Govt committed to protect organized, unorganized workers: Minister Santosh Lad

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು ಹಲವಾರು ಕಾನೂನುಗಳನ್ನು ಜಾರಿಗೊಳಿಸಿದ್ದೇವೆ. ರಾಜ್ಯದ ಸಮಸ್ತ ಕಾರ್ಮಿಕರಿಗೆ ಅನುಕೂಲವಾಗುವ ರೀತಿಯಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಏಳು ಕಾಯ್ದೆಗಳನ್ನು ಜಾರಿಗೊಳಿಸಿ ಎಲ್ಲರಿಗೂ ನ್ಯಾಯ ಒದಗಿಸುವ ಕಾರ್ಯದಲ್ಲಿ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.

ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶ್ರೀ ಆರೂರು ಲಕ್ಷ್ಮೀನಾರಾಯಣರಾವ್ ಸ್ಮಾರಕ ಪುರ ಭವನದಲ್ಲಿ ಉಡುಪಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಕಾರ್ಮಿಕರಿಗೆ ಅನುಕೂಲವಾಗುವಂತಹ ಗಿಗ್ ಕಾಯ್ದೆ, ಸಿನಿಕಾಯ್ದೆ, ಸಾರಿಗೆ ಕಾಯ್ದೆ ಸೇರಿದಂತೆ ಮುಂತಾದ ೭ ಕಾಯ್ದೆಗಳನ್ನು ಜಾರಿಗೊಳಿಸಿ ಕಾರ್ಮಿಕರ ಹಿತರಕ್ಷಣೆ ಕಾಪಾಡುತ್ತಿದೆ. ಆನ್ ಲೈನ್ ಹೋಂ ಡೆಲಿವರಿ ಉದ್ಯೋಗಗಳಲ್ಲಿ ತೊಡಗಿರುವ ಗಿಗ್ ಕಾರ್ಮಿಕರು, ಸಾರಿಗೆ ಕ್ಷೇತ್ರದಲ್ಲಿ ತೊಡಗಿರುವವರು, ಸಿನಿಮಾ ಮತ್ತು ಜಾನಪದ ಕಲಾ ಪ್ರಕಾರಗಳಲ್ಲಿ ತೊಡಗಿರುವ ಕಲಾವಿದರು, ತಂತ್ರಜ್ಞರು, ಕೂಲಿ ಕಾರ್ಮಿಕರು, ಸವಿತಾ ಸಮಾಜದವರು, ಬೀಡಿ, ಟೈಲರಿಂಗ್ ಮುಂತಾದ ವೃತ್ತಿಗಳಲ್ಲಿ ತೊಡಗಿರುವ ೧೦೧ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಿ ಕಾರ್ಮಿಕ ಇಲಾಖೆಯಡಿ ಏಕೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದರು.

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣ ಕಾಯುವ ನಿಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಸೆಸ್ ೧ ರೂ. ಕಾರ್ಮಿಕ ಇಲಾಖೆಗೆ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದೇವೆ. ಲೀಟರ್‌ಗೆ ಒಂದು ೧ ರೂ. ನಂತೆ ವಾರ್ಷಿಕ ೨೫೦೦ ಕೋಟಿ ರೂ. ಬರಲಿದ್ದು, ಈ ಮೂಲಕ ೧.೩೦ ಕೋಟಿ ಜನಸಂಖ್ಯೆವುಳ್ಳ ಕಾರ್ಮಿಕರಿಗೆ ೧೦-೧೫ ಲಕ್ಷ ರೂ. ಹೆಲ್ತ್ ಕಾರ್ಡ್ ಸೌಲಭ್ಯ ನೀಡಲಾಗುವುದು ಎಂದರು.

ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಬಿಲ್‌ಗಳನ್ನು ತಂದಿದ್ದು, ಕಾರ್ಮಿಕರ ಅನುಕೂಲತೆಗೆ ತಕ್ಕಂತೆ ನಿಯಾಮಾವಳಿಯನ್ನು ರೂಪಿಸಲಾಗುತ್ತದೆ. ಸಿನೆಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಬಿಲ್ ತರಲಾಗಿದೆ. ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾ ದೀಪ ಯೋಜನೆ)ಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ೨೧ ಸಾವಿರ ರೂ. ವೇತನ ಪಡೆಯುವ ಉದ್ಯೋಗಿಗಳಷ್ಟೇ ಇಎಸ್‌ಐ ಸೌಲಭ್ಯದಡಿಯಲ್ಲಿ ಬರುತ್ತಿದ್ದು, ೩೦ ಸಾವಿರ ರೂ. ವರೆಗೂ ವೇತನ ಪಡೆಯುವವರನ್ನು ಇಎಸ್‌ಐ ಯೋಜನೆಗೆ ತರುವುದಕ್ಕೆ ೮ ತಿಂಗಳ ಹಿಂದೆಯೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಅನುಷ್ಠಾನಕ್ಕೆ ಕ್ರಮ ವಹಿಸಬೇಕೆಂದರು.

ಸರಕು ಸಾಗಾಣೆ ಮತ್ತು ಸಾರಿಗೆ ಕ್ಷೇತ್ರದಲ್ಲಿ ತೊಡಗಿರುವ ಕಾರ್ಮಿಕರು ಮೃತಪಟ್ಟಲ್ಲಿ ೫ ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ರಾಜ್ಯದಲ್ಲಿ ವಾರ್ಷಿಕ ೧,೭೨,೦೦೦ ಜನರು ಅಪಘಾತದಲ್ಲಿ ಮರಣ ಹೊಂದುತ್ತಿದ್ದು ಸ್ಥಳೀಯ ಶಾಸಕರು, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು. ಹೊರಗುತ್ತಿಗೆ ನೌಕರರ ವೇತನ ಸಮಸ್ಯೆಗಳನ್ನು ಪರಿಹರಿಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದ ಸೊಸೈಟಿಗಳನ್ನು ಸ್ಥಾಪಿಸಿ ಹೊರಗುತ್ತಿಗೆ ನೌಕರರನ್ನು ನೋಂದಣಿ ಮಾಡಿಸಲಾಗುವುದು ಎಂದ ಅವರು೨೦ಕ್ಕಿಂತ ಹೆಚ್ಚಿನ ಕಾರ್ಮಿಕರಿರುವ ಕಂಪನಿಗಳಲ್ಲಿ ಕಡ್ಡಾಯ ಗ್ರಾಚ್ಯುಟಿ ನೀಡಲು ತಿಳಿಸಲಾಗಿದ್ದು ಇದರ ಹಣ ನೇರವಾಗಿ ಕಾರ್ಮಿಕರಿಗೆ ತಲುಪಲಿದೆ ಎಂದರು.

ಮಧ್ಯಮ ಹಾಗೂ ಬಡ ಜನರ ಅಭಿವ್ರದ್ಧಿಗಾಗಿ ಸರಕಾರ ೬೦ ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚುಮಾಡುತ್ತಿದೆ ಎಂದ ಅವರು ಆಶಾದೀಪಾ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸಿದವರನ್ನು ಉದ್ಯೋಗಕ್ಕೆ ಸೇರಿಸಿಕೊಂಡರೆ ಅಂತಹ ಸಂಸ್ಥೆಗಳಿಗೆ ಶೇ. ೫೦ ರಷ್ಟು ಹಣವನ್ನು ನೀಡುತ್ತೇವೆ. ಈ ಯೋಜನೆಯಡಿ ೬೪೭೩ ಅಭ್ಯರ್ಥಿಗಳಿಗೆ ಸಂಬAಸಿ ಇಎಸ್‌ಐ, ಇಪಿಎಫ್ ವಂತಿಕೆ, ಶಿಷ್ಯವೇತನ, ವೇತನ ಮರುಪಾವತಿ ಸಹಿತ ೨೫೪ ಸಂಸ್ಥೆಗಳಿಗೆ ಒಟ್ಟು ೧೮.೧೯ ಕೋಟಿಯನ್ನು ಉದ್ಯೋಗದಾತರಿಗೆ ಮರುಪಾವತಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು ೮೭ ಅಭ್ಯರ್ಥಿಗಳಿಗೆ ಸಂಬAಧಿಸಿ ೧೩ ಸಂಸ್ಥೆಗಳಿಗೆ ಒಟ್ಟು ೨೪.೯೮ ಲಕ್ಷ ರೂ. ಉದ್ಯೋಗದಾತರಿಗೆ ಮರುಪಾವತಿಸಲಾಗಿದೆ ಎಂದರು.

ಗೃಹ ಕಾರ್ಮಿಕ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ದಿ ಕರ್ನಾಟಕ ಡೊಮಸ್ಟಿಕ್ ವರ್ಕ್ ಬಿಲ್-೨೦೨೫ ಮತ್ತು ಮಹಿಳೆಯರ ಮಾಸಿಕ ಋತುಚಕ್ರ ಅವಧಿಯಲ್ಲಿ ಒಂದು ದಿನದ ವೇತನ ಸಹಿತ ರಜೆ ನೀಡುವ ಕರಡು ನಿಯಮವನ್ನು ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಪಕ್ಷ, ಮನೆಯ ದುಡ್ಡಲ್ಲ, ಜನರ ಹಣ:
ಯಾವುದೇ ರಾಜಕೀಯ ಪಕ್ಷ/ಸರಕಾರ ಸಹಿತ ಯಾರೂ ಕೂಡಾ ತಮ್ಮ ಮನೆಯಿಂದ ಹಣ ತರಲ್ಲ. ಇದು ಜನರ ದುಡ್ಡು. ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ಯೋಜನೆ ಮಾಡಿದರೂ ಅದು ಅವರ ದುಡ್ಡಲ್ಲ. ಅದು ಜನಸಾಮಾನ್ಯರ ಹಣ. ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿ ಜನರಿಗೆ ನೀಡುವುದಾಗಿದೆ ಎಂದರು.

ಪ್ರಜ್ಞಾವಂತ ಸಮಾಜ ನಿರ್ಮಿಸಿ:
ಪ್ರಜ್ಞಾವಂತ ನಾಗರಿಕರು ವಿಚಾರಧಾರೆಯಾಗಿ ದೇಶವನ್ನು ಕಟ್ಟಬೇಕು. ಸರಿ, ತಪ್ಪುಗಳನ್ನು ತಿಳಿದು ರಾಜಕೀಯ ವ್ಯವಸ್ಥೆಯನ್ನು ಬದಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಹೊಸತನ ಬರಬೇಕು. ಸೋಶಿಯಲ್ ಮೀಡಿಯಾದಲ್ಲಿನ ಹಸಿ ಸುಳ್ಳುಗಳ ಬಗ್ಗೆ ಅವಲೋಕಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಸತ್ಯವಂತರಿಗೂ, ಭ್ರಷ್ಟಾಚಾರಿಗಳಿಗೂ ವ್ಯತ್ಯಾಸವಿದ್ದು, ಈ ಬಗ್ಗೆ ಗಮನ ಹರಿಸಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಶಿಕ್ಷಣ, ಆರೋಗ್ಯ, ಆರ್ಥಿಕ ಕ್ಷೇತ್ರದಲ್ಲಿ ಉಡುಪಿ ಮುಂಚೂಣಿಯಲ್ಲಿದ್ದು, ದೇಶಕ್ಕೆ ಮಾದರಿಯಾಗಿದೆ. ಉಡುಪಿಯ ಮಾನವ ಸಂಪನ್ಮೂಲದ ಸದ್ಬಳಕೆಯಾಗಬೇಕೆಂದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಬೇಕು. ಕಾರ್ಮಿಕರಿಗೆ ಸೂಕ್ತ ಶಲ್ಟರ್ ವ್ಯವಸ್ಥೆಯಾಗಬೇಕು. ಈ ಮೂಲಕ ಸಮಸ್ಯೆ ಪರಿಹಾರಕ್ಕೆ ಯತ್ನಿಸಬೇಕೆಂದರು.

ಕಾರ್ಮಿಕ ಇಲಾಖೆ ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆಯನ್ನು ಓದಿದರು. ಹಾಸನ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಎಚ್.ಎಲ್. ಗುರುಪ್ರಸಾದ್ ಸ್ವಾಗತಿಸಿದರು.

ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಮಿಕ ಆಯುಕ್ತ ಹಾಗೂ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ದಿನಕರ ಹೇರೂರು, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ಅÃಕ್ಷಕ ಹರಿರಾಂ ಶಂಕರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಉದಯ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ಲಾವಣ್ಯ ಬಲ್ಲಾಳ್, ಟಿ.ಎಂ. ಶಾಹೀದ್ ತೆಕ್ಕಿಲ್, ಮುಂಡರಗಿ ನಾಗರಾಜ್, ಕಾರ್ಮಿಕ ಅಕಾರಿಗಳಾದ ಕಮಲ್ ಷಾ ಅಲ್ತಾಫ್ ಅಹ್ಮದ್, ಕಾರ್ಮಿಕ ನಿರೀಕ್ಷಕರಾದ ಸಂಜಯ್, ಮಲ್ಲಿಕ್ ಪ್ರಸಾದ್, ನವೀನ್, ವಿಜಯೇಂದ್ರ ಸಹಿತ ಅನೇಕರು ಉಪಸ್ಥಿತರಿದ್ದರು.
ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ವಂದಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ