ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ.

ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.
ಇಲ್ಲಿನ ಹೋರಾಟಗಾರರು ರಾಜ್ಯ ಸರ್ಕಾರ ಘೋಷಿಸಿದ ಬೆಂಬಲ ಬೆಲೆ 3300 ರೂ.ನೀಡುವಂತೆ ಒತ್ತಾಯಿಸಿ ಲಿಖಿತ ಆದೇಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರೆಸಿದ್ದರು.

ವಿಷಯ ತಿಳಿದ ಜಿಲ್ಲಾಡಳಿತ ತಕ್ಷಣ ಸರ್ಕಾರದ ಆದೇಶವನ್ನು ಕಾರ್ಖಾನೆಯವರ ಗಮನಕ್ಕೆ ತಂದು ರೈತರಿಗೆ ನ್ಯಾಯುತವಾಗಿ ಕೊಡಬೇಕಾದ ಬೆಲೆಯನ್ನು ನೀಡುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯವರು ತಕ್ಷಣ ಸರ್ಕಾರದ ನಿರ್ದೇಶನದಂತೆ ನೀಡಬೇಕಾದ ಕಬ್ಬಿನ ದರವನ್ನು ಪ್ರಕಟಿಸಿದರು.

ಹೋರಾಟಗಾರ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಬಾಲಾಜಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಬಾರದು.ನಾವು ಯಾವೊಬ್ಬ ರೈತರು ಕಾರ್ಖಾನೆಯ ವಿರೋಧಿಗಳಲ್ಲ.ನಮ್ಮ ಭಾಗದ ಕಬ್ಬು 11.50 ರಿಕವರಿ ಇದೆ.ಆದರೆ ಇಲ್ಲಿ ಕಡಿಮೆ ತೋರಿಸುವುದೇತಕ್ಕೆ ಎಂಬುದನ್ನು ಪ್ರಶ್ನಿಸಿದರು.ಇದಲ್ಲದೇ ರೈತರಿಗೆ ಕೊಡುವ ಟನ್‌ಕಬ್ಬು ಪೂರೈಕೆ ಮಾಡಿದ ರೈತನಿಗೆ ಕೊಡುವ 100 ಗೊಬ್ಬರವನ್ನು ಸ್ಥಗಿತಗೊಳಿಸಬೇಕು.ಸರ್ಕಾರದಿಂದ ಪ್ರತ್ಯೇಕವಾಗಿ ವ್ಹೇ ಬ್ರಿಡ್ಜ್ ಹಾಕಬೇಕು ಎಂದು ಆಗ್ರಹಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಸನ್ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬAಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು ಹಾಗೂ ಮುಖ್ಯಮಂತ್ರಿಗಳ ಆದೇಶದಂತೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವನ್ನು ಒಂದು ಬಾರಿ ಸರ್ಕಾರದಿಂದ 50 ರೂ. ಹಾಗೂ ಬಾಲಾಜಿ ಸಕ್ಕರೆ ಕಾರ್ಖಾನೆ 50 ರೂ.ನೀಡಬೇಕು ಎಂದು ಆದೇಶಿಸಿದೆ ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ,ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿರುವ ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರದಿಂದ ನಿರ್ಧರಿತವಾದ ಎಫ್.ಆರ್.ಪಿ ದರದಂತೆ ರೈತರ ಕಬ್ಬಿಗೆ ಬೆಲೆ ನೀಡಲಾಗುತ್ತಿದೆ.ಮುದ್ದೇಬಿಹಾಳ ತಾಲ್ಲೂಕಿನ ಬಾಲಾಜಿ ಸಕ್ಕರೆ ಕಾರ್ಖಾನೆಯ ರಿಕವರಿ 10.89 ಇದ್ದು ಸಾಗಾಣಿಕೆ,ಕಟಾವು ವೆಚ್ಚವನ್ನು ಒಳಗೊಂಡAತೆ 3771 ರೂ.ನೀಡಲಾಗುತ್ತಿದೆ.ಕಬ್ಬು ಕಟಾವು ಮತ್ತು ಸಾಗಾಣಿಕ ವೆಚ್ಚವನ್ನು ಹೊರತುಪಡಿಸಿ 3164 ರೂ. ಸರ್ಕಾರ ಹಾಗೂ ಕಾರ್ಖಾನೆ ಸೇರಿ 100 ರೂ. ಒಟ್ಟು 3264 ರೂ.ಟನ್ ಕಬ್ಬಿಗೆ ನೀಡಲಾಗುವುದು ಎಂದು ತಿಳಿಸಿದರು.

ಬಾಲಾಜಿ ಸಕ್ಕರೆ ಕಾರ್ಖಾನೆಯ ಡಿಜಿಎಂ ಜಿ.ಎಂ.ಬಿರಾದಾರ ಮಾತನಾಡಿ, ಇಲ್ಲಿನ ರೈತರ ಹೋರಾಟವನ್ನು ಗಮನದಲ್ಲಿರಿಸಿಕೊಂಡು ನಮ್ಮ ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರ ಸೂಚಿಸಿದ ದರವನ್ನು ರಿಕವರಿ ಆಧಾರದ ಮೇಲೆ ಕೊಡಲು ಸಿದ್ದವಿದೆ.ರೈತರ ಬೇಡಿಕೆಯಂತೆ ಕಾರ್ಖಾನೆಯಿಂದ ಗೊಬ್ಬರ ಕೊಡುವುದಿಲ್ಲ.ಸರ್ಕಾರದಿಂದ ಪ್ರತ್ಯೇಕ ತೂಕದ ಯಂತ್ರ ಅಳವಡಿಸುತ್ತಿದ್ದರೆ ಕಾರ್ಖಾನೆಯ ಅಭ್ಯಂತರ ಏನೂ ಇಲ್ಲ.ಆದರೆ ನಮ್ಮಲ್ಲಿ ಎಲ್ಲವೂ ಪಾರದರ್ಶಕತೆಯಿಂದ ಕೂಡಿದೆ.ರೈತ ಮುಖಂಡರು ಹಲವಾರು ಬಾರಿ ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

ಅಂತಿಮವಾಗಿ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಪಡೇಕನೂರದ ಸೋಮನಗೌಡ ಕೋಳೂರ ಮಾತನಾಡಿ, ಕಬ್ಬಿನ ರಿಕವರಿ ನಮ್ಮ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದು ರೈತ ಮುಖಂಡರು ಜಿಲ್ಲಾಡಳಿತ ರಚಿಸುವ ಸಮೀತಿಯಲ್ಲಿರುತ್ತೇವೆ.ಕಾಲಕಾಲಕ್ಕೆ ರಿಕವರಿ ಪರಿಶೀಲನೆ ನಡೆಸಲಾಗುತ್ತದೆ.ಈಗ ತಿಳಿಸಿದ ರಿಕವರಿಗಿಂತ ಹೆಚ್ಚಿನ ರಿಕವರಿ ಬಂದಲ್ಲಿ ಅದಕ್ಕೆ ಸೂಕ್ತ ಬೆಲೆಯನ್ನು ಕಾರ್ಖಾನೆಯವರು ಹಾಕಿಕೊಡಬೇಕು ಎಂದು ತಿಳಿಸಿದರು.

ಬಳಿಕ ಸರ್ಕಾರದಿಂದ ಬಂದಿದ್ದ ಆದೇಶ ಪ್ರತಿಯನ್ನು, ಕಾರ್ಖಾನೆಯಿಂದ ತಂದಿದ್ದ ಲಿಖಿತ ಆದೇಶ ಪ್ರತಿಯನ್ನು ಹೋರಾಟಗಾರರಿಗೆ ಅಧಿಕಾರಿಗಳು ಹಸ್ತಾಂತರಿಸುವ ಮೂಲಕ ಹೋರಾಟವನ್ನು ಅಂತ್ಯಗೊಳಿಸಲಾಯಿತು. ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ತಹಶೀಲ್ದಾರ್ ಕೀರ್ತಿ ಚಾಲಕ್, ಕಂದಾಯ ನಿರೀಕ್ಷಕ ಪವನ್ ತಳವಾರ,ಪಿಎಸ್‌ಐ ಸಂಜಯ ತಿಪರೆಡ್ಡಿ ,ರೈತ ಸಂಘಟನೆ ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಜಿಲ್ಲಾ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಯುವ ಮುಖಂಡರಾದ ಅಕ್ಷಯ ನಾಡಗೌಡ, ಶಿವು ಕನ್ನೊಳ್ಳಿ, ಶಿವನಗೌಡ ಬಿರಾದಾರ, ಹರೀಶ ಲಾಯದಗುಂದಿ,ಗುರುಲಿAಗಪ್ಪ ಹಂಡರಗಲ್,ನಾಲತವಾಡದ ಮುಖಂಡರಾದ ಎಂ.ಬಿ.ಅAಗಡಿ, ಶಶಿಧರ ಬಂಗಾರಿ,ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ,ಅಶೋಕ ರಾಠೋಡ,ಅನಿಲ ರಾಠೋಡ,ಸಂಜೀವ ಬಾಗೇವಾಡಿ,ಸಂಗಣ್ಣ ಬೀಸಲದಿನ್ನಿ, ಅಯ್ಯಪ್ಪ ಬಿದರಕುಂದಿ ಮೊದಲಾದವರು ಇದ್ದರು.

ವಿಜಯೋತ್ಸವ : ಕಬ್ಬಿಗೆ ಹೆಚ್ಚುವರಿಯಾಗಿ ಬೆಂಬಲ ಬೆಲೆ ದೊರೆತ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು,ಯುವ ಮುಖಂಡರು,ಬಿಜೆಪಿ,ಕಾAಗ್ರೆಸ್ ಕಾರ್ಯಕರ್ತರು,ರೈತಪರ,ದಲಿತಪರ ಸಂಘಟನೆಯ ಮುಖಂಡರು,ಟ್ರಾö್ಯಕ್ಟರ್ ಚಾಲಕರು,ಕಬ್ಬು ತಂದಿದ್ದ ಬೆಳೆಗಾರರು ಪಟಾಕಿ ಸಿಡಿಸಿ,ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು.ಐದು ದಿನಗಳ ಕಾಲ ನಿರಂತರ ಅನ್ನಪ್ರಸಾದ ಮಾಡಿದ ದಾನಿಗಳನ್ನು ಇದೇ ವೇಳೆ ಸ್ಮರಿಸಲಾಯಿತು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ