ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ನೀಡಲು ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ಕಠಿಣ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು. ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಪ್ರಮುಖ ೧೨ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಡಿ.೧೫ ರಂದು ಬೆಳಗಾವಿಯ ವಿಧಾನಸೌಧದ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ,ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ೧೬ ಸಾವಿರ ಪತ್ರಕರ್ತರಿಗೆ ಸರ್ಕಾರ ಉಚಿತವಾಗಿ ಸಂಚರಿಸುವುದಕ್ಕೆ ಬಸ್ ಪಾಸ್ ನೀಡಲು ನಡೆಸಿದ ಹೋರಾಟದ ಫಲವಾಗಿ ವಾರ್ತಾ ಇಲಾಖೆ ಕಠಿಣ ನಿಯಮಗಳನ್ನು ರೂಪಿಸಿದ್ದು ತಾಲ್ಲೂಕು ಮಟ್ಟದ ಯಾವೊಬ್ಬ ಪತ್ರಕರ್ತರಿಗೂ ಬಸ್ ಪಾಸ್ ದೊರೆಯುವುದು ಗಗನ ಕುಸುಮವಾಗಿದೆ.ಈ ನಿಟ್ಟಿನಲ್ಲಿ ಬಸ್ ಪಾಸ್‌ಗೆ ವಿಧಿಸಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪಿಆರ್.ಜಿ.ಐ ಹಾಗೂ ಆರ್.ಎನ್.ಐ. ಹೊಂದಿರುವ ಪತ್ರಕರ್ತರಿಗೆ ವಿಕಾಸ ಸೌಧ,ವಿಧಾನಸೌಧಕ್ಕೆ ಪ್ರವೇಶಿಸಲು ಮುಕ್ತ ಅವಕಾಶ ನೀಡಬೇಕು, ಜಿಲ್ಲಾ ವ್ಯಾಪ್ತಿಯಲ್ಲಿರುವ ಪತ್ರಿಕಾ ಭವನಗಳನ್ನು ಯಾವೊಂದು ಪತ್ರಿಕಾ ಸಂಘಟನೆಗಳಿಗೆ ನೀಡದೇ ಆಯಾ ಜಿಲ್ಲಾಧಿಕಾರಿಗಳ ಸುಪರ್ದಿಯಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳ ಮೂಲಕ ನಿರ್ವಹಣೆಗೆ ಆದೇಶಿಸಬೇಕು.ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ ೩೦೦ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು.ಪತ್ರಕರ್ತರಿಗೆ ಜೀವ ವಿಮೆ ಸೌಲಭ್ಯ ಸರ್ಕಾರ ಒದಗಿಸಬೇಕು.ಕೆಲವು ಪೊಲೀಸರಿಂದ ಪತ್ರಕರ್ತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು.ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.ಪತ್ರಕರ್ತರು ಕರ್ತವ್ಯದ ಸಮಯದಲ್ಲಿ ಅಪಘಾತ,ಸಹಜವಾಗಿ ಮೃತಪಟ್ಟರೆ ಅವರ ಅವಲಂಬಿತರಿಗೆ ೧೦ ಲಕ್ಷ ರೂ.ಪರಿಹಾರ ನೀಡಬೇಕು.ವಾರ,ಪಾಕ್ಷಿಕ,ಮಾಸ ಹಾಗೂ ಇನ್ನೀತರ ಪತ್ರಿಕೆಗಳ ಪ್ರತಿನಿಧಿಗಳು ಮಾಶಾಸನ ಪಡೆಯಲು ಅರ್ಹತೆ ಹೊಂದಿರುವುದಿಲ್ಲವೆAದು ವಾರ್ತಾ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ನಿಬಂಧನೆ ಕೈ ಬಿಡಬೇಕು.ಪತ್ರಕರ್ತರಿಗೆ ಉಚಿತ ಟೋಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

Boat Online such broker bear blast slot free spins as Yahtzee

BlogsBroker bear blast slot free spins: The brand new Dice:Yahtzee ThumbAdded

Păcănele Online Sweet nv casino Bonanza Gratis În Dans Pacanele

ContentNv casino | Caracteristica Bonus Roata Grămadă Să BaniSă Sunt Pacanele

Hra Chicken Road od InOut Games se blíží k velikosti velkého města.

Theme a Design Hra Chicken Road je netradiční online herní automat

Hühnerrad-Münzspiel im Stil von Casino Slot Machine – Die Ernte des Glücks bei Chicken Cross

In den letzten Jahren haben sich Online-Casinos um die Welt zu

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ವಿಜಯಪುರದಲ್ಲಿ ಈಗಾಗಲೇ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ ಉದ್ಘಾಟನೆ,ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪರಶುರಾಮ ವಡ್ಡರ ಮಾತನಾಡಿ, ವೈದ್ಯಕೀಯ ಸೇವೆಯನ್ನು