ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ ಸಾಧಿಸಿರುವ ನಮ್ಮ ಸಂಸ್ಥೆಯಿoದ ಮುಂದಿನ ವರ್ಷ 200 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಸೀಟು ಪಡೆದುಕೊಳ್ಳುವಲ್ಲಿ ಯಶ ಕಾಣುವ ವಿಶ್ವಾಸ ಇದೆ ಎಂದು ಆಕ್ಸಫರ್ಡ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು.

ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಭಾನವಾರ 2025ನೇ ಸಾಲಿನಲ್ಲಿ 187 ಮೆಡಿಕಲ್ ಸೀಟು ಪಡೆದುಕೊಂಡ 187 ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.ವಿದ್ಯಾರ್ಥಿಗಳ ಏಳ್ಗೆಗಾಗಿ ಸಂಸ್ಥೆಯಿoದ ಶಿಕ್ಷಕರು,ಉಪನ್ಯಾಸಕರು ಅಗತ್ಯ ಮಾರ್ಗದರ್ಶನ ಮಾಡಲಿದ್ದು ನಮ್ಮ ಸಂಸ್ಥೆಯಿoದ ಈಗಾಗಲೇ 1200ಕ್ಕೂ ಹೆಚ್ಚು ಎಂ.ಬಿ.ಬಿ.ಎಸ್., 1800ಕ್ಕೂ ಹೆಚ್ಚು ಬಿಎಎಎಂಎಸ್, 400ಕ್ಕೂ ಹೆಚ್ಚು ಪಶುವೈದ್ಯಕೀಯ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.ವಿಶೇಷವಾಗಿ ವೈದ್ಯಕೀಯ ಕೋರ್ಸಿಗೆ ಸೇರಲು ಅಗತ್ಯ ತರಬೇತಿ ನೀಡಲಾಗುತ್ತದೆ ಎಂದರು.

ಬಿರಾದಾರ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ವೈದ್ಯ ಡಾ.ವಿಜಯಶೇಖರ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ನಂತರ ಕರಿಯರ್ ಕುರಿತು ತರಬೇತಿ ಕೊಡುವ ಕೆಲಸ ಆಗಬೇಕು. ಮುಂದಿನ ಜೀವನ ಹೇಗೆ, ಯಾವ ಸ್ನಾತಕೋತ್ತರ ಪದವಿ ಆಯ್ದುಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಬೇಕು ಎಂದರು.

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯ ಚಿಕ್ಕಮಕ್ಕಳ ವೈದ್ಯ ಡಾ.ಪರಶುರಾಮ ವಡ್ಡರ ಮಾತನಾಡಿ,ಎಂಬಿಬಿಎಸ್ ಎಂ.ಡಿ ಓದಲು ಅಡಿಪಾಯ.ಎರಡು ವರ್ಷ ಚೆನ್ನಾಗಿ ಓದಬೇಕು.ತಂದೆ ತಾಯಿ, ಪಾಲಕರು ಕಷ್ಟಪಟ್ಟು ಓದಿಸಲು ಕಳಿಸಿರುವಾಗ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ.ಲಮಾಣಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರಾಗುವ ಕನಸಿಗೆ ನೀರೆರೆದು ಪೋಷಿಸುವ ಕೆಲಸ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯಿoದ ಮಾಡಲಾಗುತ್ತಿದ್ದು ಇಲ್ಲಿಯ ತರಬೇತಿ ಉತ್ತಮವಾಗಿದೆ ಎಂದರು.
ಶಿಕ್ಷಕ ಸಂಗಮೇಶ ಹೂಗಾರ, ಆಕ್ಸಫರ್ಡ ಆಂಗ್ಲಮಾಧ್ಯಮ ಪ್ರೌಢಶಾಲೆ ಮುಖ್ಯಗುರು ಇಸ್ಮಾಯಿಲ ಮನಿಯಾರ,ಕರೇಕಲ್ ಪಾಟೀಲ್ ಆಸ್ಪತ್ರೆಯ ವೈದ್ಯ ಡಾ.ಬಸನಗೌಡ ಕರೇಕಲ್ಲಪಾಟೀಲ ಮಾತನಾಡಿದರು.ಡಾ.ಎಸ್.ಬಿ.ಗಂಗನಗೌಡರ,ವಿಜಯಕುಮಾರ ಪಾಟೀಲ,ರಾಜಶೇಖರ ಹಿರೇಮಠ,ರೇವಣಸಿದ್ದ ಮುರಾಳ,ಕೆ.ಎಸ್.ಚಟ್ಟಿ,ಎನ್.ಎ.ಬಿರಾಜದಾರ,ಮಂಜುನಾಥ ಮಂಕಣಿ, ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ