ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ ನೇತೃತ್ವದಲ್ಲಿ ಲಿಂ.ಪರಮಾನAದ ಮಸ್ಕಿ ಹಾಗೂ ಭುವನೇಶ ಕಟಗೇರಿ ಸ್ಮರಣಾರ್ಥ ಗುರುವಾರ ಏರ್ಪಡಿಸಿದ್ದ ಶರಣ ಬೆಳಗು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪದ ಮೂಲಕ ಎಲ್ಲ ಜಾತಿಯ ಶರಣರಿಗೂ ಸಮಾನತೆ ಕಲ್ಪಿಸುವ ಕೆಲಸ ನಡೆದಿತ್ತು.ಅಂತಹ ಸಮಾನತೆಯ ಸಮಾಜವನ್ನು ಇಂದು ಕಟ್ಟುವ ಸಂದಿಗ್ಧಪರಿಸ್ಥಿತಿಯಲ್ಲಿ ನಾವೆಲ್ಲ ಇದ್ದೇವೆ ಎಂದರು.

ವರ್ತಮಾನಕ್ಕೆ ಶರಣರ ವಿಚಾರಧಾರೆಗಳು ವಿಷಯದ ಕುರಿತು ಮಾತನಾಡಿದ ರಾಂಪೂರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಚಂದ್ರಶೇಖರ ಹಂಗರಗಿ, ಸಮಾಜವನ್ನು ವಿಘಟಿಸುವ ಶಕ್ತಿಗಳನ್ನು ತಡೆದು ನಿಲ್ಲಿಸುವ ಶಕ್ತಿ ಶರಣರ ವಿಚಾರಧಾರೆಗಳು,ವಚನಗಳಿಗಿದೆ.ವಚನಗಳನ್ನು ಮಕ್ಕಳಿಗೆ ನಿತ್ಯ ಪಠಣ ಮಾಡಿಸುವುದಕ್ಕೆ ತಾಯಂದಿರು ಮುಂದಾಗಲಿ ಎಂದು ಸಲಹೆ ಮಾಡಿದರು.

ಬಸವ ಭಾವ ಪೂಜೆಯನ್ನು ಕಿತ್ತೂರು ಚೆನ್ನಮ್ಮ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ ಕಮತ, ಶಸಾಪ ಅಧ್ಯಕ್ಷ ಬಸವರಾಜ ನಾಲತವಾಡ,ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮುಖಂಡ ಪ್ರಭುಗೌಡ ಪಾಟೀಲ,ಜೆಸಿ ಸದಸ್ಯೆ ದಿವ್ಯಾ ಕಲಬುರ್ಗಿ,ಹಿರಿಯ ಸಾಹಿತಿ ಅಶೋಕ ಮಣಿ, ಬಾಪುಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ