ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ಇಂಗಳಗೇರಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಕಾಶ ಮಾಲಗತ್ತಿ ಒಂದು ಮತದ ಅಂತರದಿAದ ಪೀರಣ್ಣಿ ಕೆಳಗಿನಮನಿ ಅವರ ವಿರುದ್ಧ ಜಯಸಾಧಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಚುನಾವಣೆ ಪ್ರಕ್ರಿಯೆಲ್ಲಿ 15 ಸದಸ್ಯ ಬಲದಲ್ಲಿ ಎಲ್ಲ ಸದಸ್ಯರು ಹಾಜರಾಗಿದ್ದರು.ಎರಡೂ ಬಣದವರು ಕಾಂಗ್ರೆಸ್ ಪಕ್ಷದ ಬೆಂಬಲಿತರೇ ಆಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ, ಪಿರಣ್ಣಿ ಕೆಳಗಿನಮನಿ ನಾಮಪತ್ರ ಸಲ್ಲಿಸಿದ್ದರು.ಅದರಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ತಾಪಂ ಇಒ ವೆಂಕಟೇಶ ವಂದಾಲ, ಸದಸ್ಯರ ಸಹಮತದೊಂದಿಗೆ ಗೌಪ್ಯ ಮತದಾನ ಮಾಡುವ ತೀರ್ಮಾನದಂತೆ ಸದಸ್ಯರು ಗೌಪ್ಯವಾಗಿ ಮತ ಚಲಾಯಿಸಿದರು.ಅದರಲ್ಲಿ ಪ್ರಕಾಶ ಮಾಲಗತ್ತಿ ಅವರಿಗೆ 8, ಪೀರಣ್ಣಿ ಕೆಳಗಿನಮನಿ ಅವರಿಗೆ 7 ಮತಗಳು ಲಭಿಸಿ ಸೋಲನುಭವಿಸಿದರು.

ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದ್ದರಿಂದ ಶೀಲವಂತಿ ಮಾದರ ಒಬ್ಬರೇ ಸದಸ್ಯೆಯಾಗಿದ್ದು ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.ಚುನಾವಣಾ ಕಾರ್ಯಕ್ಕೆ ಪಿಡಿಒ ಮುಕ್ಕಣ್ಣ ನಾಯಕ,ಕಾರ್ಯದರ್ಶಿ ಜಿ.ಎಲ್.ಬಿರಾದಾರ,ಸಿಬ್ಬಂದಿ ಎಸ್.ಆಯ್.ಹೆಬ್ಬಾಳ,ಬಿ.ಎಲ್.ಮಾದರ,ಸಿ.ಎಸ್.ಬೇವಿನಗಿಡ,ಸಂಗಪ್ಪ ತಳವಾರ,ಕಾಶೀನಾಥ ಮಾದರ ಸಹಕಾರ ನೀಡಿದರು.


ಚುನಾವಾಣಾಧಿಕಾರಿಯೊಂದಿಗೆ ವಾಗ್ವಾದ :
ಪರಾಜಿತ ಅಭ್ಯರ್ಥಿ ಪಿರಣ್ಣಿ ಕೆಳಗಿನಮನಿ ಚುನಾವಣೆಯಲ್ಲಿ ತಮ್ಮ ಜೊತೆಗೆ ಗುರುತಿಸಿಕೊಂಡಿದ್ದ ಸದಸ್ಯರೊಬ್ಬರನ್ನು ಹೈಜಾಕ್ ಮಾಡಲಾಗಿದೆ ಎಂದು ಆರೋಪಿಸಿ ಗೌಪ್ಯ ಮತದಾನದ ವೇಳೆ ದಾರಿ ತಪ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ ವಂದಾಲ ಅವರೊಂದಿಗೆ ವಾಗ್ವಾದ ನಡೆಸಿದರು.ಚುನಾವಣಾಧಿಕಾರಿ ವಂದಾಲ ಚುನಾವಣಾ ಪ್ರಕ್ರಿಯೆಗಳ ಕುರಿತು ಆಕ್ರೋಶಗೊಂಡಿದ್ದ ಕೆಳಗಿನಮನಿ ಬೆಂಬಲಿಗರಿಗೆ ಮನವರಿಕೆ ಮಾಡಿದ ಬಳಿಕ ಪ್ರತಿಭಟಿಸಲು ಮುಂದಾದವರು ಸಮಾಧಾನಗೊಂಡರು.ಪಿಎಸೈ ಜ್ಯೋತಿ ಖೋತ ,ಎ.ಎಸ್.ಐ ಪಿ.ಬಿ.ದೊಡಮನಿ, ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ