Former MLA Nadahalli outraged by unscientific crop survey

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ತಾಲ್ಲೂಕಿನ ಇಂಗಳಗೇರಿ, ಮಡಿಕೇಶ್ವರ, ಢವಳಗಿ, ರೂಢಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಬೆಳೆ ಹಾನಿಯಾಗಿರುವ ಕುರಿತು ಸರ್ಕಾರದ ಅಧಿಕಾರಿಗಳು ಜಂಟಿ ಸಮೀಕ್ಷೆಯ ವರದಿಯನ್ನು ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳೆ ಹಾನಿ ಸಂಭವಿಸಿದ ರೈತರ ಜಮೀನುಗಳಲ್ಲಿ ಹಾನಿ ಉಂಟಾದ ಪ್ರಮಾಣವನ್ನು ಜಂಟಿ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ. ಪಂಚಾಯಿತಿವಾರು ಸಮೀಕ್ಷೆ ವರದಿಯನ್ನು ಅವಲೋಕಿಸಿದರೆ ಕೆಲವೇ ರೈತರಿಗೆ ಪರಿಹಾರವನ್ನು ಕೊಡುವ ಕಾರ್ಯ ಸರ್ಕಾರದಿಂದ ಮಾಡಲಾಗುತ್ತಿದೆ. ಇಂಗಳಗೇರಿ ಪಂಚಾಯಿತಿಯಲ್ಲಿ 188, ಮಡಿಕೇಶ್ವರ ಗ್ರಾಪಂನಲ್ಲಿ 128, ಢವಳಗಿ ಗ್ರಾಪಂನಲ್ಲಿ 68 ರೈತರ ಹೆಸರು ಬೆಳೆಹಾನಿ ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಭಾಗದಲ್ಲಿ ತೊಗರಿ, ಹತ್ತಿ, ಈರುಳ್ಳಿ, ಬಾಳೆ ಮೊದಲಾದ ಬೆಳೆಗಳು ಶೇ75ರಷ್ಟು ಹಾನಿ ಉಂಟಾಗಿದೆ. ಆದರೆ, ಆಯ್ದ ರೈತರಿಗೆ ಅದರಲ್ಲೂ ಎರಡು ಎಕರೆ ಮೀರದಂತೆ ಹಾನಿ ಸಂಭವಿಸಿರುವುದಾಗಿ ಪಟ್ಟಿಯಲ್ಲಿ ಅಧಿಕಾರಿಗಳು ತೋರಿಸಿದ್ದಾರೆ. ಕೆಲವು ರೈತರ ಜಮೀನುಗಳಲ್ಲಿ ಭಾಗಶಃ ಹಾನಿ ಸಂಭವಿಸಿದ್ದರೂ ಅದಕ್ಕೆ 2 ಎಕರೆ ಒಳಗಡೆ ಮಿತಿ ವಿಧಿಸಿರುವುದು ಅವೈಜ್ಞಾನಿಕವಾಗಿದೆ. ಅಧಿಕಾರಿಗಳು ಎಲ್ಲೋ ಕೂತು ತಮಗೆ ಬೇಕಾದ ರೈತರ ಹೆಸರುಗಳನ್ನು ಆಯ್ಕೆ ಮಾಡಿ ಪಟ್ಟಿ ಲಗತ್ತಿಸಿ ಆಕ್ಷೇಪಣೆ ಆಹ್ವಾನಿಸಿದ್ದಾರೆ. ಕೆಲವು ರೈತರಿಗೆ ಪಂಚಾಯಿತಿಯಲ್ಲಿ ಪಟ್ಟಿ ಅಂಟಿಸಿದ್ದಾರೆ ಎಂಬುದೇ ಗೊತ್ತಿಲ್ಲ ಎಂದು ಹೇಳಿದರು.

ಮಡಿಕೇಶ್ವರ ಗ್ರಾಮದಲ್ಲಿ ರೈತ ತುಂಬಗಿ ಮಾತನಾಡಿ, ನಮ್ಮದು 5 ಎಕರೆ ಜಮೀನಿನಲ್ಲಿ ಹತ್ತಿ ಬಿತ್ತಿದ್ದೇವು. ಅತೀವೃಷ್ಟಿಯಿಂದ ಬೆಳೆಗೆ ತಾಮ್ರ ರೋಗ ಬಂದಿದೆ. ಬೆಳೆ ಸಂಪೂರ್ಣ ಹಾನಿಯಾಗಿದ್ದು ಅದಕ್ಕಾಗಿ ಎಕರೆಗೆ 30-40 ಸಾವಿರ ರೂ.ಖರ್ಚು ಮಾಡಿದ್ದೇವೆ. ಈಗ ಪಂಚಾಯಿತಿಯಲ್ಲಿ ಹಚ್ಚಿರುವ ಲೀಸ್ಟ್ ನಲ್ಲಿ ನಮ್ಮ ಹೆಸರಿಲ್ಲ ಎಂದು ಹೇಳಿದರು.

ಬಳವಾಟ ಭಾಗದ ರೈತ ಕಾರ್ತಿಕ ಯಾಳವಾರ ಮಾತನಾಡಿ, ನಮ್ಮ ಹೊಲದಲ್ಲಿ ತೊಗರಿ ಬೆಳೆ ಗಿಡಗಳು ಹುಲುಸಾಗಿ ಬೆಳೆದಿದ್ದು ಬಿಟ್ಟರೆ ಹೂವು ಬಿಟ್ಟಿಲ್ಲ, ಕಾಯಿಗಟ್ಟಿಲ್ಲ, ಬುಡದಲ್ಲಿ ಹಸಿಯಾಗಿದ್ದು ಯಾವ ಅಧಿಕಾರಿಗಳು ಈವರೆಗೂ ನಮ್ಮ ಹೊಲಗಳಿಗೆ ಭೇಟಿ ನೀಡಿಲ್ಲ ಎಂದು ದೂರಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲ್ಲಯ್ಯ ಬಿರಾದಾರ,ಮಧುಸ್ವಾಮಿ ಹಿರೇಮಠ, ಅನೀಲ ರಾಠೋಡ, ಲಕ್ಷ್ಮಣ ಬಿಜ್ಜೂರ, ಸಂಗಣ್ಣ ಹತ್ತಿ, ನಾಗೇಶ ಕವಡಿಮಟ್ಟಿ, ಪ್ರವೀಣ ಚಿನಿವಾರ ಮೊದಲಾದವರು ಇದ್ದರು.

ಅಧಿಕಾರಿಯಿಂದ ಸಿಗದ ಸಮರ್ಪಕ ಉತ್ತರ : ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಕಿನಾಳ ಅವರನ್ನು ಕರೆಯಿಸಿ ರೈತರ ಸಮಸ್ಯೆಯನ್ನು ಅವರ ಸಮಕ್ಷಮದಲ್ಲಿ ನಡಹಳ್ಳಿ ಅವರು ಬಹಿರಂಗಪಡಿಸಿದರು. ಕೆಲವು ರೈತರು ನಾವು ಬೆಳೆ ವಿಮೆ ತುಂಬಿದ್ದರೂ ನಮ್ಮ ಜಮೀನು ಹಾನಿಯಾದ ರೈತರ ಪಟ್ಟಿಯಲ್ಲಿ ಬಂದಿಲ್ಲ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಗೋವಿಂದರೆಡ್ಡಿ ಮೆದಿಕಿನಾಳ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯ ಆರಂಭಿಸಿದ್ದೇವೆ. ನಾಲ್ಕು ದಿನ ಬೆಳೆ ಹಾನಿ ಸಮೀಕ್ಷೆಗೆ ಹೋಗಿದ್ದೇವು. ಕೆಲವು ರೈತರ ಜಮೀನುಗಳಿಗೆ ಭೇಟಿ ನೀಡಿ ವರದಿ ತಂದಿದ್ದೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ. ನಾನು ಹೋದರೆ ಇಲ್ಲಿ ಬೀಜ ವಿತರಣೆಗೆ ಸಿಬ್ಬಂದಿ ಇಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಆದರೆ, ಹಾನಿ ಅಂದಾಜನ್ನು ಹೇಗೆ ಗಣನೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಲಿಲ್ಲ. ಅಲ್ಲದೇ ಎರಡು ಎಕರೆಗಿಂತ ಕಡಿಮೆ ಪ್ರಮಾಣದಲ್ಲಿಯೇ ಹಾನಿ ತೋರಿಸಿರುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಗೂ ಅವರಿಂದ ಉತ್ತರ ದೊರೆಯಲಿಲ್ಲ.

9 ಹೆಕ್ಟೆರ್ ಬೆಳೆ ಹಾನಿ…! : ತೋಟಗಾರಿಕೆ ಇಲಾಖೆ ಅಧಿಕಾರಿ ರೈತರು ಬೆಳೆ ಹಾನಿ ಆಗಿದೆ ಎಂದು ಅರ್ಜಿ ಕೊಟ್ಟರೆ ಮಾತ್ರ ಸಮೀಕ್ಷೆ ಮಾಡಲು ಬರುತ್ತಾರಂತೆ. ಜಿಲ್ಲಾಧಿಕಾರಿಗಳೇ ರೈತರ ಜಮೀನಿಗೆ ಹೋಗಿ ಸಮೀಕ್ಷೆ ಮಾಡಲು ತಿಳಿಸಿದ್ದರೂ ಅದಕ್ಕೆ ಯಾವುದೇ ಸ್ಪಂದನೆ ಕೆಳ ಹಂತದ ಅಧಿಕಾರಿಗಳಿಂದ ದೊರೆಯುತ್ತಿಲ್ಲ. ಢವಳಗಿ ಭಾಗದಲ್ಲಿ ಕೇವಲ 9 ಹೆಕ್ಟೆರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ ಎಂದು ವರದಿ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಸಮೀಕ್ಷೆಯಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಗ್ರಾಮಗಳಲ್ಲಿ ಡಂಗೂರ ಸಾರಿಸಿ ಹಾನಿಗೊಳಗಾದ ರೈತರಿಂದ ಅರ್ಜಿಗಳನ್ನು ಪಡೆದುಕೊಳ್ಳಬೇಕು. ರೈತರು ಕಾನೂನು ಕೈಗೆ ತೆಗೆದುಕೊಂಡರೆ ಅದಕ್ಕೆ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ.
ಎ.ಎಸ್.ಪಾಟೀಲ ನಡಹಳ್ಳಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ