ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್‌ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸಿರುವ ಹೋರಾಟದ ಸ್ಥಳಕ್ಕೆ ಶುಕ್ರವಾರ ಸಂಜೆ ತಹಶೀಲ್ದಾರ್ ಕೀರ್ತಿ ಚಾಲಕ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು.ಮುಖ್ಯಮಂತ್ರಿಗಳು ಈಗಾಗಲೇ ಕಬ್ಬಿಗೆ ಬೆಂಬಲ ಬೆಲೆಯನ್ನಾಗಿ ನೀಡುವುದಾಗಿ ಘೋಷಣೆ ಮಾಡಿದ್ದು ಹೋರಾಟ ಹಿಂಪಡೆದುಕೊಳ್ಳುವAತೆ ಮನವಿ ಮಾಡಿದರು.
ಇದಕ್ಕೆ ಒಪ್ಪದ ಕರ್ನಾಟಕ ರಾಜ್ಯ ರೈತ ಸಂಘದ ತಾಳಿಕೋಟಿ ಅಧ್ಯಕ್ಷ ಬಾಲಪ್ಪ ಲಿಂಗದಳ್ಳಿ, ನಮಗೆ ಅಧಿಕೃತ ಆದೇಶ ಕಾರ್ಖಾನೆಯವರಿಂದ ಬರಬೇಕು.ಅಲ್ಲಿಯವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.ರೈತರ ಮುಖಂಡರು ಲಿಖಿತ ಆದೇಶ ಕಾರ್ಖಾನೆಯವರು ನೀಡಿದ್ದಲ್ಲಿ ಹೋರಾಟ ಹಿಂದಕ್ಕೆ ಪಡೆದು ಕಬ್ಬು ಪೂರೈಕೆಗೆ ಮುಂದಾಗುವುದಾಗಿ ತಿಳಿಸಿದ್ದರಿಂದ ತಹಶೀಲ್ದಾರರು ವಾಪಸ್ ಆಗಬೇಕಾಯಿತು.
ಕಾರ್ಖಾನೆಯವರು, ನಮಗೆ ಲಿಖಿತ ಆದೇಶ ಈವರೆಗೂ ಬಂದಿಲ್ಲ ಎಂದು ತಿಳಿಸಿದ್ದರಿಂದ ಹೋರಾಟ ಮುಂದುವರೆದಿದೆ. ಸಿಪಿಐ ಮೊಹ್ಮದಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ, ರೈತ ಮುಖಂಡರಾದ ಸಂಗಪ್ಪ ಬಾಗೇವಾಡಿ, ಗುರುಸಂಗಪ್ಪ ಹಂಡರಗಲ್, ರಾಜು ತಿಳಗೂಳ,ಶಿವು ಕನ್ನೊಳ್ಳಿ, ಶಿವನಗೌಡ ಜಲಪೂರ ಇದ್ದರು.

Latest News

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ

ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ

ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬಗ್ಗೆ ಮಕ್ಕಳಲ್ಲಿ ಅಭಿಮಾನ ಶಿಕ್ಷಕರು ಬೆಳೆಸಬೇಕು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಹಡಲಗೇರಿ ವ್ಯಾಪ್ತಿಯ ಬಿ.ಎ.ಎಸ್ ಇಂಟರನ್ಯಾಷನಲ್ ಶಾಲೆಯಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಎಎಸ್ ಶಾಲೆಯು ಆಂಗ್ಲ ಮಾಧ್ಯಮವಾಗಿದ್ದರೂ ನಮ್ಮ ಕನ್ನಡದ ಬಗ್ಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ ಏಳು ವರ್ಷದ ಮಗನನ್ನು ಮಧ್ಯರಾತ್ರಿ ಬಸ್ ನಿಲ್ದಾಣದಲ್ಲಿ ಕಂಡ ಮುದ್ದೇಬಿಹಾಳ 112 ಪೊಲೀಸರು ತಮ್ಮ ಸ್ವಂತ ಹಣ ಖರ್ಚು ಮಾಡಿ ಅವರನ್ನು ಊರಿಗೆ ತಲುಪಿಸಿ ಮಾನವೀಯತೆ ಮೆರೆದ ಘಟನೆ ಈಚೇಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತುಳಜಾಪುರದಿಂದ ಮುದ್ದೇಬಿಹಾಳ ಬಸ್ ನಿಲ್ದಾಣದಕ್ಕೆ ಬಂದಿದ್ದ ತಾಲ್ಲೂಕಿನ ಜಂಗಮುರಾಳದ ಮಹಿಳೆ ಹಾಗೂ ಬಾಲಕ ತಮ್ಮೂರಿಗೆ ತೆರಳುವ ಬಸ್‌ನ್ನು