ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು.

ಸಾಲದ ಬಾಧೆ ತಾಳದೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ(ಬೊಮ್ಮಣಗಿ)ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗ ಅವರು ಮಾತನಾಡಿದರು.ಈ ಸರ್ಕಾರದಲ್ಲಿ ಅಧಿಕಾರಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.ರೈತ ಆತ್ಮಹತ್ಯೆ ವಿಷಯ ತಿಳಿದ ತಕ್ಷಣ ತಹಶೀಲ್ದಾರ್‌ರು, ಪಿಎಸ್‌ಐ,ಕೃಷಿ ಇಲಾಖೆ ಅಧಿಕಾರಿ ಭೇಟಿ ನೀಡಿ ವರದಿ ನೀಡಬೇಕು.ಆದರೆ ಈವರೆಗೂ ಅಧಿಕಾರಿಗಳು ಭೇಟಿ ನೀಡದೆ ಇರುವುದು ಈ ಕ್ಷೇತ್ರದ ದುರಂತ ಎಂದರು.

ನಾನಿಲ್ಲಿ ರಾಜಕಾರಣ ಮಾಡುವುದಕ್ಕೆ ಬಂದಿಲ್ಲ.ರೈತ ಆತ್ಮಹತ್ಯೆ ಮಾಡಿಕೊಂಡಾಗ ಕನಿಷ್ಠ ಪಕ್ಷ ಅವರ ಮನೆಗೆ ತೆರಳಿ ಸಾಂತ್ವನ ಹೇಳುವ ಕೆಲಸ ಮಾಡಿ ಸರ್ಕಾರದಿಂದ ಬರುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರೆ ಅವರಿಗೆ ಧೈರ್ಯ ಬರುತ್ತಿತ್ತು.ಆದರೆ ಇಂತಹ ಕೆಲಸ ಮಾಡದೇ ಇರುವ ಜನಪ್ರತಿನಿಧಿ ಇರುವುದು ಜನತೆಯ ದುರ್ದೈವ.ಜನತೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ 6.50 ಲಕ್ಷ ರೂ.ಸಾಲ ವಿವಿಧ ಬ್ಯಾಂಕುಗಳಲ್ಲಿದೆ.ಅತಿವೃಷ್ಟಿಯಿAದ ಬೆಳೆದಿದ್ದ ಬೆಳೆ ಫಸಲು ಕೈಗೆ ಬಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರೈತರು ದುಡುಕಿನ ನಿರ್ಧಾರ ತಗೆದುಕೊಳ್ಳಬಾರದು ಎಂದು ನಡಹಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗ ಸುಲ್ಲಳ್ಳಿ, ಮಾಜಿ ಸೈನಿಕ ನಾಗಲಿಂಗಯ್ಯ ಮಠ, ವಕೀಲ ಪಿ.ಎಲ್.ಬೊಮ್ಮಣಗಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಂ.ಎಸ್.ಕನ್ನೂರ,ರೈತನ ಪತ್ನಿ ಬೋರಮ್ಮ ಗೌಡರ,ಮೃತ ರೈತನ ಮಕ್ಕಳು ಇದ್ದರು.

ರೈತನ ಒಬ್ಬ ಮಗಳಿಗೆ ವಿವಾಹ ನಿಶ್ಚಯವಾಗಿದ್ದು ಮದುವೆಯ ಸಮಯದಲ್ಲಿ ನೆರವು ನೀಡುವುದಾಗಿ ತಿಳಿಸಿದರು.ಆತ್ಮಹತ್ಯೆಗೆ ಶರಣಾದ ರೈತನ ಮಕ್ಕಳಿಗೆ ಶಿಕ್ಷಣ ಉಚಿತವಾಗಿ ನೀಡಬೇಕು.ಪತ್ನಿಗೆ ಮಾಶಾಸನ ನೀಡಬೇಕು.ರೈತನಿಗೆ ತ್ವರಿತವಾಗಿ ಪರಿಹಾರ ದೊರಕದೆ ಇದ್ದಲ್ಲಿ ನಾನು ಹೋರಾಟದ ದಾರಿv ತುಳಿಯಬೇಕಾಗುತ್ತದೆ.ಇದಕ್ಕೆ ಆಸ್ಪದ ಮಾಡಿಕೊಡಬೇಡಿ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ