ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ ಹಲವು ಬಾರಿ ಅಧಿಕಾರವನ್ನು ಮತ್ತೊಬ್ಬರಿಗೆ ತ್ಯಾಗ ಮಾಡಿದ್ದಾರೆ.ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳೆಲ್ಲಾ ಮುಂದಿನ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದರು.

ಹಿರಿಯ ವರ್ತಕ ಮಂದೆಪ್ಪ ಗುರಿಕಾರ, ಬಿ.ಪಿ.ಮುರಾಳ,ವೀರೇಶ ಇಲಕಲ್ಲ,ಮುತ್ತು ಕಡಿ ಮಾತನಾಡಿ, ಶಾಸಕ ನಾಡಗೌಡರನ್ನು ನಿಗಮ ಮಂಡಳಿಗೆ ಸಿಮೀತಗೊಳಿಸದೇ ಸಚಿವ ಸ್ಥಾನ ನೀಡಿ ರಾಜ್ಯದ ಸೇವೆಗೆ ಹೈಕಮಾಂಡ್ ಬಳಸಿಕೊಳ್ಳಬೇಕು.ಹಿರಿಯ ರಾಜಕಾರಣಿಯಾಗಿರುವ ನಾಡಗೌಡರನ್ನು ಗೌರವದಿಂದ ಪಕ್ಷ ನಡೆಸಿಕೊಳ್ಳಬೇಕು ಎಂದು ಹೇಳಿದರು. ವರ್ತಕರಾದಎಂ.ಎನ್.ಪಾಟೀಲ,ಎಚ್.ಟಿ.ಬಿರಾದಾರ,ಮಲ್ಲನಗೌಡಬಿರಾದಾರ,ಬಿ.ಕೆ.ರಕ್ಕಸಗಿ,ಜಿ.ವಾಯ್.ಇಲ್ಲೂರ,ಸಿ.ಕೆ.ಮಂಗ್ಯಾಳ,ಬಿ.ಎಸ್.ಬಿರಾದಾರ,ಬಿ.ಸಿ.ಬೆಲ್ಲದ,ಎಸ್.ಎಸ್.ಕುAಟೋಜಿ,ಎ.ಎಸ್.ಗುಡ್ನಾಳ ಮತ್ತಿತರರು ಇದ್ದರು.ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಹನಮಂತ ದೇವರಿಗೆ ಕಾಯಿಕರ್ಪೂರ ಬೆಳಗಿ ಈಡುಗಾಯಿ ಒಡೆದರು.

Latest News

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ

ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ

ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬಗ್ಗೆ ಮಕ್ಕಳಲ್ಲಿ ಅಭಿಮಾನ ಶಿಕ್ಷಕರು ಬೆಳೆಸಬೇಕು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಹಡಲಗೇರಿ ವ್ಯಾಪ್ತಿಯ ಬಿ.ಎ.ಎಸ್ ಇಂಟರನ್ಯಾಷನಲ್ ಶಾಲೆಯಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಎಎಸ್ ಶಾಲೆಯು ಆಂಗ್ಲ ಮಾಧ್ಯಮವಾಗಿದ್ದರೂ ನಮ್ಮ ಕನ್ನಡದ ಬಗ್ಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ ಏಳು ವರ್ಷದ ಮಗನನ್ನು ಮಧ್ಯರಾತ್ರಿ ಬಸ್ ನಿಲ್ದಾಣದಲ್ಲಿ ಕಂಡ ಮುದ್ದೇಬಿಹಾಳ 112 ಪೊಲೀಸರು ತಮ್ಮ ಸ್ವಂತ ಹಣ ಖರ್ಚು ಮಾಡಿ ಅವರನ್ನು ಊರಿಗೆ ತಲುಪಿಸಿ ಮಾನವೀಯತೆ ಮೆರೆದ ಘಟನೆ ಈಚೇಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತುಳಜಾಪುರದಿಂದ ಮುದ್ದೇಬಿಹಾಳ ಬಸ್ ನಿಲ್ದಾಣದಕ್ಕೆ ಬಂದಿದ್ದ ತಾಲ್ಲೂಕಿನ ಜಂಗಮುರಾಳದ ಮಹಿಳೆ ಹಾಗೂ ಬಾಲಕ ತಮ್ಮೂರಿಗೆ ತೆರಳುವ ಬಸ್‌ನ್ನು