ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು.

ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ ಮುಖಂಡರು,ಅಧಿಕಾರಿಗಳನ್ನು ಕರೆದುಕೊಂಡು ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ.ತೂಕ ಅಳತೆ ಮಾಪನ ಅಧಿಕಾರಿಗಳು ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದು ಕಾರ್ಖಾನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಕಾರ್ಖಾನೆಗಳಲ್ಲೂ ರೈತರನ್ನೊಳಗೊಂಡ ಪರಿಶೀಲನಾ ಸಮೀತಿ ರಚಿಸಲಾಗಿದ್ದು ಕಾಲಕಾಲಕ್ಕೆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳ ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಆಹಾರ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಬಾಲಾಜಿ ಸಕ್ಕರೆ ಕಾರ್ಖಾನೆಗೆ ರೈತರೊಂದಿಗೆ ಭೇಟಿ ನೀಡಿದ್ದೇವೆ.ಪ್ರಯೋಗಾಲಯಕ್ಕೆ ಭೇಟಿ ನೀಡಿ ಸಕ್ಕರೆ ಅಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬುದನ್ನು ರೈತರಿಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗಿದೆ.ಸರ್ಕಾರ ಸೂಚಿಸಿದ ದರವನ್ನು ಕಾರ್ಖಾನೆಯವರು ನೀಡುತ್ತಿದ್ದು ಈಗಾಗಲೇ ನ.30ರವರೆಗಿನ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸಲಾಗಿದೆ.132 ಕೋಟಿ ರೂ.ಗಳಲ್ಲಿ 84 ಕೋಟಿ ರೂ.ಬಿಲ್ ಪಾವತಿಸಲಾಗಿದ್ದು ಡಿ.10ರವರೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸುವ ಕಾರ್ಯ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ, ನಿರ್ದೇಶಕರಾದ ರಾಹುಲ್‌ಗೌಡ ಪಾಟೀಲ,ಅಧಿಕ ಪಾಟೀಲ,ಶ್ರೀನಿವಾಸ ಅರಕೇರಿ,ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿವೇಕ,ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ,ಕೃಷಿ ಇಲಾಖೆ ಅಧಿಕಾರಿ ಎಸ್.ಡಿ.ಭಾವಿಕಟ್ಟಿ, ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರವಾಡಗಿ, , ಆಹಾರ ಶಿರಸ್ತೇದಾರ ಶಶಿಧರ ಕುಮಚಗಿ, ಆಹಾರ ಇಲಾಖೆ ನಿರೀಕ್ಷಕ ಎಸ್.ಎ.ಗುಮತಿಮಠ ,ಕಂದಾಯ ನಿರೀಕ್ಷಕ ಪವನ ತಳವಾರ,ರೈತ ಸಂಘಟನೆಯ ಮುಖಂಡರಾದ ಸೋಮನಗೌಡ ಪಾಟೀಲ, ಬಾಲಪ್ಪಗೌಡ ಲಿಂಗದಳ್ಳಿ, ಅರವಿಂದ ಕುಲಕರ್ಣಿ,ಶಿವನಗೌಡ ಜಲಪೂರ ಸೇರಿದಂತೆ ಕಂದಾಯ,ಆಹಾರ ಇಲಾಖೆ ಅಧಿಕಾರಿಗಳು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ