They laid siege to the taluk agriculture office demanding to solve the problems of the farmers

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ 5 ರೂ. ಪ್ರೋತ್ಸಾಹ ಧನದ ಬಾಕಿ ಇರುವ 62೦ ಕೋಟಿ ರೂ. ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಈ ಪ್ರೋತ್ಸಾಹ ಧನವನ್ನು 7 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 3,3೦೦ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಜೊತೆಗೆ, ಹಿಂದಿನಂತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ ರೂ. 4,೦೦೦ ನೆರವು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಬಿ. ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ರೂ. 25,೦೦೦ ಶುಲ್ಕದಲ್ಲಿ ಟ್ರಾನ್ಸ್ಫಾರ್ಮರ್ ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಯನ್ನು ತಕ್ಷಣ ಪುನಃ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ರೂ. ೧೦ ಲಕ್ಷವರೆಗೆ ಸಾಲ ಸೌಲಭ್ಯ ನೀಡಬೇಕು. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಶಾಸಕರಾದ ಡಾ|| ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಸಿಣ ಮಂಡಲ್ ಅಧ್ಯಕ್ಷರಾದ ಗುರುನಾಥ್ ರಾಜಗಿರ, ಗ್ರಾಮಾಂತರ ಅಧ್ಯಕ್ಷರಾದ ದೀಪಕ ಗಾದಗೆ, ನಗರ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ಮುಖಂಡರಾದ ವೀರಶಟ್ಟಿ ನಿಡವಂಚಾ, ಗುರುನಾಥ್ ಜಾಂತಿಕರ್, ರಾಜಶೇಖರ್ ನಾಗಮೂರ್ತಿ, ಅಶೋಕ ಹೊಕ್ರಣೆ, ಬಾಬುರಾವ್ ಕಾರ್ ಬಾರಿ, ಬಸವರಾಜ್ ಪವಾರ್, ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಹೇಮಾ ತುಕಾ ರೆಡ್ಡಿ, ವೀರು ದಿಗ್ವಾಲ್, ಸುನಿಲ್ ಗೌಳಿ, ಗಣೇಶ ಬೋಸ್ಲೆ, ಚಂದ್ರಯ್ಯ ಸ್ವಾಮಿ, ನರೇಶ್ ಗೌಳಿ, ರೋಷನ್ ವರ್ಮಾ, ವೀರೇಶ್ ಸ್ವಾಮಿ, ಸುಭಾಷ್ ಮಡಿವಾಳ ಮಹಾನದಾ ಪಾಟೀಲ್, ಗುಂಡಮ್ಮ, ಮಾಯಾವತಿ ಕೋಟೆ, ಜಗನ್ನಾಥ್ ಪಾಟೀಲ್ ಸಿರಿಕಟ್ನಳ್ಳಿ, ರೈತ ಮೋರ್ಚಾ ಅಧ್ಯಕ್ಷರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ: ಶಿವು ರಾಥೋಡ

Latest News

Better Shell out by Cell phone Casinos: Deposit from the Mobile mrbet casino live Statement Boku and Payforit

ArticlesMrbet casino live: How can i allege a no-deposit bonus?Well-known Boku

The new Black-jack Academy Know casino fairytale legends red riding hood Blackjack Free from a professional

BlogsCasino fairytale legends red riding hood - Black-jack Playing SystemsWeb based

Put 1 get a double stacks free 80 spins hundred free revolves to your Fortunium Gold Super Moolah

BlogsDouble stacks free 80 spins | Canadian step one money depositsPrecious

Boat Online such broker bear blast slot free spins as Yahtzee

BlogsBroker bear blast slot free spins: The brand new Dice:Yahtzee ThumbAdded

ರಾಷ್ಟ್ರೀಯ ಸ್ವಚ್ಛತಾ ದಿನ ;                                                                   ‘ಪ್ಲಾಸ್ಟಿಕ್ ಮುಕ್ತ ಪರಿಸರ ಎಲ್ಲರ ಆದ್ಯತೆ ಆಗಲಿ’

ರಾಷ್ಟ್ರೀಯ ಸ್ವಚ್ಛತಾ ದಿನ ; ‘ಪ್ಲಾಸ್ಟಿಕ್ ಮುಕ್ತ ಪರಿಸರ ಎಲ್ಲರ ಆದ್ಯತೆ ಆಗಲಿ’

ಮುದ್ದೇಬಿಹಾಳ : ಮಾರುಕಟ್ಟೆಗೆ ಹೋಗುವ ಮುನ್ನ ನಿಮ್ಮ ಜೊತೆಗೆ ಕೈಯ್ಯಲ್ಲಿ ಬಟ್ಟೆಯ ಬ್ಯಾಗನ್ನು ತೆಗೆದುಕೊಂಡು ಹೊರಗಡೆ ತೆರಳಿದರೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಗ್ರಿ ತರುವ ಪ್ರಮೇಯ ಬರುವುದಿಲ್ಲ.ಆ ಮೂಲಕ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಐದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವೆಗಳ ಸಮಿತಿ,ನ್ಯಾಯವಾದಿಗಳ ಸಂಘ ಹಾಗೂ ಪುರಸಭೆ ಸಹಯೋಗದಲ್ಲಿ ರಾಷ್ಟ್ರೀಯ

ಭಕ್ತರಿಗೆ ಹಾಲುಮತ ಸಮಾಜದ ಮನವಿ:                                   ಫೆ.1 ರಂದು  ಕಾಗಿನೆಲೆ ಕನಕ ಗುರುಪೀಠದ ದಿ.ಸಿದ್ದರಾಮನಂದಪುರಿ ಸ್ವಾಮೀಜಿ ನುಡಿನಮನ

ಭಕ್ತರಿಗೆ ಹಾಲುಮತ ಸಮಾಜದ ಮನವಿ: ಫೆ.1 ರಂದು ಕಾಗಿನೆಲೆ ಕನಕ ಗುರುಪೀಠದ ದಿ.ಸಿದ್ದರಾಮನಂದಪುರಿ ಸ್ವಾಮೀಜಿ ನುಡಿನಮನ

ಮುದ್ದೇಬಿಹಾಳ : ತಿಂಥಣಿ ಬ್ರಿಜ್‌ನ ಕಾಗಿನೆಲೆ ಕನಕ ಗುರುಪೀಠದ ದಿ.ಸಿದ್ಧರಾಮನಂದಪರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮ ಫೆ.1 ರಂದು ಬೆಳಗ್ಗೆ 10ಕ್ಕೆ ತಿಂಥಣಿ ಬ್ರಿಜ್‌ನ ಶ್ರೀಮಠದಲ್ಲಿ ಆಯೋಜಿಸಲಾಗಿದೆ. ಹಾಲುಮತ ಗುರುಪೀಠದ ಜಗದ್ಗುರು ನಿರಂಜನನಾAದಪುರಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜರುಗಲಿರುವ ಈ ನುಡಿನಮನ ಕಾರ್ಯಕ್ರಮಕ್ಕೆ ನಾಡಿನ ಹಲವು ಮಠಾಧೀಶರು, ಸಿಎಂ ಸಿದ್ಧರಾಮಯ್ಯನವರ ಆದಿಯಾಗಿ ಮಂತ್ರಿಗಳು,ಶಾಸಕರು ಹಾಗೂ ಹೊರ ರಾಜ್ಯದ ಅನೇಕ ಗಣ್ಯಮಾನ್ಯರು ಆಗಮಿಸುವರು. ಭಕ್ತರು, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ