ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ ಕ್ಷೇತ್ರದಲ್ಲಿ ಏಳ್ಗೆ ಸಾಧಿಸಲು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಶ್ರಮಿಸಲಿದೆ ಎಂದು ಎಆಯ್‌ಬಿಎಸ್‌ಎಸ್ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಮುದ್ದೇಬಿಹಾಳ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ನ.16 ರಂದು ವಿಜಯಪುರದ ಗೋಲ್ಡನ್ ಹೈಟ್ಸ್ ಹೊಟೇಲ್‌ನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮಕ್ಕೆ ಹಲವಾರು ರಾಜಕೀಯ ಧುರೀಣರು,ಸಂಘದ ಜಿಲ್ಲಾ,ರಾಜ್ಯ ಮುಖಂಡರು ಆಗಮಿಸಲಿದ್ದು ತಾಲ್ಲೂಕಿನಲ್ಲಿ ಆಯ್ಕೆಯಾಗಿರುವ ಎಲ್ಲ ಪದಾಧಿಕಾರಿಗಳು ಆಗಮಿಸುವಂತೆ ತಿಳಿಸಿದರು.

ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಬಹಾದ್ದೂರ ರಾಠೋಡ ಮಾತನಾಡಿ, ಬಂಜಾರ ಜನಾಂಗದವರ ನೋವು,ನಲಿವು ಸಮಸ್ಯೆಗಳು ಎದುರಾದಾಗ ಸಂಘ ಅವರ ನೆರವಿಗೆ ಬರಲಿದೆ ಎಂದು ತಿಳಿಸಿದರು.ತಾಪಂ ಮಾಜಿ ಸದಸ್ಯ ಪ್ರೇಮಸಿಂಗ ಚವ್ಹಾಣ, ರಮೇಶ ನಾಯಕ,ಏಕನಾಥ ಸೀತಿಮನಿ, ಬಾಲಚಂದ್ರ ಚವ್ಹಾಣ ಇದ್ದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಪದಾಧಿಕಾರಿಗಳು : ಬಿ.ಎಸ್.ಜಾಧವ(ಗೌರವಾಧ್ಯಕ್ಷ), ಬಹಾದ್ದೂರ ರಾಠೋಡ(ಅಧ್ಯಕ್ಷ),ಅಶೋಕ ರಾಠೋಡ,ಕೃಷ್ಣಾ ಚವ್ಹಾಣ(ಕಾರ್ಯಾಧ್ಯಕ್ಷರು),ಲಕ್ಷö್ಮಣ ರಾಠೋಡ,ಸತೀಶ ಲಮಾಣಿ,ಬಾಲಪ್ಪ ರಾಠೋಡ,ವಾಲು ರಾಠೋಡ(ಉಪಾಧ್ಯಕ್ಷ),ಲಕ್ಷö್ಮಣ ಲಮಾಣಿ(ಪ್ರಧಾನ ಕಾರ್ಯದರ್ಶಿ),ಏಕನಾಥ ಲಮಾಣಿ(ಸಹ ಕಾರ್ಯದರ್ಶಿ),ಡಿ.ಬಿ.ಲಮಾಣಿ(ಖಜಾಂಚಿ),ಸತೀಶ ರಾಠೋಡ,ಜಗದೀಶ ನಾಯಕ,ರಾಜಕುಮಾರ ಚವ್ಹಾಣ(ಸಂಘಟನಾ ಕಾರ್ಯದರ್ಶಿ), ಯುವ ಘಟಕ : ಅನಿಲ ನಾಯಕ(ಗೌರವಾಧ್ಯಕ್ಷ), ಡಾ.ಸಂತೋಷ ನಾಯಕ(ಅಧ್ಯಕ್ಷ), ಚಂದ್ರಶೇಖರ ರಾಠೋಡ(ಕಾರ್ಯಾಧ್ಯಕ್ಷ), ಜಗದೀಶ ಚವ್ಹಾಣ, ಅನಿಲ ಚವ್ಹಾಣ,ಸುನೀಲ ಚವ್ಹಾಣ, ವಿಶಾಲ ಚವ್ಹಾಣ(ಉಪಾಧ್ಯಕ್ಷರು), ಅನೀಲ ರಾಠೋಡ(ಪ್ರಧಾನ ಕಾರ್ಯದರ್ಶಿ), ಸಚಿನ ಚವ್ಹಾಣ(ಸಹ ಕಾರ್ಯದರ್ಶಿ),ಕಿರಣ ರಾಠೋಡ(ಖಜಾಂಚಿ), ಅನಿಲ ರಾಠೋಡ, ಪರಶುರಾಮ ರಾಠೋಡ,ಸೀತಾರಾಮ ರಾಠೋಡ(ಸಂಘಟನಾ ಕಾರ್ಯದರ್ಶಿಗಳು)

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.