ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ**

ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ.

ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ.

ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ ನಿರಂತರವಾಗಿ ಸುರಿದು ಬೆಳೆ ಹಾನಿಯಾಗಿದ್ದರೂ ಯಾವ ಅಧಿಕಾರಿಯೂ ನಮ್ಮತ್ತ ಬಂದಿಲ್ಲ.ಗ್ರಾಮಲೆಕ್ಕಾಧಿಕಾರಿಗಳಿಗೆ ಕರೆ ಮಾಡಿದರೆ ಫೋನ್ ಕರೆ ಸ್ವೀಕರಿಸುವುದಿಲ್ಲ.ರೈತನಿಗೆ ಹಾನಿ ಆಗಿದೆ ಎಂದು ಹೇಗೆ ಯಾರು ಬಂದು ಕೇಳುತ್ತಾರೆ ಎಂದು ಪ್ರಶ್ನಿಸಿದರಲ್ಲದೇ ಸಾಲ ಸೋಲ ಮಾಡಿ ಹೊಲಕ್ಕೆ ಮಾಡಿದ ಖರ್ಚು ಮಳೆಯಿಂದ ಕೊಚ್ಚಿ ಹೋಗಿದೆ.ರೈತರ ಬದುಕು ನೀರಲ್ಲಿ ಬೆಳೆ ಮುಳುಗಿದಂತಾಗಿದೆ ಎಂದು ಹೇಳಿದರು.

ರೈತರಾದ ಹಣಮಂತ ಚಲವಾದಿ,ಬಸವರಾಜ ಹಿರೇಕುರುಬರ,ವಿಠ್ಠಪ್ಪ ಚನ್ನದಾಸರ,ಶಂಕರಗೌಡ ಪಾಟೀಲ,ಮಲ್ಲಣ್ಣ ಕೋಳೂರ,ಪ್ರಭುಗೌಡ ಗುರೆಡ್ಡಿ, ಸಿದ್ದಣ್ಣ ದಿಡ್ಡಿ, ಗುರಣ್ಣ ಕಡ್ಡಿ, ಸಾಹೇಬಗೌಡ ಹರನಾಳ,ಶಂಕ್ರಪ್ಪ ಕುಂಟೋಜಿ ಮೊದಲಾದವರು ಮಾತನಾಡಿ, ಅತೀವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಈವರೆಗೂ ಒಬ್ಬರೆ ಒಬ್ಬ ತಾಲ್ಲೂಕು ಮಟ್ಟದ ಅಧಿಕಾರಿಗಳು ನಮ್ಮ ಭಾಗದಲ್ಲಿ ಬಂದಿಲ್ಲ.ಅಳಲು ಯಾರಿಗೆ ಹೇಳಬೇಕು ಎಂದು ಅಲವತ್ತುಕೊಂಡರು.

ಸರ್ವೆ ಮಾಡದ ಅಧಿಕಾರಿಗಳು: ತಾಲ್ಲೂಕು ಆಡಳಿತವೇನೋ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಈವರೆಗೂ ಕೃಷಿ,ಕಂದಾಯ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ವೆಗೆ ಹೋಗಿರುವುದು ಕಂಡಿಲ್ಲ ಎನ್ನುತ್ತಿದ್ದಾರೆ ಇಂಗಳಗೇರಿ ಭಾಗದ ರೈತರು.

Latest News

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ