Menstrual leave with pay in the state too

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ