ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ

ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು.

ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನವರಾತ್ರೋತ್ಸವ,ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ,ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಕೀಯ ಶಕ್ತಿ ಯಾವ ಮಠಗಳು ಎರಡನೆ ಹಂತದ ನಾಯಕರನ್ನು ಬೆಳೆಸುವ ಕಾರ್ಯ ಯರಝರಿ ಮಠ ಮಾಡಿದೆ.ಯರಝರಿಯ ಮಠ ಎರಡನೇ ಸಾಲಿನ ನಾಯಕರನ್ನು ಬೆಳೆಸುವ ಮಠವಾಗಿದೆ. ದೇಶದ ಭವಿಷ್ಯ ಪ್ರತಿಭಾವಂತ ಮಕ್ಕಳ ಮೇಲಿದೆ.ಇಂದಿನ ಮಕ್ಕಳು ಗೂಗಲ್ ಮಾತುಗಳನ್ನು ಕೇಳುವ ಮಕ್ಕಳಾಗಿದ್ದಾರೆ.ಆದರೆ ಯರಝರಿಯ ಮಠ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಬ್ಬ ಹರಿದಿನಗಳು,ನಮ್ಮ ಪರಂಪರೆಯ ಕುರಿತು ತಿಳಿಸಿಕೊಡುತ್ತಿದ್ದು ತಂದೆ ತಾಯಿ ಸಂಬAಧಗಳ ಮೌಲ್ಯಗಳನ್ನು ಸಾರುತ್ತಿದೆ ಎಂದರು.

ಸಮಾಜ ಸೇವಕ ಎಂ.ಎನ್.ಮದರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ಮಕ್ಕಳಿಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪಾಸಿಂಗ್ ಪ್ಯಾಕೇಜ್ ಪುಸ್ತಕಗಳನ್ನು ತಾಲ್ಲೂಕಿನ 4000 ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಮಾಡಲಾಗುತ್ತದೆ. ಒಂದೊAದು ಪುಸ್ತಕ 735 ಪುಟಗಳನ್ನು ಹೊಂದಿರಲಿದೆ ಎಂದರು.

ಜಾತ್ರಾ ಕಮೀಟಿ ಸ್ವಾಗತ ಸಮೀತಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ ಮಾತನಾಡಿ , ಮಕ್ಕಳಿಗೆ ದುಶ್ಚಟಗಳನ್ನು ದೂರ ಮಾಡಿ ಶಿಕ್ಷಣವಂತರನ್ನಾಗಿಸಬೇಕು.ಯರಝರಿ ಮಠದ ಪರಂಪರೆಯಲ್ಲಿ ಇದೇ ವರ್ಷದಿಂದ ಗ್ರಾಮೀಣ ಭಾಗದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಂದೇ ವೇದಿಕೆಯಲ್ಲಿ ಕುರುಬ ಸಮಾಜದ ಮುಖಂಡರ ಸಂಗಮ:

ಮುದ್ದೇಬಿಹಾಳ ಮತಕ್ಷೇತ್ರದ ಅಡವಿ ಹುಲಗಬಾಳದ ಬೀರಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಖಿಲಾರಹಟ್ಟಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಸಮಾಜ ಸೇವಕ ಎಂ.ಎನ್.ಮದರಿ, ಜಟ್ಟಗಿ ಭಾಗದಲ್ಲಿ ಸಾಮೂಹಿಕ ವಿವಾಹ ಸಂಘಟಿಸುವ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಯರಝರಿಯಲ್ಲಿ ಇಪ್ಪತ್ತು ವರ್ಷಗಳಿಂದ ಸಾಮೂಹಿಕ ವಿವಾಹ ಸಂಘಟಿಸುತ್ತಿರುವ ಮಲಕೇಂದ್ರಗೌಡ ಪಾಟೀಲ ಅವರು ಹಲವು ದಿನಗಳ ಬಳಿಕ ಕುರುಬ ಸಮಾಜದ ಮುಖಂಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು.

ನಮ್ಮದು ಸಮಾಜ ದೊಡ್ಡದು ಎನ್ನಬೇಡಿ.ಗ್ರಾಮ ಪಂಚಾಯತಿ ಸ್ಥಾನವೇ ಸಮುದ್ರ ಎಂದು ತಿಳಿದುಕೊಳ್ಳಬೇಡಿ.ನಿಮ್ಮಲ್ಲಿರುವ ಒಗ್ಗಟ್ಟನ್ನು ಬಲಪಡಿಸಿ.ನಾನು ಕೈ ಹಿಡಿದು ಮೇಲೆತ್ತುವವನೇ ಹೊರತರು ಯಾರ ಕಾಲನ್ನು ಹಿಡಿದು ಜಗ್ಗಿಲ್ಲ.ಮತಕ್ಷೇತ್ರದಲ್ಲಿ ಸಮಾಜದವರಿಂದ ಕ್ರಾಂತಿಯಾಗಬೇಕು.
—-ಮಲ್ಲಾರಲಿAಗ ಸ್ವಾಮೀಜಿ,ಯಲ್ಲಾಲಿಂಗೇಶ್ವರ ಮಠ,ಯರಝರಿ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ