Muddebihal: TAPCMS administration again to Manohar Matei 'Kai'

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ.

ಪಟ್ಟಣದ ಎಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ. ಸೀತಿಮನಿ ಎರಡು ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಅಧ್ಯಕ್ಷ ಸ್ಥಾನಕ್ಕೆ ಮುತ್ತಣ್ಣ ಮುತ್ತಣ್ಣವರ ಸೂಚಕರಾಗಿ, ನೀಲಕಂಠಗೌಡ ಗೌಡರ ಅನುಮೋದಕರಾಗಿ ಸಹಿ ಮಾಡಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಬಗಲಿ ಸೂಚಕರಾಗಿ, ಗುರಣ್ಣ ಹತ್ತೂರ ಅನುಮೋದಕರಾಗಿ ಸಹಿ ಮಾಡಿದರು.

ನಿರ್ದೇಶಕರಾದ ಬಸವರಾಜ ಇಸ್ಲಾಂಪೂರ, ಸುರೇಶ ಹಳೇಮನಿ, ಮಲ್ಲನಗೌಡ ಬಿರಾದಾರ, ಗುರುಲಿಂಗಪ್ಪ ಹಡ್ಲಗೇರಿ, ವನಮಾಲಾ ಮೇಟಿ, ಮಲ್ಲಮ್ಮ ಪಾಟೀಲ ಇದ್ದರು.

ಚುನಾವಣಾ ಕಾರ್ಯಕ್ಕೆ ಸಹಾಯಕ ಚುನಾವಣಾಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ಸಂತೋಷ ಇಲಕಲ್, ವ್ಯವಸ್ಥಾಪಕ ವಿ.ಎಸ್.ಉತ್ನಾಳ, ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ, ಸಿಬ್ಬಂದಿ ಎಂ.ಎಂ.ಪಾಟೀಲ, ಎಸ್.ಬಿ.ಚಿನಿವಾರ, ಸವಿತಾ ಚೌಧರಿ ಕಾರ್ಯನಿರ್ವಹಿಸಿದರು.

ರಹಸ್ಯ ಬಿಟ್ಟುಕೊಡದ ನಾಡಗೌಡ : ಟಿಎಪಿಸಿಎಂಎಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರವೇನಾದರೂ ನಡೆದಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾಡಗೌಡರು, ಸದ್ಯಕ್ಕೆ ಅಧ್ಯಕ್ಷರಾಗಿ ಮೇಟಿ,ಉಪಾಧ್ಯಕ್ಷರಾಗಿ ಸೀತಿಮನಿ ಆಯ್ಕೆಯಾಗಿದ್ದಾರೆ. ಇವರು ಮುಂದುವರೆಯಲಿದ್ದಾರೆ.ಇವರು ಹೇಗೆ ಕೆಲಸ ಮಾಡಲಿದ್ದಾರೆ ಎಂಬುದನ್ನು ಗಮನಿಸುತ್ತೇವೆ. ಇದು ರಾಜಕಾರಣ, ಇಲ್ಲಿ ಏನು ನಡೆಯುತ್ತದೆ ಎಂದು ಹೇಳಲಾಗದು.ಒಪ್ಪಂದ ಸೂತ್ರದ ಕುರಿತು ಚರ್ಚೆ ನಡೆಸಿದ್ದೇವೆ.ಈಗಲೇ ಏನೂ ಹೇಳಲಾಗದು ಎಂದು ಅಧಿಕಾರ ಹಂಚಿಕೆ ಸೂತ್ರದ ರಹಸ್ಯವನ್ನು ನಾಡಗೌಡರು ಬಿಟ್ಟುಕೊಡಲಿಲ್ಲ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ. ಕೆ. ಬಿರಾದಾರ, ಕಾಂಗ್ರೆಸ್ ಮುಖಂಡ ಸಿ. ಬಿ. ಅಸ್ಕಿ ಮಾತನಾಡಿ, ಟಿಎಪಿಸಿಎಂಎಸ್‌ನಲ್ಲಿ ಶಾಸಕರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಬೆಂಬಲಿತರ ಕೈಗೆ ಅಧಿಕಾರ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ರೈತರಿಗೆ ಅನುಕೂಲ ಒದಗಿಸುವ ಕಾರ್ಯ ಮಾಡಲಿ ಎಂದು ತಿಳಿಸಿದರು. ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮೇಟಿ, ಸೀತಿಮನಿ ಅಭಿಮಾನಿಗಳು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು