ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು.

ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ ಅವರ ಗೆಲುವಿನಲ್ಲಿ ಶಾಂತಗೌಡರ ಪಾತ್ರ ಅತ್ಯಂತ ಹಿರಿದಾಗಿದೆ.ಅವರು ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಶಾಸಕರಾಗಿ ಆಯ್ಕೆಯಾಗಿ ಜನಸೇವೆ ಮಾಡಲಿ ಎಂದು ಹೇಳಿದರು.

ಇನ್ನೋರ್ವ ಮುಖಂಡ ಬಸವರಾಜ ಭಜಂತ್ರಿ ಮಾತನಾಡಿ, ಶಾಂತಗೌಡ ಪಾಟೀಲ ನಡಹಳ್ಳಿಯವರು ಕಾಂಗ್ರೆಸ್ ಪಕ್ಷದ ಸಲುವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ.ಅವರು ಮುಂಬರುವ ದಿನಮಾನಗಳಲ್ಲಿ ಉನ್ನತ ಸ್ಥಾನದಲ್ಲಿ ಪಕ್ಷದ ನಾಯಕರು ಗುರುತಿಸಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಶಾಂತಗೌಡ ಪಾಟೀಲರು ಒಳ್ಳೆಯ ಸಮಾಜಸೇವಕರು,ಹೋರಾಟಗಾರರು.ಮುಂಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ.ಸಕ್ರಿಯ ರಾಜಕಾರಣದಿಂದ ದೂರವಾದರೆ ಅಭಿಮಾನಿಗಳು ಅನಾಥರಾಗುತ್ತಾರೆ.ಅವರ ಸಲುವಾಗಿ ರಾಜಕಾರಣದಲ್ಲಿ ಇರಿ ಎಂದು ಸಲಹೆ ಮಾಡಿದರು.

ಪಂಚಮಸಾಲಿ ಸಮಾಜದ ಯುವ ಮುಖಂಡ ಕಾಮರಾಜ ಬಿರಾದಾರ ಮಾತನಾಡಿ, ಸಮಾಜ ಸೇವೆ,ಹೋರಾಟದ ಬದುಕಿನ ಮೂಲಕ ಬೆಳೆದಿರುವ ಶಾಂತಗೌಡರು ಮುಂಬರುವ ದಿನಗಳಲ್ಲಿ ತಮ್ಮ ಬಳಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡುವ ಶಕ್ತಿಯನ್ನು ಇನ್ನಷ್ಟು ಭಗವಂತ ಅವರಿಗೆ ಕರುಣಿಸಲಿ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ತಿಪ್ಪಣ್ಣ ದೊಡಮನಿ, ಶಾಂತಗೌಡ ಪಾಟೀಲ ನಡಹಳ್ಳಿ ಅವರ ಆಪ್ತ ಹುಲಗಪ್ಪ ನಾಯ್ಕಮಕ್ಕಳ,ಮುಖಂಡ ಮಲ್ಲು ಅಪರಾಧಿ, ಅಬ್ದುಲಮಜೀದ ಶಿರೋಳ,ಗ್ರಾಪಂ ಸದಸ್ಯ ಅಭಿನಂದನ ಕಡೇಹಳ್ಳಿ, ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ , ಅನ್ಯಾಯ,ಭ್ರಷ್ಟಾಚಾರ ಕಂಡರೆ ನನಗೆ ಸಹಿಸುವುದಕ್ಕೆ ಆಗುವುದಿಲ್ಲ.ನಾನು ಸಕ್ರಿಯ ರಾಜಕಾರಣದಿಂದ ದೂರವು ಆಗಿಲ್ಲ.ಕುಟುಂಬ ಸದಸ್ಯರಿಗೆ ಸಮಯ ಕೊಡುವುದಕ್ಕಾಗಿ ತುಸು ಅಂತರವಿದ್ದೇನೆ.ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಪ್ರತಿ ಹಳ್ಳಿಗೂ ಭೇಟಿ ನೀಡಿ ಎಲ್ಲರ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇವತ್ತಿನ ರಾಜಕಾರಣ ತುಂಬಾ ಹದಗೆಟ್ಟಿದೆ.ತತ್ವಜ್ಞಾನಿ ಪ್ಲೇಟೋ ಹೇಳಿದಂತೆ ರಾಜಕಾರಣ ಮಾಡುವವನಿಗೆ ಕುಟುಂಬ ಇರಬಾರದು ಎಂದಿದ್ದಾರೆ.ಕುಟುಂಬ ಇದ್ದರೆ ಅವರಲ್ಲಿ ಸ್ವಾರ್ಥ ಮನೆ ಮಾಡುತ್ತದೆ.ಹೆಂಡತಿ, ಮಗ, ಮಗಳನ್ನು ಎಂಎಲ್‌ಎ ಎಂದು ಬೆಳೆಸಿಕೊಂಡು ಹೋಗುತ್ತಾರೆ.ಆದರೆ ನಿಜವಾಗಿ ದುಡಿದವರಿಗೆ ನ್ಯಾಯ ಸಿಗುವುದಿಲ್ಲ.ಯುವಕರು ಶಾಸಕರು,ಸಂಸದರ ಮಕ್ಕಳೇ ಮರಳಿ ಶಾಸಕರಾಗಬೇಕು ಎಂಬ ಮನಸ್ಥಿತಿಯಿಂದ ಯುವಕರು ಹೊರಬಂದು ಬೇರೆಯವರನ್ನು ಬೆಳೆಸುವುದಕ್ಕೆ ಮುಂದಾಗಬೇಕು.ಹಣ ಮಾಡುವುದಕ್ಕಾಗಿ ರಾಜಕಾರಣಕ್ಕೆ ಬರಬೇಡಿ.ಜನಸೇವೆ ಮಾಡಲು ರಾಜಕಾರಣ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ರಾಚಯ್ಯ ಹಿರೇಮಠ, ವಾಲ್ಮೀಕಿ ಸಮಾಜದ ಅಧ್ಯಕ್ಷ ಹುಲಗಪ್ಪ ನಾಯ್ಕಮಕ್ಕಳ,ಯಲ್ಲಪ್ಪ ಮ್ಯಾಗೇರಿ, ಗ್ರಾಪಂ ಸದಸ್ಯ ಮಂಜು ಪೂಜಾರಿ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಶಾಂತಗೌಡ ಪಾಟೀಲ ನಡಹಳ್ಳಿ ಅವರ ಅಭಿಮಾನಿಗಳು ಇದ್ದರು.

Latest News

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ