ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು.

ಎರಡನೇ ಅವಧಿಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆಯಾದ ನೂತನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಮಾತನಾಡಿ, ಆಡಳಿತ ಮಂಡಳಿಯ ಸದಸ್ಯರ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ.ಹಿಂದಿನವರು ಮಾಡಿದ ಲೋಪಗಳು ರೈತರಿಗೆ ಸಮಸ್ಯೆಯನ್ನು ಉಂಟು ಮಾಡಿದ್ದವು.ಆದರೆ ನಾವು ಕಳೆದ ಅವಧಿಯಲ್ಲಿ 700ಕ್ಕೂ ಹೆಚ್ಚು ರೈತರಿಗೆ ಸಾಲ ಸೌಲಭ್ಯ ನೀಡಿದ್ದೇವೆ.ರಸಗೊಬ್ಬರ,ಬೀಜದ ಮಳಿಗೆ ಆರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಿದ್ದೇವೆ.ಸಂಘಕ್ಕೆ ಸ್ವಂತ ನಿವೇಶನ ಖರೀದಿಸಿದ್ದು ಮುಂದಿನ ವರ್ಷ ಸೊಸೈಟಿಯ ವಾರ್ಷಿಕ ಸಭೆಯನ್ನು ಸಂಘದ ನೂತನ ಕಟ್ಟಡದಲ್ಲಿಯೇ ನಡೆಸುವ ಕಾರ್ಯವನ್ನು ಮಾಡುತ್ತೇವೆ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಬಾಬು ಸೂಳಿಭಾವಿ ಮಾತನಾಡಿದರು.ಸಂಘದ ಸದಸ್ಯರಾದ ಸಿಂಧೂಬಲ್ಲಾಳ ನಾಡಗೌಡ, ಸುನೀಲ ಸೂಳಿಭಾವಿ,ಸೋಮಪ್ಪ ಮೇಟಿ,ಬಸವರಾಜ ಪಾಟೀಲ,ಲಕ್ಕಪ್ಪ ಸೋಮನಾಳ, ಶಾಂತಪ್ಪ ಸಂಕನಾಳ,ಮಡಿವಾಳಪ್ಪ ತಳವಾರ, ಶೇಖಪ್ಪ ಚಲವಾದಿ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ, ಗ್ರಾಮದ ಮುಖಂಡರಾದ ನೀಲಕಂಠರಾವ ನಾಡಗೌಡ(ಅಪ್ಪುಧಣಿ), ಶ್ರೀಶೈಲ ಮೇಟಿ, ಡಿ.ಬಿ.ಬೇಲಾಳ, ಮಂಜುನಾಥ ಚಲವಾದಿ,ಗೌಡಪ್ಪಗೌಡ ಪಾಟೀಲ,ಪ್ರಕಾಶ ಬಿರಾದಾರ, ಅಂದಾನಯ್ಯ ಸಾಲಿಮಠ ಮೊದಲಾದವರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ