Menstrual leave with pay in the state too

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ