They laid siege to the taluk agriculture office demanding to solve the problems of the farmers

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ 5 ರೂ. ಪ್ರೋತ್ಸಾಹ ಧನದ ಬಾಕಿ ಇರುವ 62೦ ಕೋಟಿ ರೂ. ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಈ ಪ್ರೋತ್ಸಾಹ ಧನವನ್ನು 7 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 3,3೦೦ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಜೊತೆಗೆ, ಹಿಂದಿನಂತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ ರೂ. 4,೦೦೦ ನೆರವು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಬಿ. ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ರೂ. 25,೦೦೦ ಶುಲ್ಕದಲ್ಲಿ ಟ್ರಾನ್ಸ್ಫಾರ್ಮರ್ ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಯನ್ನು ತಕ್ಷಣ ಪುನಃ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ರೂ. ೧೦ ಲಕ್ಷವರೆಗೆ ಸಾಲ ಸೌಲಭ್ಯ ನೀಡಬೇಕು. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಶಾಸಕರಾದ ಡಾ|| ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಸಿಣ ಮಂಡಲ್ ಅಧ್ಯಕ್ಷರಾದ ಗುರುನಾಥ್ ರಾಜಗಿರ, ಗ್ರಾಮಾಂತರ ಅಧ್ಯಕ್ಷರಾದ ದೀಪಕ ಗಾದಗೆ, ನಗರ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ಮುಖಂಡರಾದ ವೀರಶಟ್ಟಿ ನಿಡವಂಚಾ, ಗುರುನಾಥ್ ಜಾಂತಿಕರ್, ರಾಜಶೇಖರ್ ನಾಗಮೂರ್ತಿ, ಅಶೋಕ ಹೊಕ್ರಣೆ, ಬಾಬುರಾವ್ ಕಾರ್ ಬಾರಿ, ಬಸವರಾಜ್ ಪವಾರ್, ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಹೇಮಾ ತುಕಾ ರೆಡ್ಡಿ, ವೀರು ದಿಗ್ವಾಲ್, ಸುನಿಲ್ ಗೌಳಿ, ಗಣೇಶ ಬೋಸ್ಲೆ, ಚಂದ್ರಯ್ಯ ಸ್ವಾಮಿ, ನರೇಶ್ ಗೌಳಿ, ರೋಷನ್ ವರ್ಮಾ, ವೀರೇಶ್ ಸ್ವಾಮಿ, ಸುಭಾಷ್ ಮಡಿವಾಳ ಮಹಾನದಾ ಪಾಟೀಲ್, ಗುಂಡಮ್ಮ, ಮಾಯಾವತಿ ಕೋಟೆ, ಜಗನ್ನಾಥ್ ಪಾಟೀಲ್ ಸಿರಿಕಟ್ನಳ್ಳಿ, ರೈತ ಮೋರ್ಚಾ ಅಧ್ಯಕ್ಷರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ: ಶಿವು ರಾಥೋಡ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ