ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು.

ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ ಅವರ ಗೆಲುವಿನಲ್ಲಿ ಶಾಂತಗೌಡರ ಪಾತ್ರ ಅತ್ಯಂತ ಹಿರಿದಾಗಿದೆ.ಅವರು ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಶಾಸಕರಾಗಿ ಆಯ್ಕೆಯಾಗಿ ಜನಸೇವೆ ಮಾಡಲಿ ಎಂದು ಹೇಳಿದರು.

ಇನ್ನೋರ್ವ ಮುಖಂಡ ಬಸವರಾಜ ಭಜಂತ್ರಿ ಮಾತನಾಡಿ, ಶಾಂತಗೌಡ ಪಾಟೀಲ ನಡಹಳ್ಳಿಯವರು ಕಾಂಗ್ರೆಸ್ ಪಕ್ಷದ ಸಲುವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ.ಅವರು ಮುಂಬರುವ ದಿನಮಾನಗಳಲ್ಲಿ ಉನ್ನತ ಸ್ಥಾನದಲ್ಲಿ ಪಕ್ಷದ ನಾಯಕರು ಗುರುತಿಸಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಶಾಂತಗೌಡ ಪಾಟೀಲರು ಒಳ್ಳೆಯ ಸಮಾಜಸೇವಕರು,ಹೋರಾಟಗಾರರು.ಮುಂಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ.ಸಕ್ರಿಯ ರಾಜಕಾರಣದಿಂದ ದೂರವಾದರೆ ಅಭಿಮಾನಿಗಳು ಅನಾಥರಾಗುತ್ತಾರೆ.ಅವರ ಸಲುವಾಗಿ ರಾಜಕಾರಣದಲ್ಲಿ ಇರಿ ಎಂದು ಸಲಹೆ ಮಾಡಿದರು.

ಪಂಚಮಸಾಲಿ ಸಮಾಜದ ಯುವ ಮುಖಂಡ ಕಾಮರಾಜ ಬಿರಾದಾರ ಮಾತನಾಡಿ, ಸಮಾಜ ಸೇವೆ,ಹೋರಾಟದ ಬದುಕಿನ ಮೂಲಕ ಬೆಳೆದಿರುವ ಶಾಂತಗೌಡರು ಮುಂಬರುವ ದಿನಗಳಲ್ಲಿ ತಮ್ಮ ಬಳಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡುವ ಶಕ್ತಿಯನ್ನು ಇನ್ನಷ್ಟು ಭಗವಂತ ಅವರಿಗೆ ಕರುಣಿಸಲಿ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ತಿಪ್ಪಣ್ಣ ದೊಡಮನಿ, ಶಾಂತಗೌಡ ಪಾಟೀಲ ನಡಹಳ್ಳಿ ಅವರ ಆಪ್ತ ಹುಲಗಪ್ಪ ನಾಯ್ಕಮಕ್ಕಳ,ಮುಖಂಡ ಮಲ್ಲು ಅಪರಾಧಿ, ಅಬ್ದುಲಮಜೀದ ಶಿರೋಳ,ಗ್ರಾಪಂ ಸದಸ್ಯ ಅಭಿನಂದನ ಕಡೇಹಳ್ಳಿ, ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ , ಅನ್ಯಾಯ,ಭ್ರಷ್ಟಾಚಾರ ಕಂಡರೆ ನನಗೆ ಸಹಿಸುವುದಕ್ಕೆ ಆಗುವುದಿಲ್ಲ.ನಾನು ಸಕ್ರಿಯ ರಾಜಕಾರಣದಿಂದ ದೂರವು ಆಗಿಲ್ಲ.ಕುಟುಂಬ ಸದಸ್ಯರಿಗೆ ಸಮಯ ಕೊಡುವುದಕ್ಕಾಗಿ ತುಸು ಅಂತರವಿದ್ದೇನೆ.ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಪ್ರತಿ ಹಳ್ಳಿಗೂ ಭೇಟಿ ನೀಡಿ ಎಲ್ಲರ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇವತ್ತಿನ ರಾಜಕಾರಣ ತುಂಬಾ ಹದಗೆಟ್ಟಿದೆ.ತತ್ವಜ್ಞಾನಿ ಪ್ಲೇಟೋ ಹೇಳಿದಂತೆ ರಾಜಕಾರಣ ಮಾಡುವವನಿಗೆ ಕುಟುಂಬ ಇರಬಾರದು ಎಂದಿದ್ದಾರೆ.ಕುಟುಂಬ ಇದ್ದರೆ ಅವರಲ್ಲಿ ಸ್ವಾರ್ಥ ಮನೆ ಮಾಡುತ್ತದೆ.ಹೆಂಡತಿ, ಮಗ, ಮಗಳನ್ನು ಎಂಎಲ್‌ಎ ಎಂದು ಬೆಳೆಸಿಕೊಂಡು ಹೋಗುತ್ತಾರೆ.ಆದರೆ ನಿಜವಾಗಿ ದುಡಿದವರಿಗೆ ನ್ಯಾಯ ಸಿಗುವುದಿಲ್ಲ.ಯುವಕರು ಶಾಸಕರು,ಸಂಸದರ ಮಕ್ಕಳೇ ಮರಳಿ ಶಾಸಕರಾಗಬೇಕು ಎಂಬ ಮನಸ್ಥಿತಿಯಿಂದ ಯುವಕರು ಹೊರಬಂದು ಬೇರೆಯವರನ್ನು ಬೆಳೆಸುವುದಕ್ಕೆ ಮುಂದಾಗಬೇಕು.ಹಣ ಮಾಡುವುದಕ್ಕಾಗಿ ರಾಜಕಾರಣಕ್ಕೆ ಬರಬೇಡಿ.ಜನಸೇವೆ ಮಾಡಲು ರಾಜಕಾರಣ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ರಾಚಯ್ಯ ಹಿರೇಮಠ, ವಾಲ್ಮೀಕಿ ಸಮಾಜದ ಅಧ್ಯಕ್ಷ ಹುಲಗಪ್ಪ ನಾಯ್ಕಮಕ್ಕಳ,ಯಲ್ಲಪ್ಪ ಮ್ಯಾಗೇರಿ, ಗ್ರಾಪಂ ಸದಸ್ಯ ಮಂಜು ಪೂಜಾರಿ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಶಾಂತಗೌಡ ಪಾಟೀಲ ನಡಹಳ್ಳಿ ಅವರ ಅಭಿಮಾನಿಗಳು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ