ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ

ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ

ಮುದ್ದೇಬಿಹಾಳ : ಜಲಾನಯನ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಲಾಗುವ ಕೃಷಿ ಹೊಂಡ,ಜಿನುಗು ಕೆರೆ,ನಾಲಾ ಬದು,ತಡೆ ಅಣೆಗಳಿಂದ ತಾಲ್ಲೂಕಿನ ಕವಡಿಮಟ್ಟಿ ಹಾಗೂ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ಜಮೀನು ಅಭಿವೃದ್ಧಿಗೆ ಆದ್ಯತೆ ದೊರೆಯಲಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಲಾನಯನ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಯಲ್ಲಿ ಸಂಪ್ರದಾಯ ಪದ್ಧತಿಗಿಂತ ಆಧುನಿಕ ಕೃಷಿ ಜ್ಞಾನ ಬಳಸಿಕೊಳ್ಳಬೇಕು.ವಿಶೇಷವಾಗಿ ಕುರಿ ಸಾಕಾಣಿಕೆಗೆ ಸರ್ಕಾರದ ಸಹಾಯಧನ ಪಡೆದುಕೊಂಡು ಲಾಭ ಮಾಡಿಕೊಳ್ಳಬಹುದಾಗಿದೆ.ಒಕ್ಕಲುತನದಂತಹ ಪವಿತ್ರ ವೃತ್ತಿ ಮತ್ತೊಂದಿಲ್ಲ ಎಂದು ಹೇಳಿದರು.

ಕೃಷಿಕರನ್ನು ವಂಚಿಸುವ ದೊಡ್ಡ ಹುನ್ನಾರ ನಡೆದಿದೆ.ಮೆಕ್ಕೆಜೋಳ,ತೊಗರಿ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಆದೇಶಿಸಬೇಕಿರುವುದು ಕೇಂದ್ರ ಸರ್ಕಾರ.ರಾಜ್ಯ ಸರ್ಕಾರ ತನ್ನ ಪಾಲನ್ನು ಕೊಡಲು ಸಿದ್ಧವಿದ್ದರೂ ಕೇಂದ್ರ ಸರ್ಕಾರ ನಿರ್ದೇಶನ ನೀಡುವವರೆಗೂ ರಾಜ್ಯ ಸರ್ಕಾರ ಖರೀದಿ ಆರಂಭಿಸಲು ಸಾಧ್ಯವಿಲ್ಲ.ದೊಡ್ಡ ಮಟ್ಟದಲ್ಲಿ ಆಹಾರ ಧಾನ್ಯ ಖರೀದಿಸಿದಾಗ ಅದನ್ನು ಶೇಖರಿಸುವುದು,ಮರು ಬಳಕೆಗೆ ಕ್ರಮ ಕೈಗೊಳ್ಳುವುದು ಮಾಡುತ್ತದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಂದಾಣಿಕೆಯಿAದ ಸಾಗಿದರೆ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಉಪನ್ಯಾಸ ನೀಡಿದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಎ.ಎಮ್.ಸಾವಳಗಿ ಮಾತನಾಡಿ, ನೀರಾವರಿ ಪದ್ಧತಿಯಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ರೈತರಿಗೆ ಅರಿವು ಮೂಡಿಸುವ ಕೆಲಸ ಕೃಷಿ ಇಲಾಖೆ ಮಾಡುತ್ತಿದೆ.ಸಮುದಾಯಗಳು ಜವಾಬ್ದಾರಿ ಅರಿತುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದರು.
ಬಿಇಒ ಬಿ.ಎಸ್.ಸಾವಳಗಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ ಅಧ್ಯಕ್ಷತೆ ವಹಿಸಿದ್ದರು.ಉಪ ಕೃಷಿ ನಿರ್ದೇಶಕ-1 ಶರಣಗೌಡ ಆರ್., ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಟಿ.ಹಿರೇಮಠ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಪಾಟೀಲ , ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಅರವಿಂದ ಹೂಗಾರ,ಸಂಗನಗೌಡ ಪಾಟೀಲ, ಸೋಮನಗೌಡ ಬಿರಾದಾರ,ರಾಜೇಶ್ವರಿ ನಾಡಗೌಡ ಇದ್ದರು.

ಉತ್ಸವದಲ್ಲಿ ಕಿರು ಪುಸ್ತಕ ಬಿಡುಗಡೆ, ಗ್ರಾಮ್ಸ ಸಂಸ್ಥೆಯಿAದ ಬೀದಿ ನಾಟಕ ಪ್ರದರ್ಶನ,ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹಾಗೂ ಶಾಲೆಗೆ ಪಿಎಂಕೆಎಸ್ ಡಬ್ಲೂö್ಯಡಿಸಿ 2.0 ಸನ್ 2025-26 ಯೋಜನೆಯಡಿ 92 ಬೆಂಚ್‌ಗಳನ್ನು ವಿತರಿಸಲಾಯಿತು.ಅಲ್ಲದೇ ರಂಗೋಲಿ,ಚಿತ್ರಕಲೆ ಹಾಗೂ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ,ಮಣ್ಣು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.ಸಂಗಮೇಶ ಶಿವಣಗಿ ಪ್ರಾರ್ಥನಾ ಗೀತೆ ಹಾಡಿದರು.ಟಿ.ಡಿ.ಲಮಾಣಿ ವೀರೇಶ ಆಂದೋನಿ ನಿರೂಪಿಸಿದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ