ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು.

ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ ಮುಖಂಡರು,ಅಧಿಕಾರಿಗಳನ್ನು ಕರೆದುಕೊಂಡು ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ.ತೂಕ ಅಳತೆ ಮಾಪನ ಅಧಿಕಾರಿಗಳು ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದು ಕಾರ್ಖಾನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಕಾರ್ಖಾನೆಗಳಲ್ಲೂ ರೈತರನ್ನೊಳಗೊಂಡ ಪರಿಶೀಲನಾ ಸಮೀತಿ ರಚಿಸಲಾಗಿದ್ದು ಕಾಲಕಾಲಕ್ಕೆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳ ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಆಹಾರ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಬಾಲಾಜಿ ಸಕ್ಕರೆ ಕಾರ್ಖಾನೆಗೆ ರೈತರೊಂದಿಗೆ ಭೇಟಿ ನೀಡಿದ್ದೇವೆ.ಪ್ರಯೋಗಾಲಯಕ್ಕೆ ಭೇಟಿ ನೀಡಿ ಸಕ್ಕರೆ ಅಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬುದನ್ನು ರೈತರಿಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗಿದೆ.ಸರ್ಕಾರ ಸೂಚಿಸಿದ ದರವನ್ನು ಕಾರ್ಖಾನೆಯವರು ನೀಡುತ್ತಿದ್ದು ಈಗಾಗಲೇ ನ.30ರವರೆಗಿನ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸಲಾಗಿದೆ.132 ಕೋಟಿ ರೂ.ಗಳಲ್ಲಿ 84 ಕೋಟಿ ರೂ.ಬಿಲ್ ಪಾವತಿಸಲಾಗಿದ್ದು ಡಿ.10ರವರೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸುವ ಕಾರ್ಯ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ, ನಿರ್ದೇಶಕರಾದ ರಾಹುಲ್‌ಗೌಡ ಪಾಟೀಲ,ಅಧಿಕ ಪಾಟೀಲ,ಶ್ರೀನಿವಾಸ ಅರಕೇರಿ,ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿವೇಕ,ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ,ಕೃಷಿ ಇಲಾಖೆ ಅಧಿಕಾರಿ ಎಸ್.ಡಿ.ಭಾವಿಕಟ್ಟಿ, ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರವಾಡಗಿ, , ಆಹಾರ ಶಿರಸ್ತೇದಾರ ಶಶಿಧರ ಕುಮಚಗಿ, ಆಹಾರ ಇಲಾಖೆ ನಿರೀಕ್ಷಕ ಎಸ್.ಎ.ಗುಮತಿಮಠ ,ಕಂದಾಯ ನಿರೀಕ್ಷಕ ಪವನ ತಳವಾರ,ರೈತ ಸಂಘಟನೆಯ ಮುಖಂಡರಾದ ಸೋಮನಗೌಡ ಪಾಟೀಲ, ಬಾಲಪ್ಪಗೌಡ ಲಿಂಗದಳ್ಳಿ, ಅರವಿಂದ ಕುಲಕರ್ಣಿ,ಶಿವನಗೌಡ ಜಲಪೂರ ಸೇರಿದಂತೆ ಕಂದಾಯ,ಆಹಾರ ಇಲಾಖೆ ಅಧಿಕಾರಿಗಳು ಇದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ