ಮುದ್ದೇಬಿಹಾಳ : ವಿದ್ಯುತ್ ತಗುಲಿ ಕಂಬದಲ್ಲೇ ವ್ಯಕ್ತಿ ದುರ್ಮರಣ

ಮುದ್ದೇಬಿಹಾಳ : ವಿದ್ಯುತ್ ತಗುಲಿ ಕಂಬದಲ್ಲೇ ವ್ಯಕ್ತಿ ದುರ್ಮರಣ

ಮುದ್ದೇಬಿಹಾಳ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುಲ್ಲೂರ ಗ್ರಾಮದ ಕಾಲುವೆ ಪಕ್ಕದಲ್ಲಿರುವ ಬಸವೇಶ್ವರ ಗುಡಿಯ ಹತ್ತಿರ ಇರುವ ವಿದ್ಯುತ್ ಕಂಬದಲ್ಲಿ ಗುರುವಾರದಂದು ಸಂಜೆ ನಡೆದಿದೆ.

ಈ ಕುರಿತು ಮೃತನ ಪತ್ನಿ ರೇಣುಕಾ ಚಲವಾದಿ ಪೊಲೀಸರಿಗೆ ದೂರು (ಕಲಂ: 194 BNSS) ನೀಡಿದ್ದು ‘ನಮ್ಮೂರಲ್ಲಿ ಸಣ್ಣ ಪುಟ್ಟ ಎಲೆಕ್ಟಿಕಲ್ ಕೆಲಸಗಳನ್ನು ಮಾಡಿಕೊಂಡಿದ್ದ ನನ್ನ ಪತಿ ಗಣಪತಿ ಚಲವಾದಿ ಡಿ.18 ರಂದು ಸಾಯಂಕಾಲ 06-15 ಗಂಟೆ ಸುಮಾರಿಗೆ ನಮ್ಮೂರ ಕೆನಾಲ್ ಬಾಜು ಬಸವೇಶ್ವರ ಗುಡಿಯ ಹತ್ತಿರ ಇರುವ ಕರೆಂಟ್ ಕಂಬದ ಮೇಲೆ ಏನೋ ಕೆಲಸ ಮಾಡಲು ಹತ್ತಿದಾಗ ಆಕಸ್ಮಿಕವಾಗಿ ಕರಂಟ್ ತಗುಲಿ ಕರೆಂಟ್ ಶಾಕ ಹೊಡೆದು ತೀರಿಕೊಂಡಿರುತ್ತಾನೆ. ಹೊರತು ನನ್ನ ಗಂಡನ ಮರಣದಲ್ಲಿ ನನ್ನದಾಗಲಿ, ನಮ್ಮ ಮನೆಯವರದಾಗಲಿ ಯಾರ ಮೇಲೆಯೂ ಯಾವುದೇ ರೀತಿಯ ಸಂಶಯ ಇರುವುದಿಲ್ಲ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ, ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ,ದಲಿತಪರ ಸಂಘಟನೆ ಮುಖಂಡರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Latest News

ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ

ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ

ಮುದ್ದೇಬಿಹಾಳ : ಪಟ್ಟಣದ ನಿವಾಸಿ ಪರಶುರಾಮ ಸಿಂಧೆ ಅವರನ್ನು ಜಯ ಕರ್ನಾಟಕ ಸಂಘಟನೆಯ ವಿಜಯಪುರ

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು.

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ

17.5 ಕೋಟಿ ರೂ. ವಂಚನೆ ಪ್ರಕರಣ: ಸಿಎಂ ಸಿದ್ದರಾಮಯ್ಯ OSD ಪುತ್ರ ಸೇರಿ ಮೂವರ ವಿರುದ್ಧ NRI ದೂರು!

17.5 ಕೋಟಿ ರೂ. ವಂಚನೆ ಪ್ರಕರಣ: ಸಿಎಂ ಸಿದ್ದರಾಮಯ್ಯ OSD ಪುತ್ರ ಸೇರಿ ಮೂವರ ವಿರುದ್ಧ NRI ದೂರು!

​ಬೆಂಗಳೂರು: ​ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ (OSD) ವೆಂಕಟೇಶಯ್ಯ ಅವರ ಪುತ್ರ ರಜತ್ ವೆಂಕಟೇಶ್ ಅವರು ₹17.5 ಕೋಟಿ ಮೌಲ್ಯದ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನಿವಾಸಿ ಭಾರತೀಯರೊಬ್ಬರು (NRI) ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯು ಮುಖ್ಯಮಂತ್ರಿ ಕಚೇರಿಯನ್ನೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗುವಂತೆ ಮಾಡಿದೆ. ಪ್ರಕರಣದ ವಿವರ: ​ಆರೋಪಿಗಳು: ರಜತ್ ವೆಂಕಟೇಶ್, ಉದ್ಯಮಿಗಳಾದ ಸ್ನೇಹಾ ರಾಕೇಶ್ ಮತ್ತು ರಾಬಿನ್

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು ಅರಳುತಿದೆ,ಹೊಸ ದಿನ ನಿಮಗಾಗಿ ಕಾಯುತಿದೆ.​ಮನಸಿನಲಿ ನೆಮ್ಮದಿ ಇರಲಿ,ಕೆಲಸದಲಿ ಯಶಸ್ಸು ಸಿಗಲಿ.ಪ್ರತಿ ಹೆಜ್ಜೆಯಲಿ ಸಂತಸ ತುಂಬಿರಲಿ,ಮುಂಜಾನೆಯ ಶುಭಾಶಯಗಳು!