6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ 161ರಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಜನ ಅಭಿವೃದ್ಧಿ ಮಾಡಲು ಜನ ಆಯ್ಕೆ ಮಾಡಿ ಕಳಿಸಿದ್ದಾರೆ.ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ ಎಂಬ ಕೊರಗು ಹಲವರಲ್ಲಿದೆ.ಆದರೆ ಹಿಂದಿನ ಸರ್ಕಾರ 1.20 ಲಕ್ಷ ಕೋಟಿ ರೂ.ಬಿಲ್ ಕೊಡುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಬಿದ್ದಿವೆ.ಹಿಂದಿನ ಸರ್ಕಾರದಲ್ಲಿ ಬಾಕಿ ಇರಿಸಿದ್ದ ಬಿಲ್‌ನ್ನು ನಾವು ಕೊಡಬೇಕಾಯಿತು.ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವವರು ಯೋಜನೆಗಳನ್ನು ಹಿಂದಿರುಗಿಸಿ ಅಥವಾ ನಿರಾಕರಿಸಬೇಕು ಎಂದು ಹೇಳಿದರು.

33 ಸಾವಿರ ಕೋಟಿ ರೂ.ಗುತ್ತಿಗೆದಾರರ ಬಿಲ್ ಬಾಕಿ ಇದೆ. ಅಭಿವೃದ್ಧಿ ನಿಲ್ಲದ ಹಾಗೆ ಸರ್ಕಾರ ಪ್ರಯತ್ನ ಮಾಡುತ್ತಿದೆ. ಮತಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ.ಹಿಂದೆ 15 ಲಕ್ಷ ರೂ.ಗಳಲ್ಲಿ ಒಂದು ಕಿ.ಮೀ ರಸ್ತೆ ಮಾಡುತ್ತಿದ್ದರೆ ಈಗ ಒಂದು ಕೋಟಿ ರೂ.ಗೆ ಕಿ.ಮೀ ರಸ್ತೆಗೆ ವೆಚ್ಚ ಆಗುತ್ತಿದೆ.ನಾವು ರಾಜಕೀಯ ಭಾಷಣ ಮಾಡುವವರನ್ನು ನಂಬುತ್ತೇವೆ.ನಾವು ಅಭಿವೃದ್ಧಿ ಮಾಡಿದ್ದೇವೆ.ಅವಕಾಶ ಸಿಕ್ಕಾಗ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದೇವೆ ಎಂದರು.

ನಮ್ಮ ಅಭಿವೃದ್ಧಿ ಕೆಲಸಗಳಿಗೆ ಪ್ರಚಾರ ಕೊಡುವಂತಹದ್ದಲ್ಲ.ಪ್ರಚಾರ ಮಾಡುವುದೇನಿದೆ.ಜನರು ಕೊಟ್ಟ ದುಡ್ಡನ್ನು ಜನರ ಅಭಿವೃದ್ದಿಗೆ ಬಳಸುತ್ತಿದ್ದೇವೆ ಎಂದರು.

ಪಿಡಬ್ಲೂö್ಯಡಿ ಎಇಇ ಅಯ್ಯಪ್ಪಗೌಡ ರೆಡ್ಡಿ ಮಾತನಾಡಿ, ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ 500 ಮೀ ರಸ್ತೆಯನ್ನು 6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದ್ದು ಅಕ್ಕಪಕ್ಕದಲ್ಲಿ ಚರಂಡಿ,ಮಧ್ಯೆದಲ್ಲಿ ಡಿವೈಡರ್,ಬೀದಿ ದೀಪ ಅಳವಡಿಸಲಾಗುತ್ತದೆ ಎಂದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸತೀಶ ಓಸ್ವಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಎಸ್.ಪಾಟೀಲ,ವಾಸುದೇವ ಶಾಸ್ತಿçÃ,ಪ್ರಭುರಾಜ ಕಲ್ಬುರ್ಗಿ, ಕಾಮರಾಜ ಬಿರಾದಾರ,ಶರಣು ಸಜ್ಜನ, ಸಂಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ ಇಂಗಳಗೇರಿ,ಪುರಸಭೆ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಕಾಂಗ್ರೆಸ್ ಮುಖಂಡರು ಇದ್ದರು.

80 ಮರಗಳ ತೆರವು :
ಈ ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30-40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು ಎಂದು ಪಿಡಬ್ಲೂö್ಯಡಿ ಎಇಇ ಮಾಹಿತಿ ನೀಡಿದರು.ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ