ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಉದ್ದೇಶಕ್ಕೆ ಅಷ್ಟೇ ಸಾಲ ಕೊಡುವುದಕ್ಕೆ ಸಿಮೀತವಾಗದೇ ಅನ್ಯ ಉದ್ದೇಶಕ್ಕೂ ಸಾಲ ಸೌಲಭ್ಯ ಒದಗಿಸಬೇಕು ಎಂದು ವಿಡಿಸಿಸಿ ಬ್ಯಾಂಕ್ ಅಭಿವೃದ್ದಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಈಚೇಗೆ ಏರ್ಪಡಿಸಿದ್ದ ತಾಲ್ಲೂಕು ಪ್ಯಾಕ್ಸುಗಳ ಮಟ್ಟದಲ್ಲಿ ವ್ಯಾಪಾರ ಅಭಿವೃದ್ದಿ ಯೋಜನೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯಾಪಾರ ಅಭಿವೃದ್ಧಿಯ ಜಿಲ್ಲೆಯಲ್ಲಿ ಪ್ಯಾಕ್ಸ್ ಮಟ್ಟದಲ್ಲಿ ಉತ್ತಮವಾಗಿ ಪ್ರಗತಿಯಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ರಾಷ್ಟಿçÃಕೃತ ಬ್ಯಾಂಕುಗಳAತೆ ಉತ್ತಮ ಸೇವೆ ನೀಡಬೇಕು.ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಪಿಕೆಪಿಎಸಗಳ ಮೂಲಕ ಸೂಪರ್ ಬಜಾರ್, ಗೊಬ್ಬರ ವ್ಯಾಪಾರ,ಜನೌಷಧಿ ಕೇಂದ್ರ ಹೀಗೆ ಬ್ಯಾಂಕೇತರ ಚಟುವಟಿಕೆಗಳಿಗೆ ಒತ್ತು ನೀಡಿ ಗ್ರಾಮದ ಜನರಿಗೆ ಅನುಕೂಲಕರ ಸೇವೆಗಳನ್ನು ಪ್ಯಾಕ್ಸಗಳಿಂದಲೇ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಆರ್.ಬಿ.ಗುಡದಿನ್ನಿ ಮಾತನಾಡಿ, ಬಿಡಿಪಿ ವ್ಯವಹಾರವನ್ನು ಕಡ್ಡಾಯವಾಗಿ ಪಿಕೆಪಿಎಸ್‌ಗಳ ವ್ಯಾಪ್ತಿಯಲ್ಲಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು.43 ಪ್ಯಾಕ್ಸುಗಳು ಗಣಕೀಕೃತವಾಗುವ ಹಂತದಲ್ಲಿದ್ದು ಬೆಳೆಸಾಲ ಮಾತ್ರವಲ್ಲದೇ ಎಲ್ಲ ರೀತಿಯ ಸಾಲಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಕುದರಿ ಸಾಲವಾಡಗಿ ಮಾಜಿ ಕಾರ್ಯದರ್ಶಿ ಮಲ್ಲಣ್ಣ ಅಣೆಪ್ಪನವರ ಮಾತನಾಡಿದರು.ಆಡಳಿತ ಮಂಡಳಿ ಸಲಹೆಗಾರ ಜೆ.ಕೊಟ್ರೇಶಿ, ಮಾಜಿ ನಿರ್ದೇಶಕ ಎಸ್.ಬಿ.ಪಾಟೀಲ, ಸಹಾಯಕ ನಿಬಂಧಕ ಚೇತನ ಭಾವಿಕಟ್ಟಿ,ತರಬೇತಿ ಸಂಯೋಜಕ ಆರ್.ಎಂ.ಬಣಕಾರ, ಉಪಪ್ರಧಾನ ವ್ಯವಸ್ಥಾಪಕ ಎಂ.ಜಿ.ಬಿರಾದಾರ,ಮುಖAಡ ಸೋಮನಗೌಡ ಬಿರಾದಾರ,ಮುದ್ದೇಬಿಹಾಳ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪಿ.ಎಸ್.ಪಾಟೀಲ, ನೋಡಲ ಅಧಿಕಾರಿ ಎನ್.ಜಿ.ಜನಿವಾರ,ಮಲ್ಲಣ್ಣ ಅಗಸರ,ಸಿ.ಬಿ.ಮಲಘಾಣ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ