ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ, ತಾಲ್ಲೂಕಿನ ಗ್ರಾಮವೊಂದರಲ್ಲಿ ದಲಿತ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ರಾಜ್ಯದ ವಿವಿಧೆಡೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಖಂಡಿಸಿ ಶುಕ್ರವಾರ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ಮುದ್ದೇಬಿಹಾಳ ಬಂದ್‌ಗೆ ನಾಗರಿಕರು ಉತ್ತಮ ಸ್ಪಂದನೆ ನೀಡಿದ್ದು ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಬೆಳಗ್ಗೆ 6 ಗಂಟೆಯಿAದಲೇ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಬಸ್ ನಿಲ್ದಾಣದಲ್ಲಿ ಜನರು ಬರಲಿಲ್ಲ.ಬಂದ್ ಕರೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬರುವವರ ಸಂಖ್ಯೆಯೂ ಇಳಿಮುಖವಾಗಿ ಜನಸಂಚಾರ ವಿರಳವಾಗಿತ್ತು. ಸರಕಾರಿ ನೌಕರಿ ಸೇವೆಗೆ ತೆರಳಲು ಬಸ್ ಇಲ್ಲದೇ ಪರದಾಡಿ ಖಾಸಗಿ ವಾಹನಗಳನ್ನು ಪಟ್ಟಣದ ಹೊರವಲಯದಲ್ಲಿ ಆಶ್ರಯಿಸಿದರು.

ಬಂದ್ ಯಶಸ್ವಿಗೆ ಸಹಕರಿಸುವಂತೆ ನಾಗರಿಕರಲ್ಲಿ,ವ್ಯಾಪಾರಸ್ಥರಲ್ಲಿ,ವಿವಿಧ ಖಾಸಗಿ ಶಾಲೆಗಳು,ಹೊಟೇಲ್,ಬಟ್ಟೆ,ಬಜಾರ್ ಅಸೋಶಿಯೇಷನ್,ಏಪಿಎಂಸಿ,ಸರಾಫ್ ವರ್ತಕರು,ಕಿರಾಣಿ ವರ್ತಕರು,ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಪಟ್ಟಣದ ನಾಗರಿಕರಿಗೆ ದಲಿತಪರ,ಪ್ರಗತಿಪರ ಸಂಘಟನೆಯ ಒಕ್ಕೂಟದವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾರೊಬ್ಬರೂ ಅಂಗಡಿಗಳನ್ನು ತೆರೆಯಲಿಲ್ಲ.

ಅಗತ್ಯ ವಸ್ತುಗಳಾದ ಔಷಧಿ,ಹಾಲು,ದಿನಪತ್ರಿಕೆ ಹಾಗೂ ಆಸ್ಪತ್ರೆಗಳ ಸೇವೆ ಅಬಾಧಿತವಾಗಿತ್ತು.ಅಟೋ ಸಂಚಾರ ತುರ್ತು ಪರಿಸ್ಥಿತಿಗೆ ಸೇವೆ ನೀಡಿದ್ದು ಕಂಡು ಬಂದಿತು.

ಭಾರಿ ಪೊಲೀಸ್ ಬಂದೋಬಸ್ತ್ : ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಗ್ಗೆ ಸಿಪಿಐ ಮೊಹ್ಮದಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಸಿಬ್ಬಂದಿಗೆ ಪೆಟ್ರೋಲಿಂಗ್ ನಡೆಸಿದರು.ಪಟ್ಟಣದ ವ್ಯಾಪ್ತಿಯಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ,ಮಾನವ ಸರಪಳಿ ನಿರ್ಮಾಣದ ಹಿನ್ನೆಲೆಯಲ್ಲಿ ಬ¸ Àವೇಶ್ವರ ಸಂಪರ್ಕಿಸುವ ನಾಲ್ಕು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಿಸಿದ್ದರು.ಇದರಿಂದ ಬೈಕ್,ಕಾರು,ಜೀಪು,ಅಂಬ್ಯುಲೆನ್ಸ್ಗಳAತಹ ತುರ್ತು ಸೇವೆಗಳನ್ನು ನೀಡಲು ತೊಂದರೆಯಾಗಿತು.ಚಹಾ, ಪಾನ್ ಅಂಗಡಿ ಬಂದ್ ಮಾಡಿದ್ದರು.

ಸಂವಿಧಾನಕ್ಕೆ ಅವಮಾನವಾದರೆ ಸಹಿಸುವುದಿಲ್ಲ-ನಡಹಳ್ಳಿ
ಮುದ್ದೇಬಿಹಾಳ : ಸುಪ್ರೀಂಕೋರ್ಟ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ವಿವಿಧ ದಲಿತಪರ,ಪ್ರಗತಿಪರ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಕರೆಯ ಹಿನ್ನೆಲೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರನ್ನುದ್ದೇಶಿಸಿ ಅವರು ಮಾತನಾಡಿದರು.ಕ್ಷಮೆಗೆ ಅರ್ಹ ಅಲ್ಲದ ಕೆಲಸ ಮಾಡಿರುವ ವಕೀಲನ ರಕ್ಷಣೆ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಟೀಕಿಸಿದರು.

ಮಾನವ ಬಂಧುತ್ವ ವೇದಿಕೆ ಸಂಚಾಲಕ ಎಸ್.ಎಂ.ನೆರಬೆAಚಿ,ದಲಿತಪರ ಸಂಘಟನೆ ಹೋರಾಟಗಾರ ಚೆನ್ನಪ್ಪ ವಿಜಯಕರ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ರೇವಣೆಪ್ಪ ಚಲವಾದಿ ಮತ್ತಿತರರು ಮಾತನಾಡಿ,ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.ಅಮಾನವೀಯವಾದ ಇಂತಹ ಘಟನೆಗಳು ನಡೆಯಬಾರದೆಂದರೆ ಸರಕಾರ ಕಠಿಣ ಶಿಕ್ಷೆ ತ್ವರಿತವಾಗಿ ವಿಧಿಸಬೇಕು.ಸಂವಿಧಾನದವನ್ನು ಅಪಮಾನಿಸುವ ಯಾರೇ ಇದ್ದರೂ ಅವರನ್ನು ಮಟ್ಟ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಹೋರಾಟದ ನೇತೃತ್ವ ವಹಿಸಿದ್ದ ಮುಖಂಡ ಹರೀಶ ನಾಟೀಕಾರ,ಯುವ ಕಾಂಗ್ರೆಸ್ ಮುಖಂಡ ಮಹ್ಮದರಫೀಕ ಶಿರೋಳ,ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯ್ಕಮಕ್ಕಳ ಮತ್ತಿತರರು ಮಾತನಾಡಿದರು.
ಮುಖಂಡರಾದ ಪರಶುರಾಮ ಮುರಾಳ,ಪ್ರಕಾಶ ಚಲವಾದಿ ಸರೂರ,ಆನಂದ ದೇವೂರ, ಆನಂದ ಮುದೂರ,ಮಲ್ಲು ತಳವಾರ, ಸಿದ್ದಪ್ಪ ಚಲವಾದಿ,ಮಂಜುನಾಥ ಕಟ್ಟಿಮನಿ,ಪ್ರಶಾಂತ ಕಾಳೆ,ಯಮನಪ್ಪ ಚಲವಾದಿ ಮೊದಲಾದವರು ಪಾಲ್ಗೊಂಡಿದ್ದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಹೋರಾಟಗಾರರು ರ‍್ಯಾಲಿ ನಡೆಸಿದರು.ಅಂಬೇಡ್ಕರ್ ವೃತ್ತದಲ್ಲಿ ತಹಶೀಲ್ದಾರ್ ಕೀರ್ತಿ ಚಾಲಕ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

ಅತ್ಯಾಚಾರ ಎಸಗಿ,ಕೊಲೆಯಾಗಿರುವ ಅಪ್ರಾಪ್ತೆ ಕುಟುಂಬಕ್ಕೆ ಎರಡು ಎಕರೆ ಜಮೀನು, 50 ಲಕ್ಷ ಪರಿಹಾರ,ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಒದಗಿಸಬೇಕು.ಆರೋಪಿತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ ಕಿಶೋರ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ದ,ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿರುವ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ