ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ಇಂಗಳಗೇರಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಕಾಶ ಮಾಲಗತ್ತಿ ಒಂದು ಮತದ ಅಂತರದಿAದ ಪೀರಣ್ಣಿ ಕೆಳಗಿನಮನಿ ಅವರ ವಿರುದ್ಧ ಜಯಸಾಧಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಚುನಾವಣೆ ಪ್ರಕ್ರಿಯೆಲ್ಲಿ 15 ಸದಸ್ಯ ಬಲದಲ್ಲಿ ಎಲ್ಲ ಸದಸ್ಯರು ಹಾಜರಾಗಿದ್ದರು.ಎರಡೂ ಬಣದವರು ಕಾಂಗ್ರೆಸ್ ಪಕ್ಷದ ಬೆಂಬಲಿತರೇ ಆಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ, ಪಿರಣ್ಣಿ ಕೆಳಗಿನಮನಿ ನಾಮಪತ್ರ ಸಲ್ಲಿಸಿದ್ದರು.ಅದರಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ತಾಪಂ ಇಒ ವೆಂಕಟೇಶ ವಂದಾಲ, ಸದಸ್ಯರ ಸಹಮತದೊಂದಿಗೆ ಗೌಪ್ಯ ಮತದಾನ ಮಾಡುವ ತೀರ್ಮಾನದಂತೆ ಸದಸ್ಯರು ಗೌಪ್ಯವಾಗಿ ಮತ ಚಲಾಯಿಸಿದರು.ಅದರಲ್ಲಿ ಪ್ರಕಾಶ ಮಾಲಗತ್ತಿ ಅವರಿಗೆ 8, ಪೀರಣ್ಣಿ ಕೆಳಗಿನಮನಿ ಅವರಿಗೆ 7 ಮತಗಳು ಲಭಿಸಿ ಸೋಲನುಭವಿಸಿದರು.

ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದ್ದರಿಂದ ಶೀಲವಂತಿ ಮಾದರ ಒಬ್ಬರೇ ಸದಸ್ಯೆಯಾಗಿದ್ದು ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.ಚುನಾವಣಾ ಕಾರ್ಯಕ್ಕೆ ಪಿಡಿಒ ಮುಕ್ಕಣ್ಣ ನಾಯಕ,ಕಾರ್ಯದರ್ಶಿ ಜಿ.ಎಲ್.ಬಿರಾದಾರ,ಸಿಬ್ಬಂದಿ ಎಸ್.ಆಯ್.ಹೆಬ್ಬಾಳ,ಬಿ.ಎಲ್.ಮಾದರ,ಸಿ.ಎಸ್.ಬೇವಿನಗಿಡ,ಸಂಗಪ್ಪ ತಳವಾರ,ಕಾಶೀನಾಥ ಮಾದರ ಸಹಕಾರ ನೀಡಿದರು.


ಚುನಾವಾಣಾಧಿಕಾರಿಯೊಂದಿಗೆ ವಾಗ್ವಾದ :
ಪರಾಜಿತ ಅಭ್ಯರ್ಥಿ ಪಿರಣ್ಣಿ ಕೆಳಗಿನಮನಿ ಚುನಾವಣೆಯಲ್ಲಿ ತಮ್ಮ ಜೊತೆಗೆ ಗುರುತಿಸಿಕೊಂಡಿದ್ದ ಸದಸ್ಯರೊಬ್ಬರನ್ನು ಹೈಜಾಕ್ ಮಾಡಲಾಗಿದೆ ಎಂದು ಆರೋಪಿಸಿ ಗೌಪ್ಯ ಮತದಾನದ ವೇಳೆ ದಾರಿ ತಪ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ ವಂದಾಲ ಅವರೊಂದಿಗೆ ವಾಗ್ವಾದ ನಡೆಸಿದರು.ಚುನಾವಣಾಧಿಕಾರಿ ವಂದಾಲ ಚುನಾವಣಾ ಪ್ರಕ್ರಿಯೆಗಳ ಕುರಿತು ಆಕ್ರೋಶಗೊಂಡಿದ್ದ ಕೆಳಗಿನಮನಿ ಬೆಂಬಲಿಗರಿಗೆ ಮನವರಿಕೆ ಮಾಡಿದ ಬಳಿಕ ಪ್ರತಿಭಟಿಸಲು ಮುಂದಾದವರು ಸಮಾಧಾನಗೊಂಡರು.ಪಿಎಸೈ ಜ್ಯೋತಿ ಖೋತ ,ಎ.ಎಸ್.ಐ ಪಿ.ಬಿ.ದೊಡಮನಿ, ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ