ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು.

ಪಟ್ಟಣದ ಗುರು ಭವನದ ನಡೆದ ಗುರವಾರ   ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು  ಬೀಳ್ಕೋಡಿಗೆ ಸಮಾರಂಭ ಹಾಗೂ ನೂತನ ಡಿವೃಎಸ್ಪಿ ಸ್ವಾಗತ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು   ಪೋಲೀಸ್ ಇಲಾಖೆಯು ಇದೀಗ ಪೂರ್ತಿಯಾಗಿ ಜನಸ್ನೇಹಿ ಪೋಲಿಸ್ಆಗಿದೆ. ಸಂವಿಧಾನದ ಹಾಗೂ ಕಾನೂನುನಿನ ನಿಯಮಾವಳಿಯ ಚೌಕಟ್ಟಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು.ನಮಗೆ ನಮ್ಮ ಇಲಾಖೆಯ ಮೇಲೆ ಜವಾಬ್ದಾರಿ ಬಹಳಷ್ಟು ಇರುತ್ತದೆ. ಪೋಲಿಸ್ ರು ನೊಂದವರ, ಬಡವರಿಗೆ ನ್ಯಾಯ ಕೊಡುಸುವ ಕೆಲಸ ಮಾಡಬೇಕು ಎಂದರು.


ಹೆಂಡತಿ- ಮಕ್ಕಳ ಹೊಟ್ಟೆಗಾಗಿ ಹಾಗೂ ಕುಟುಂಭದ ಉದ್ದಾರದ ಭಾವನೆಯಿಂದ ಕೆಲಸ ಮಾಡುತ್ತಿದ್ದರೆ ಅದು ವ್ಯರ್ಥ, ನಮಗಿರುವ ಶಕ್ತಿಯನ್ನು ವ್ಯಯಕ್ತಿಕ ಬಳಸಿಕೊಳ್ಳದೆ. ಸಮಾಜ ಶಾಂತಿ ಸುವ್ಯವಸ್ಥೆ ಗೆ ಬಳಕೆ ಮಾಡಿದರೆ ಈ ಹುದ್ದೆಗೆ ಸೇರಿದ್ದು ಸಾರ್ಥಕ ವಾಗುತ್ತದೆ .ಸೇವೆಗೆ ಅವಕಾಶ ನೀಡಿದ ಹುನಗುಂದ ಇಲಕಲ್ಲ, ಅಮೀನಗಡದ ಭಾಗದ ಎಲ್ಲ ಸಾರ್ವಜನರಿಗೆ ನಮ್ಮ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ. ಕಳೆದ ಎರಡು ವರ್ಷ ಅವಧಿಯಲ್ಲಿ ಹುನಗುಂದ ಉಪವಿಭಾಗ ನನಗೆ ಅತ್ಯಂತ ಕುಷಿ ತಂದಿದೆ.  ಆದರೆ ನಾವು ಹೇಗೆ ಕೆಲಸ ಮಾಡುತ್ತೇವೆ ಅಧಿಕಾರ  ಬಳಸುವುದರ  ಮೂಲಕ ನಮ್ಮ ಕೆಲಸ ಮುಖ್ಯವಾಗುತ್ತದೆ.  ಸಾರ್ವಜನಿಕರು, ರಾಜಕೀಯ ಮುಖಂಡರು, ಮಾಧ್ಯಮ ಮಿತ್ರರರು ಎಲ್ಲ ಸಹಕಾರದಿಂದಲೇ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು.ಸರ್ಕಾರಿ ಸೇವೆಯಲ್ಲಿ ಬದಲಾವಣೆಯೂ ಸಹಜ ಆದರೆ ಸರ್ಕಾರ ನಿಯಮಗಳ ಮೂಲಕ ಪೋಲಿಸ್ ಇಲಾಖೆಯೂ ಬದಲಾವಣೆ ಯಾಗುತ್ತಿದ್ದಂತೆ ಅದರಂತೆ ನಾವು ಬದಲಾವಣೆ ಆಗಬೇಕು. ಸಾರ್ವಜನಿಕ ಉತ್ತಮ ಸೇವೆ ಕೊಡಬೇಕು ಎಂದರು.

ನಮ್ಮ ಕೆಲಸವನ್ನು ಶ್ರದ್ದೆ ಯಿಂದ ಮಾಡಿದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ನಮ್ಮ ಮೇಲಾಧಿಕಾರಿಗಳು ಸಹಕಾರದಿಂದ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇವೆ. ಉತ್ತಮ‌ ಸಮಾಜ ನಿರ್ಮಾಣದಲ್ಲಿ  ಪೋಲಿಸ ಇಲಾಖೆಯ ಪಾತ್ರವು ಮಹತ್ವವಿದೆ ಎಂದು ತಿಳಿಸಿದರು.

ನೂತನ ಡಿವೈಎಸ್ಪಿ ಸಂತೋಷ ಬನ್ನಿಟ್ಟಿ ಮಾತನಾಡಿ, ಎಲ್ಲರೂ ಮೊದಲಿನಂತೆ ನಮಗೂ ಸಹಕಾರಿ ನೀಡಿ ಸಾರ್ವಜನಿಕರ ಯಾವುದೇ ಸಮಸ್ಯೆಗೆ ಪರಿಹಾರಕ್ಕೆ ನಮ್ಮ ಇಲಾಖೆಯೂ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಕಾನಿಪ ಅಧ್ಯಕ್ಷ ಅಮರೇಶ ನಾಗೂರ, ಕಾರ್ಯದರ್ಶಿ‌ ಮಲ್ಲಿಕಾರ್ಜುನ ಹೊಸಮನಿ, ಮಾಜಿ ಸೈನಿಕ ವಿಜಯ ದಳವಾಯಿ, ಇಳಕಲ್ಲ ಪಿಎಸ್ ಐ ಎಸ್.ಆರ್.ನಾಯಕ ಮಾತನಾಡಿದರು.

ಬದಾಮಿ ಸಿಪಿಐ ಕರೆಯಪ್ಪ ಬನ್ನಿ ,ಹುನಗುಂದ ಪಿಎಸ್ಐ ಎಸ್.ಜಿ. ಆಲದಕಟ್ಟಿ , ಅಮೀನಗಡ ಪಿಎಸ್ ಐ ಜ್ಯೋತಿ ವಾಲೀಕಾರ, ಮಂಜುನಾಥ ಪಾಟೀಲ್ ಸೇರಿದಂತೆ ಇತರರು ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.