It is our merit to have performed duty where Basavanna walked: CPI Sunil Savadi

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು.

ಪಟ್ಟಣದ ಗುರು ಭವನದಲ್ಲಿ ಗುರವಾರ ನಡೆದ ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು ಬೀಳ್ಕೋಡಿಗೆ ಸಮಾರಂಭ ಹಾಗೂ ನೂತನ ಡಿವೃಎಸ್ಪಿ ಸ್ವಾಗತ  ಕಾರ್ಯಕ್ರಮದಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆಯು ಇದೀಗ ಪೂರ್ತಿಯಾಗಿ ಜನಸ್ನೇಹಿ ಪೋಲಿಸ್ ಆಗಿದೆ. ಸಂವಿಧಾನದ ಹಾಗೂ ಕಾನೂನಿನ ನಿಯಮಾವಳಿಯ ಚೌಕಟ್ಟಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು. ನಮಗೆ ನಮ್ಮ ಇಲಾಖೆಯ ಮೇಲೆ ಜವಾಬ್ದಾರಿ ಬಹಳಷ್ಟು ಇರುತ್ತದೆ. ಪೋಲಿಸ್ ರು ನೊಂದವರ, ಬಡವರಿಗೆ ನ್ಯಾಯ ಕೊಡುಸುವ ಕೆಲಸ ಮಾಡಬೇಕು.
ಹೆಂಡತಿ- ಮಕ್ಕಳ ಹೊಟ್ಟೆಗಾಗಿ ಹಾಗೂ ಕುಟುಂಭದ ಉದ್ದಾರದ ಭಾವನೆಯಿಂದ ಕೆಲಸ ಮಾಡುತ್ತಿದ್ದಾರೆ. ಅದು ವ್ಯರ್ಥ, ನಮಗಿರುವ ಶಕ್ತಿಯನ್ನು ವೈಯಕ್ತಿಕ ಬಳಸಿಕೊಳ್ಳದೆ, ಸಮಾಜ ಶಾಂತಿ ಸುವ್ಯವಸ್ಥೆಗೆ ಬಳಕೆ ಮಾಡಿದರೆ ಈ ಹುದ್ದೆಗೆ ಸೇರಿದ್ದು ಸಾರ್ಥಕವಾಗುತ್ತದೆ. ಸೇವೆಗೆ ಅವಕಾಶ ನೀಡಿದ ಹುನಗುಂದ ಇಲಕಲ್ಲ, ಅಮೀನಗಡದ ಭಾಗದ ಎಲ್ಲ ಸಾರ್ವಜನಿಕರಿಗೆ ನಮ್ಮ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ, ಕಳೆದ ಎರಡು ವರ್ಷ ಅವಧಿಯಲ್ಲಿ ಹುನಗುಂದ ಉಪವಿಭಾಗ ನನಗೆ ಅತ್ಯಂತ ಖುಷಿ ತಂದಿದೆ. ಆದರೆ ನಾವು ಹೇಗೆ ಕೆಲಸ ಮಾಡುತ್ತೇವೆ, ಅಧಿಕಾರ ಬಳಸುವುದರ  ಮೂಲಕ ನಮ್ಮ ಕೆಲಸ ಮುಖ್ಯವಾಗುತ್ತದೆ.  ಸಾರ್ವಜನಿಕರು, ರಾಜಕೀಯ ಮುಖಂಡರು, ಮಾಧ್ಯಮ ಮಿತ್ರರರು ಎಲ್ಲ ಸಹಕಾರದಿಂದಲೇ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು. ಸರ್ಕಾರಿ ಸೇವೆಯಲ್ಲಿ ಬದಲಾವಣೆಯೂ ಸಹಜ ಆದರೆ ಸರ್ಕಾರ ನಿಯಮಗಳ ಮೂಲಕ ಪೋಲಿಸ್ ಇಲಾಖೆಯೂ ಬದಲಾವಣೆಯಾಗುತ್ತಿದ್ದಂತೆ ಅದರಂತೆ ನಾವು ಬದಲಾಗಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು. ನಮ್ಮ ಕೆಲಸವನ್ನು ಶ್ರದ್ದೆಯಿಂದ ಮಾಡಿದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ನಮ್ಮ ಮೇಲಾಧಿಕಾರಿಗಳು ಸಹಕಾರದಿಂದ ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇವೆ. ಉತ್ತಮ‌ ಸಮಾಜ ನಿರ್ಮಾಣದಲ್ಲಿ  ಪೋಲಿಸ ಇಲಾಖೆಯ ಪಾತ್ರವು ಮಹತ್ವವಿದೆ ಎಂದರು.

ನೂತನ ಡಿವೈಎಸ್ಪಿ ಸಂತೋಷ ಬನ್ನಿಟ್ಟಿ ಮಾತನಾಡಿ, ಎಲ್ಲರೂ ಮೊದಲಿನಂತೆ ನಮಗೂ ಸಹಕಾರಿ ನೀಡಿ ಸಾರ್ವಜನಿಕರ ಯಾವುದೇ ಸಮಸ್ಯೆಗೆ ಪರಿಹಾರಕ್ಕೆ ನಮ್ಮ ಇಲಾಖೆಯೂ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಕಾನಿಪ ಅಧ್ಯಕ್ಷ ಅಮರೇಶ ನಾಗೂರ, ಕಾರ್ಯದರ್ಶಿ‌ ಮಲ್ಲಿಕಾರ್ಜುನ ಹೊಸಮನಿ, ಮಾಜಿ ಸೈನಿಕ ವಿಜಯ ದಳವಾಯಿ, ಇಳಕಲ್ಲ ಪಿಎಸ್ ಐ ಎಸ್.ಆರ್.ನಾಯಕ ಮಾತನಾಡಿದರು.

ಬದಾಮಿ ಸಿಪಿಐ  ಕರಿಯಪ್ಪ ಬನ್ನಿ , ಹುನಗುಂದ ಪಿಎಸ್ಐ ಎಸ್. ಜಿ. ಆಲದಕಟ್ಟಿ , ಅಮೀನಗಡ ಪಿಎಸ್ ಐ ಜ್ಯೋತಿ ವಾಲೀಕಾರ, ಮಂಜುನಾಥ ಪಾಟೀಲ್, ಸೇರಿದಂತೆ ಇತರರು ಇದ್ದರು.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.