಸಿಕೊಂಡು ಹೋಗುತ್ತಾರೆ.ಆದರೆ ನಿಜವಾಗಿ ದುಡಿದವರಿಗೆ ನ್ಯಾಯ ಸಿಗುವುದಿಲ್ಲ.ಯುವಕರು ಶಾಸಕರು,ಸಂಸದರ ಮಕ್ಕಳೇ ಮರಳಿ ಶಾಸಕರಾಗಬೇಕು ಎಂಬ ಮನಸ್ಥಿತಿಯಿಂದ ಯುವಕರು ಹೊರಬಂದು ಬೇರೆಯವರನ್ನು ಬೆಳೆಸುವುದಕ್ಕೆ ಮುಂದಾಗಬೇಕು.ಹಣ ಮಾಡುವುದಕ್ಕಾಗಿ ರಾಜಕಾರಣಕ್ಕೆ ಬರಬೇಡಿ.ಜನಸೇವೆ ಮಾಡಲು ರಾಜಕಾರಣ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ರಾಚಯ್ಯ ಹಿರೇಮಠ, ವಾಲ್ಮೀಕಿ ಸಮಾಜದ ಅಧ್ಯಕ್ಷ ಹುಲಗಪ್ಪ ನಾಯ್ಕಮಕ್ಕಳ,ಯಲ್ಲಪ್ಪ ಮ್ಯಾಗೇರಿ, ಗ್ರಾಪಂ ಸದಸ್ಯ ಮಂಜು ಪೂಜಾರಿ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಶಾಂತಗೌಡ ಪಾಟೀಲ ನಡಹಳ್ಳಿ ಅವರ ಅಭಿಮಾನಿಗಳು ಇದ್ದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ