Children's art at Pratibha Karanji

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ ಹೊರಹೊಮ್ಮುತ್ತಿತ್ತು. ವಿದ್ಯಾರ್ಥಿಗಳ ನೃತ್ಯ, ನಾಟಕ, ರಂಗೋಲಿ, ಛದ್ಮವೇಷ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಜತೆಗೆ ಕಲೆಯನ್ನೂ ಮೇಳೈಸುವಂತೆ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ, ಎಸ್ ಡಿಎಂಸಿ ಅಧ್ಯಕ್ಷ ಲಕ್ಕಪ್ಪ ನಾಗರಬೆಟ್ಟ ಹಾಗೂ ಲೊಟಗೇರಿ ಗ್ರಾಮಸ್ಥರ ನೇತೃತ್ವದಲ್ಲಿ ಆಯೋಜಿಸಲಾದ ರಕ್ಕಸಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ವಿವಿಧ ಸ್ಪರ್ಧೆಗಳು ನಡೆದವು. ಡಾ.ಗುರುಮೂರ್ತಿ ಕಣಕಾಲಮಠ ಕಾರ್ಯಕ್ರಮ ಉದ್ಘಾಟಿಸಿ ‘ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದು ಹೇಳಿದರು. ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸನಗೌಡ ಮುದ್ನೂರ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯ ವಿಷಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು’ ಎಂದರು. ಸಿಆರ್ ಪಿ ಮಹಾಂತೇಶ ನೂಲಿನವರ ಮಾತನಾಡಿ ‘ಕಲೋತ್ಸವ ಮಕ್ಕಳ ಮುಂದಿನ ಭವಿಷ್ಯದಲ್ಲಿ ಅವರು ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪೂರಕವಾಗುತ್ತದೆ. ಅಷ್ಟೇ ಅಲ್ಲ ವರ್ಷಂಪ್ರತಿ ಪಾಠಗಳನ್ನು ಆಲಿಸುವ ಮಕ್ಕಳಿಗೆ ಇದರಿಂದ ಹೊಸತನ ದೊರೆಯುತ್ತದೆ ಎಂದರು.ಟಕ್ಕಳಕಿ ಶಾಲೆಯ ವಿದ್ಯಾರ್ಥಿಗಳು ರಸಪ್ರಶ್ನೆಯಲ್ಲಿ ಸಾಧನೆ ಮಾಡಿದರೆ, ಹುನಕುಂಟಿಯ ವಿದ್ಯಾರ್ಥಿನಿ ಅಕ್ಕಮಹಾದೇವಿ, ಸರಸ್ವತಿ ವೇಷದಲ್ಲಿ ಗಮನಸೆಳೆದರು.

ಮುಖ್ಯಗುರುಗಳಾದ ಗಂಗಣ್ಣ ಕಮರಿ, ಎಚ್. ಜಿ. ಗೌರೋಜಿ, ಎ. ಸಿ. ನರಸಲಗಿ, ಯಮನಪ್ಪ ನಾಗಬೇನಾಳ, ಎಸ್. ಎಸ್. ನಾಗರಬೆಟ್ಟ, ಅಧ್ಯಕ್ಷ ಬಿ. ಎಸ್. ಮುದನೂರ, ಎಸ್. ಬಿ. ತೊಗರಿ, ಎಸ್. ಐ. ಗಂಗನಗೌಡ್ರ, ಆರ್. ಎಸ್. ಹಿರೇಮಠ, ಸಂಗಣ್ಣ ಟಕ್ಕಳಕಿ, ಎ. ಪಿ. ಸಿರಗುಂಪಿ, ಲಕ್ಕಪ್ಪ ನಾಗರಬೆಟ್ಟ, ಉಪಸ್ಥಿತರಿದ್ದರು.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್