ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು.

ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವರಾತ್ರೋತ್ಸವ,ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ,ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕೀಯ ಶಕ್ತಿ ಯಾವ ಮಠಗಳು ಎರಡನೆ ಹಂತದ ನಾಯಕರನ್ನು ಬೆಳೆಸುವ ಕಾರ್ಯ ಯರಝರಿ ಮಠ ಮಾಡಿದೆ.ಯರಝರಿಯ ಮಠ ಎರಡನೇ ಸಾಲಿನ ನಾಯಕರನ್ನು ಬೆಳೆಸುವ ಮಠವಾಗಿದೆ. ದೇಶದ ಭವಿಷ್ಯ ಪ್ರತಿಭಾವಂತ ಮಕ್ಕಳ ಮೇಲಿದೆ.ಇಂದಿನ ಮಕ್ಕಳು ಗೂಗಲ್ ಮಾತುಗಳನ್ನು ಕೇಳುವ ಮಕ್ಕಳಾಗಿದ್ದಾರೆ.ಆದರೆ ಯರಝರಿಯ ಮಠ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಬ್ಬ ಹರಿದಿನಗಳು,ನಮ್ಮ ಪರಂಪರೆಯ ಕುರಿತು ತಿಳಿಸಿಕೊಡುತ್ತಿದ್ದು ತಂದೆ ತಾಯಿ ಸಂಬAಧಗಳ ಮೌಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾಜ ಸೇವಕ ಎಂ.ಎನ್.ಮದರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ಮಕ್ಕಳಿಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪಾಸಿಂಗ್ ಪ್ಯಾಕೇಜ್ ಪುಸ್ತಕಗಳನ್ನು ತಾಲ್ಲೂಕಿನ 4000 ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಮಾಡಲಾಗುತ್ತದೆ. ಒಂದೊAದು ಪುಸ್ತಕ 735 ಪುಟಗಳನ್ನು ಹೊಂದಿರಲಿದೆ ಎಂದರು.

ಜಾತ್ರಾ ಕಮೀಟಿ ಸ್ವಾಗತ ಸಮೀತಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಮಾತನಾಡಿ , ಮಕ್ಕಳಿಗೆ ದುಶ್ಚಟಗಳನ್ನು ದೂರ ಮಾಡಿ ಶಿಕ್ಷಣವಂತರನ್ನಾಗಿಸಬೇಕು.ಯರಝರಿ ಮಠದ ಪರಂಪರೆಯಲ್ಲಿ ಇದೇ ವರ್ಷದಿಂದ ಗ್ರಾಮೀಣ ಭಾಗದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಂದೇ ವೇದಿಕೆಯಲ್ಲಿ ಕುರುಬ ಸಮಾಜದ ಮುಖಂಡರ ಸಂಗಮ:

ಮುದ್ದೇಬಿಹಾಳ ಮತಕ್ಷೇತ್ರದ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಖಿಲಾರಹಟ್ಟಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಸಮಾಜ ಸೇವಕ ಎಂ.ಎನ್.ಮದರಿ, ಜಟ್ಟಗಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಯರಝರಿಯಲ್ಲಿ ಇಪ್ಪತ್ತು ವರ್ಷಗಳಿಂದ ಸಾಮೂಹಿಕ ವಿವಾಹ ಸಂಘಟಿಸುತ್ತಿರುವ ಮಲಕೇಂದ್ರಗೌಡ ಪಾಟೀಲ ಅವರು ಹಲವು ದಿನಗಳ ಬಳಿಕ ಕುರುಬ ಸಮಾಜದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು.

ನಮ್ಮದು ಸಮಾಜ ದೊಡ್ಡದು ಎನ್ನಬೇಡಿ.ಗ್ರಾಮ ಪಂಚಾಯತಿ ಸ್ಥಾನವೇ ಸಮುದ್ರ ಎಂದು ತಿಳಿದುಕೊಳ್ಳಬೇಡಿ.ನಿಮ್ಮಲ್ಲಿರುವ ಒಗ್ಗಟ್ಟನ್ನು ಬಲಪಡಿಸಿ.ನಾನು ಕೈ ಹಿಡಿದು ಮೇಲೆತ್ತುವವನೇ ಹೊರತರು ಯಾರ ಕಾಲನ್ನು ಹಿಡಿದು ಜಗ್ಗಿಲ್ಲ.ಮತಕ್ಷೇತ್ರದಲ್ಲಿ ಸಮಾಜದವರಿಂದ ಕ್ರಾಂತಿಯಾಗಬೇಕು.
—-ಮಲ್ಲಾರಲಿAಗ ಸ್ವಾಮೀಜಿ,ಯಲ್ಲಾಲಿಂಗೇಶ್ವರ ಮಠ,ಯರಝರಿ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ