If journalists are not united, politicians will ride: K. Shivakumar

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು.

ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪತ್ರಕರ್ತರಾದವರು ಸಮಾಜದಲ್ಲಿ ಒಗ್ಗಟ್ಟಿನಿಂದ ಇದ್ದರೆ ಗೌರವ ಸಿಗಲಿದೆ ಹೇಳಿದ ಕೆ. ಶಿವಕುಮಾರ್, ಪತ್ರಕರ್ತರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೆಲ ಅಧಿಕಾರಿ ವರ್ಗ ಕಡಿವಾಣ ಹಾಕಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಮಾನ್ಯತೆ ಪಡೆದ ಪತ್ರಕರ್ತರಿಗೆ ಬಸ್ ಪಾಸ್, ಆರೋಗ್ಯ ಸಂಜೀವಿನಿ ಮತ್ತು ಮಾಸಾಸನ ನೀಡಲು ಮುಂದಾಗಿದೆ. ಆದರೆ, ಕೆಲ ಅಧಿಕಾರಿಗಳು ಸರ್ಕಾರದ ಪತ್ರಕರ್ತರಿಗೆ ಸಿದ್ದಪಡಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಠಿಣ ಷರತ್ತುಗಳನ್ನು ವಿಧಿಸಿ ಕಡಿವಾಣ ಹಾಕುತ್ತಿದ್ದಾರೆ. ಇದು ಯಾವ ನ್ಯಾಯ, ಲಕ್ಷಾಂತರ ರು. ಸಂಬಳ ತೆಗೆದುಕೊಳ್ಳುವ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಪಿಂಚಣಿ ಬೇಕು. ಆದರೆ ಪತ್ರಕರ್ತರು 40 ಸಾವಿರ ಸಂಬಳ ಮೀರಿರುವವರಿಗೆ ಪಿಂಚಣೆ ಕೊಡಲ್ಲ ಎಂದಿದ್ದಾರೆ. ಪತಕರ್ತರು 20, 30, 10 ಸಾವಿರ ಸಂಬಳದಲ್ಲೇ ದುಡಿಯಬೇಕಾ ? ಎಂದು ಖಾರವಾಗಿ ಪ್ರಶ್ನಿಸಿ, ಅಧಿಕಾರಿಗಳ ಇಂತಹ ತಾರತಮ್ಯದ ಬಗ್ಗೆ ಮುಂದಿನ ಅಧಿವೇಶದಲ್ಲೇ ಚರ್ಚಿಸುವೆ. ವಾರ್ತಾ ಖಾತೆ ಹೊಂದಿರುವ ಮುಖ್ಯಮಂತಿಗಳ ಗಮನಕ್ಕೆ ತಂದು ಪತ್ರಕರ್ತರಿಗೆ ನ್ಯಾಯ ಒದಗಿಸುವ ದೃಷ್ಟಿಯಲ್ಲಿ ಕೆಲಸ ಮಾಡುವೆ ಎಂದರು.

ವಾರ್ತಾ ಇಲಾಖೆಯ ಹೊಸ ಜಾಹೀರಾತು ನೀತಿ ಬಗ್ಗೆ ತಾನು ಎನ್‌ಸಿ, ಎಸ್‌ಟಿ, ಓಬಿಸಿ ಪತ್ರಿಕೆಗಳಿಗೆ ಹೆಚ್ಚುವರಿ ಜಾಹೀರಾತು ಕೊಡಬೇಕು ಎಂದು ಹೇಳಿದ್ದೇನೆ. ಎಲ್ಲ ಪತ್ರಿಕೆಗಳಿಗೂ ಜಾಹೀರಾತು ಕೊಡಬೇಕು. ಜಾಹೀರಾತು ಇಲ್ಲದೆ ಪತ್ರಿಕೆಗಳನ್ನು ನಡೆಸು ವುದು ಕಷ್ಟ ಪತ್ರಕರ್ತರಿಗೂ ನ್ಯಾಯಯುತ ವೇತನ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಸದಸ್ಯನಾಗಿದ್ದಾಗ ಚಾಮರಾಜನಗರ ಜಿಲ್ಲೆಯಿಂದ ಅರ್ಜಿ ಹಾಕದವರಿಗೂ ಪ್ರಶಸ್ತಿ ಕೊಡಿಸಿದೆ. ಕಳೆದ ಐದಾರು ವರ್ಷಗಳಿಂದ ಜಿಲ್ಲೆಗೆ ಪ್ರಶಸ್ತಿ ಸಿಕ್ಕಿಲ್ಲ ಮುಂದಿನ ಸಲ ಕೊಡಿಸಲಾಗುವುದು ಎಂದು ಹೇಳಿದ ಕೆ.ಶಿವಕುಮಾರ್, ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವುದು ಒಳ್ಳೆಯದು ಅದಕ್ಕೆ ತಾನು ವೈಯುಕ್ತಿಕವಾಗಿ 25 ಸಾವಿರ ರೂಪಾಯಿಗಳನ್ನು ಕೊಡುತ್ತೇನೆ . ಪತ್ರಕರ್ತರು ಮತ್ತು ಕುಟುಂಬಕ್ಕೆ ಆರೋಗ್ಯ ಭದ್ರತೆ ಇರಬೇಕು. ಎಲ್ಲ ಪತ್ರಕರ್ತರು ವಿಮೆ ಮಾಡಿಸಿ ಕೊಳ್ಳಬೇಕು. ಅನಾರೋಗ್ಯದಿಂದ ಬಳಲಿ ಚಿಕಿತ್ಸಾ ವೆಚ್ಚ 3 ಲಕ್ಷ ರೂಪಾಯಿಗಳಿಗೂ ಬಂದರೆ ನನಗೆ ತಿಳಿಸಿದರೆ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ಭರಿಸಿಕೊಡುವುದಾಗಿ ಭರವಸೆ ನೀಡಿದರು.

ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಾಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಪತ್ರಿಕಾರಂಗ ಸಮಾಜ, ಸರ್ಕಾರವನ್ನು ಕಣ್ಣೆರೆಸುವ ಕೆಲಸ ಮಾಡುತ್ತದೆ. ಪತ್ರಿಕಾರಂಗವು ಸಂವಿಧಾನದ 4ನೇ ಅಂಗವಾಗಿದೆ. ಪತ್ರಿಕಾ ರಂಗವು ಕಣ್ಣಿಗೆ ಕಾಣದ ಅಸ್ತ್ರವಾಗಿದ್ದು ಒಳ್ಳೆಯದು ಹಾಗೂ ಕೆಟ್ಟದ್ದನ್ನು ನೇರವಾಗಿ ಗುರ್ತಿ ಸುವ ಅಂಗವಾಗಿದೆ. ಟಿವಿ ಮಾಧ್ಯಮಗಳಲ್ಲಿ ತಪ್ಪು ಸುದ್ದಿಗಳು ಬಂದರೂ ಪತ್ರಿಕೆಗಳಲ್ಲಿ ನೇರವಾಗಿ ಬರುತ್ತದೆ ಎಂದರು.

ಕನ್ನಡಪ್ರಭ ಪತ್ರಿಕೆ ಮೈಸೂರು ಆವೃತ್ತಿಯ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನಕುಮಾರ್, ಶಾಸಕ ಗಣೇಶ್ ಪ್ರಸಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆರಗೋಡು ಸೋಮಶೇಖರ್ ಟೆಲೆಕ್ ರವಿಕುಮಾರ್‌ಮಾತನಾಡಿದರು.

ಇದೇ ಸಂದರ್ಭದಲ್ಲಿ ಕನ್ನಡಪ್ರಭ ಪತ್ರಿಕೆ ಮೈಸೂರು ಆವೃತ್ತಿಯ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನಕುಮಾರ್ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್, ರವರನ್ನು ಸನ್ಮಾನಿಸಲಾಯಿತು.

2025-28 ನೇ ಸಾಲಿನ ಚಾಮರಾಜನಗರ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಅರ್.ಎನ್.ಸಿದ್ದಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಸಂಘದ ನಿಕಟಪೂರ್ವ ಅಧ್ಯಕ್ಷ ದೇವರಾಜ ಕಪ್ಪಸೋಗೆ, ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ