ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ ನೇತೃತ್ವದಲ್ಲಿ ಲಿಂ.ಪರಮಾನAದ ಮಸ್ಕಿ ಹಾಗೂ ಭುವನೇಶ ಕಟಗೇರಿ ಸ್ಮರಣಾರ್ಥ ಗುರುವಾರ ಏರ್ಪಡಿಸಿದ್ದ ಶರಣ ಬೆಳಗು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪದ ಮೂಲಕ ಎಲ್ಲ ಜಾತಿಯ ಶರಣರಿಗೂ ಸಮಾನತೆ ಕಲ್ಪಿಸುವ ಕೆಲಸ ನಡೆದಿತ್ತು.ಅಂತಹ ಸಮಾನತೆಯ ಸಮಾಜವನ್ನು ಇಂದು ಕಟ್ಟುವ ಸಂದಿಗ್ಧಪರಿಸ್ಥಿತಿಯಲ್ಲಿ ನಾವೆಲ್ಲ ಇದ್ದೇವೆ ಎಂದರು.

ವರ್ತಮಾನಕ್ಕೆ ಶರಣರ ವಿಚಾರಧಾರೆಗಳು ವಿಷಯದ ಕುರಿತು ಮಾತನಾಡಿದ ರಾಂಪೂರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಚಂದ್ರಶೇಖರ ಹಂಗರಗಿ, ಸಮಾಜವನ್ನು ವಿಘಟಿಸುವ ಶಕ್ತಿಗಳನ್ನು ತಡೆದು ನಿಲ್ಲಿಸುವ ಶಕ್ತಿ ಶರಣರ ವಿಚಾರಧಾರೆಗಳು,ವಚನಗಳಿಗಿದೆ.ವಚನಗಳನ್ನು ಮಕ್ಕಳಿಗೆ ನಿತ್ಯ ಪಠಣ ಮಾಡಿಸುವುದಕ್ಕೆ ತಾಯಂದಿರು ಮುಂದಾಗಲಿ ಎಂದು ಸಲಹೆ ಮಾಡಿದರು.

ಬಸವ ಭಾವ ಪೂಜೆಯನ್ನು ಕಿತ್ತೂರು ಚೆನ್ನಮ್ಮ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ ಕಮತ, ಶಸಾಪ ಅಧ್ಯಕ್ಷ ಬಸವರಾಜ ನಾಲತವಾಡ,ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮುಖಂಡ ಪ್ರಭುಗೌಡ ಪಾಟೀಲ,ಜೆಸಿ ಸದಸ್ಯೆ ದಿವ್ಯಾ ಕಲಬುರ್ಗಿ,ಹಿರಿಯ ಸಾಹಿತಿ ಅಶೋಕ ಮಣಿ, ಬಾಪುಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ