3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

ಮುದ್ದೇಬಿಹಾಳ : ಕಬ್ಬಿಗೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ಕಟಾವು ಮಾಡಲು ಕಾರ್ಖಾನೆಯವರು ಆದೇಶ ನೀಡಬಾರದು.ಅಲ್ಲಿಯವರೆಗೂ ನಾವು ಹೋರಾಟ ಬಿಟ್ಟು ಕದಲುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದರು.

ತಾಲ್ಲೂಕಿನ ಯರಗಲ್ ಮದರಿ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರಾö್ಯಕ್ಟರ್‌ಗಳನ್ನು ತಂಗಡಗಿ ಗ್ರಾಮದ ಸಮೀಪದಲ್ಲಿರುವ ಅಮರಗೋಳ ಕ್ರಾಸ್‌ನಲ್ಲಿ ನಿಲುಗಡೆ ಮಾಡಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಈ ನಿರ್ಧಾರವನ್ನು ಅಧಿಕಾರಿಗಳಿಗೆ ಪ್ರತಿಭಟನಾಕಾರರು ತಿಳಿಸಿದ್ದಾರೆ.

ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ಮಾತನಾಡಿ,ಕಾರ್ಖಾನೆಗಳಿಗೆ ಲಾಭವಿದ್ದರೂ ರೈತರಿಗೆ ಅದರ ಲಾಭಾಂಶವನ್ನು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.ಪ್ರತಿಭಟನೆಗೆ ಮುಂದಾದ ರೈತರನ್ನು ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ದೂರಿದರು.

ರೈತ ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಪೊಲೀಸರು ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ರೈತರಿಗೆ ರಕ್ಷಣೆ ಒದಗಿಸಬೇಕು.ರೈತರ ಬೇಡಿಕೆಯಂತೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ನುರಿಸುವುದನ್ನು ಬಂದ್ ಮಾಡಬೇಕು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ಈಗಾಗಲೇ ಹೊಲಗಳಲ್ಲಿ ಕಟಾವು ಮಾಡಿರುವ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಅವಕಾಶ ಕಲ್ಪಿಸಬೇಕು.ನಾಳೆಯಿಂದ ಕಬ್ಬು ಕಡಿತ ನಿಲ್ಲಿಸುವಂತೆ ಕಾರ್ಖಾನೆಯವರು ರೈತರಿಗೆ ತಿಳಿಸಲಿದ್ದಾರೆ.ಹೋರಾಟದಿಂದ ಯಾವುದೇ ಒಬ್ಬ ರೈತನಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.

ಬಾಲಾಜಿ ಶುರ‍್ಸ್ ನಿರ್ದೇಶಕರಾದ ರಾಹುಲಗೌಡ ಪಾಟೀಲ, ಕಬ್ಬು ಪೂರೈಕೆ ವಿಭಾಗದ ಜಿ.ಎಂ.ಬಿರಾದಾರ ಮಾತನಾಡಿ, ಅಧಿಕಾರಿಗಳು,ರೈತರ ಮನವಿಯಂತೆ ಈಗಾಗಲೇ ಕಟಾವು ಮಾಡಿದ ಜಮೀನಿನಲ್ಲಿರುವ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಅನುವು ಮಾಡಿಕೊಟ್ಟ ಬಳಿಕ ನ.6 ರಿಂದಲೇ ಕಬ್ಬು ಕಟಾವು ಮಾಡುವುದನ್ನು ಸ್ಥಗಿತಗೊಳಿಸುವಂತೆ ರೈತರಿಗೆ ತಿಳಿಸಲಾಗುವುದು.ಸರ್ಕಾರದ ಮಟ್ಟದಲ್ಲಿ ಬೆಲೆ ಹೆಚ್ಚಳ ನಿರ್ಧಾರ ಆಗಬೇಕಿರುವುದರಿಂದ ಅಲ್ಲಿಯವರೆಗೆ ಕಾಯುವುದು ಅನಿವಾರ್ಯ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ, ಕಂದಾಯ ನಿರೀಕ್ಷಕ ಪವನ್ ತಳವಾರ, ಪಿಎಸೈ ಸಂಜಯ ತಿಪರೆಡ್ಡಿ, ರೈತರಾದ ಸಿದ್ದಣ್ಣ ಮೇಟಿ, ಮಲ್ಲಿಕಾರ್ಜುನ ಬೀಸಲದಿನ್ನಿ, ಸೋಮನಗೌಡ ಪಾಟೀಲ, ಶಂಕ್ರಗೌಡ ಲಿಂಗದಳ್ಳಿ, ಗುರುಸಂಗಪ್ಪ ಹಂಡರಗಲ್ಲ, ಶಿವನಗೌಡ ಯಾಳವಾರ,ಶ್ರೀಶೈಲ ಅಳ್ಳಗಿ, ನಿಖಿಲ ಮಲಗಲದಿನ್ನಿ,ಗಂಗು ಕುಂಬಾರ,ಬಸನಗೌಡ ಗೋನಾಳ, ಬಸನಗೌಡ ಬಿರಾದಾರ,ಮಾಳಪ್ಪ ಬೂದಿಹಾಳ,ಬಸವರಾಜ ಮಾಮನಿ,ಹರೀಶ ಲಾಯದಗುಂದಿ,ಶಿವನಗೌಡ ಬಿರಾದಾರ (ಜಲಪೂರ) ಮೊದಲಾದವರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ