‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬಿಗೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕ್ಷೇತ್ರದ ಶಾಸಕರು, ಮಾಜಿ ಶಾಸಕರು ರೈತರ ಋಣದಲ್ಲಿದ್ದೀರಿ.ನೀವು ಬಂದು ಬೆಂಬಲ ಕೊಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಎಲ್ಲ ಕಾರ್ಖಾನೆಗಳು ರಾಜಕಾರಣಿಗಳದ್ದೇ ಇವೆ. ರೈತರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಚಿವ ಶಿವಾನಂದ ಪಾಟೀಲರು ಹಿಂದೆ ಕಬ್ಬಿನ ತೂಕದಲ್ಲಿ ಕಾರ್ಖಾನೆಯವರಿಂದ ಮೋಸವಾಗುತ್ತಿದೆ. ಸರ್ಕಾರದಿಂದಲೇ ತೂಕದ ಯಂತ್ರ ಹಾಕುವುದಾಗಿ ತಿಳಿಸಿದ್ದರು.ಅವರು ಕಬ್ಬಿನ ಕಾರ್ಖಾನೆಗಳ ಮಾಲೀಕರು ಭೇಟಿಯಾದ ನಂತರ ಮೌನಕ್ಕೆ ಶರಣವಾಗಿದ್ದಾರೆ ಎಂದು ದೂರಿದರು.

ಪಕ್ಕದ ನಾಯನೇಗಲಿ ಶುಗರ್ಸ್ನವರು ಟನ್ಗೆ 3200 ಕೊಡುತ್ತಿದ್ದಾರೆ.ಆದರೆ ಇಲ್ಲಿಯ ಬಾಲಾಜಿ ಕಾರ್ಖಾನೆಯವರು 300 ರೂ.ಕಡಿಮೆ ಕೊಡುತ್ತಿದ್ದಾರೆ.ಈ ಭಾಗದ ಕಾರ್ಖಾನೆಗೆ ದೂರ ಊರಿನ ಕಬ್ಬನ್ನು ಮೊದಲು ಸಾಗಿಸುತ್ತಾರೆ. ನಂತರ ಸ್ಥಳೀಯ ರೈತರ ಕಬ್ಬನ್ನು ತರಿಸಿಕೊಳ್ಳುವುದರಿಂದ ಇಳುವರಿ ಕಡಿಮೆ ಬರುತ್ತಿದೆ.ಅದೇ ನಮ್ಮ ಭಾಗದ ಕಬ್ಬು ನಾಯನೇಗಲಿ ಕಾರ್ಖಾನೆಗೆ ಹೋದಾಗ ಕಬ್ಬು ರಿಕವರಿ ಬರುತ್ತಿದೆ. ನಿಮ್ಮಲ್ಲೇಕೆ ಬರುವುದಿಲ್ಲ ಎಂದು ಪ್ರಶ್ನಿಸಿದರು.

ನಮ್ಮ ಭಾಗದ ಕಬ್ಬಿನಲ್ಲಿ ಮೈಸೂರು,ಮಂಡ್ಯ ಜಿಲ್ಲೆಗಳಲ್ಲಿ ಬೆಳೆಯುವ ಕಬ್ಬಿಗಿಂತ ಹೆಚ್ಚಿನ ಸಕ್ಕರೆ ಅಂಶ ಇದೆ.ಗೊಬ್ಬರ ಕೊಡುತ್ತೇವೆ ಎಂದು ಟನ್ 100 ರೂ.ಗೆ ಕಡಿತ ಮಾಡುತ್ತಿದ್ದಾರೆ.ಅವರು ಕೊಡುತ್ತಿರುವುದು ನಕಲಿ ಗೊಬ್ಬರವಾಗಿದೆ.ಸರಕಾರದ ಆದೇಶ ಇಲ್ಲದೇ ನೀವು ಏಕೆ ಗೊಬ್ಬರ ಕೊಡುತ್ತಿದ್ದೀರಿ ಎಂದು ಕೇಳಿದರು.ನಮ್ಮ ರೈತರು ಜಾಗೃತರಿರಬೇಕು.ನಮ್ಮನಮ್ಮಲ್ಲಿಯೇ ಜಗಳ ಹಚ್ಚುವ ಜನ ಇರುತ್ತಾರೆ ಎಂಬುದನ್ನು ಅರಿತುಕೊಂಡುನ್ಯಾಯಯುತ ಬೆಲೆ ದೊರಕುವವರೆಗೂ ನಾನು ಹೋರಾಟದಲ್ಲಿ ಇರುತ್ತೇನೆ ಎಂದು ಹೇಳಿದರು.

ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ರೈತರು ದೇಶಕ್ಕೆ ಅನ್ನ ಕೊಡುವ ಕೆಲಸ ಮಾಡುತ್ತಿದ್ದಾನೆ.ಆತನಿಗೆ ನ್ಯಾಯಯುತವಾಗಿ ದೊರೆಯಬೇಕಾದ ಬೆಲೆ ದೊರಕುವವರೆಗೂ ಶ್ರೀ ಮಠದ ಬೆಂಬಲ ಹೋರಾಟಕ್ಕೆ ಇರಲಿದೆ ಎಂದು ಹೇಳಿದರು.

ಹೋರಾಟವನ್ನುದ್ದೇಶಿಸಿ ಮುಖಂಡರಾದ ಶಿವನಗೌಡ ಬಿರಾದಾರ ಜಲಪೂರ, ಶಿವು ಕನ್ನೊಳ್ಳಿ, ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಶಶಿಧರ ಬಂಗಾರಿ ಮತ್ತಿತರರು ಮಾತನಾಡಿದರು.ಮುಖಂಡರಾದ ಸೋಮನಗೌಡ ಕೋಳೂರ,ಬಸನಗೌಡ ಪಾಟೀಲ,ಮೈಬೂಬ ಹಡಲಗೇರಿ,ಗುರುಸಂಗಪ್ಪ ಹಡಲಗೇರಿ, ಸಂಗಪ್ಪ ಬಾಗೇವಾಡಿ,ಮುತ್ತು ಮೇಟಿ,ಶ್ರೀಕಾಂತ ನಾಡಗೌಡ,ರಾಜು ತಿಳಗೂಳ,ಹಣಮಂತ್ರಾಯ ತುಂಬಗಿ,ಅಮರಪ್ಪ ನವಲಿ,ವಿಜಯ ಹಿರೇಗೌಡರ,ಇಮಾಮಸಾಬ ಮುಲ್ಲಾ, ಶಿವರಾಜ ಬಿರಾದಾರ ಪಾಲ್ಗೊಂಡಿದ್ದರು.

3 ಕಿ.ಮೀವರೆಗೂ ಸಾಲುಗಟ್ಟಿ ನಿಂತ ಟ್ರಾಕ್ಟರಗಳು :ಕಬ್ಬು ಕಟಾವು ಕಾರ್ಯ ಹಾಗೂ ನುರಿಸುವ ಕಾರ್ಯ ಬಂದ್ ಮಾಡಿದ್ದರಿಂದ ಅಮರಗೋಳ ಕ್ರಾಸ್ನಿಂದ ಗಂಗೂರ ಕ್ರಾಸ್ದವರೆಗೂ ಕಬ್ಬು ತುಂಬಿದ್ದ ಟ್ರಾಕ್ಟರಗಳು ಸಾಲುಗಟ್ಟಿ ನಿಂತಿದ್ದವು.ಅoದಾಜು 3 ಕಿ.ಮೀ ದೂರದವರೆಗೆ ಟ್ರಾö್ಯಕ್ಟರ್ಗಳು ನಿಂತುಕೊAಡಿದ್ದು ಅದರಲ್ಲಿ ಚಾಲಕರು ಸ್ಥಳದಲ್ಲಿಯೇ ಬುತ್ತಿ ಕಟ್ಟಿಕೊಂಡು ಬಂದು ಊಟ ಮಾಡುತ್ತ ಕೂತಿರುವ ದೃಶ್ಯಗಳು ಕಂಡು ಬಂದವು.ಹೋರಾಟದ ಸ್ಥಳದಲ್ಲಿಯೇ ಕೆಲವು ಮುಖಂಡರು ರೈತರಿಗೆ,ಟ್ರಾö್ಯಕ್ಟರ್ ಚಾಲಕರಿಗೆ ದಾಸೋಹಕ್ಕಾಗಿ ಸಹಾಯ ಮಾಡುತ್ತಿರುವುದು ಕಂಡು ಬಂದಿತು.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ