ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ**

ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ.

ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ.

ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ ನಿರಂತರವಾಗಿ ಸುರಿದು ಬೆಳೆ ಹಾನಿಯಾಗಿದ್ದರೂ ಯಾವ ಅಧಿಕಾರಿಯೂ ನಮ್ಮತ್ತ ಬಂದಿಲ್ಲ.ಗ್ರಾಮಲೆಕ್ಕಾಧಿಕಾರಿಗಳಿಗೆ ಕರೆ ಮಾಡಿದರೆ ಫೋನ್ ಕರೆ ಸ್ವೀಕರಿಸುವುದಿಲ್ಲ.ರೈತನಿಗೆ ಹಾನಿ ಆಗಿದೆ ಎಂದು ಹೇಗೆ ಯಾರು ಬಂದು ಕೇಳುತ್ತಾರೆ ಎಂದು ಪ್ರಶ್ನಿಸಿದರಲ್ಲದೇ ಸಾಲ ಸೋಲ ಮಾಡಿ ಹೊಲಕ್ಕೆ ಮಾಡಿದ ಖರ್ಚು ಮಳೆಯಿಂದ ಕೊಚ್ಚಿ ಹೋಗಿದೆ.ರೈತರ ಬದುಕು ನೀರಲ್ಲಿ ಬೆಳೆ ಮುಳುಗಿದಂತಾಗಿದೆ ಎಂದು ಹೇಳಿದರು.

ರೈತರಾದ ಹಣಮಂತ ಚಲವಾದಿ,ಬಸವರಾಜ ಹಿರೇಕುರುಬರ,ವಿಠ್ಠಪ್ಪ ಚನ್ನದಾಸರ,ಶಂಕರಗೌಡ ಪಾಟೀಲ,ಮಲ್ಲಣ್ಣ ಕೋಳೂರ,ಪ್ರಭುಗೌಡ ಗುರೆಡ್ಡಿ, ಸಿದ್ದಣ್ಣ ದಿಡ್ಡಿ, ಗುರಣ್ಣ ಕಡ್ಡಿ, ಸಾಹೇಬಗೌಡ ಹರನಾಳ,ಶಂಕ್ರಪ್ಪ ಕುಂಟೋಜಿ ಮೊದಲಾದವರು ಮಾತನಾಡಿ, ಅತೀವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಈವರೆಗೂ ಒಬ್ಬರೆ ಒಬ್ಬ ತಾಲ್ಲೂಕು ಮಟ್ಟದ ಅಧಿಕಾರಿಗಳು ನಮ್ಮ ಭಾಗದಲ್ಲಿ ಬಂದಿಲ್ಲ.ಅಳಲು ಯಾರಿಗೆ ಹೇಳಬೇಕು ಎಂದು ಅಲವತ್ತುಕೊಂಡರು.

ಸರ್ವೆ ಮಾಡದ ಅಧಿಕಾರಿಗಳು: ತಾಲ್ಲೂಕು ಆಡಳಿತವೇನೋ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಈವರೆಗೂ ಕೃಷಿ,ಕಂದಾಯ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ವೆಗೆ ಹೋಗಿರುವುದು ಕಂಡಿಲ್ಲ ಎನ್ನುತ್ತಿದ್ದಾರೆ ಇಂಗಳಗೇರಿ ಭಾಗದ ರೈತರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು