Menstrual leave with pay in the state too

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು