ಡಾ.ಎ.ಎಂ.ಮುಲ್ಲಾ ವೈದ್ಯಕೀಯ ಸೇವೆಗೆ 43ರ ಸಂಭ್ರಮ: ನನ್ನಪ್ಪನ ಆದರ್ಶ ಗುಣಗಳೇ ನನಗೆ ಮಾರ್ಗದರ್ಶನ-ಡಾ.ಮುಲ್ಲಾ

ಡಾ.ಎ.ಎಂ.ಮುಲ್ಲಾ ವೈದ್ಯಕೀಯ ಸೇವೆಗೆ 43ರ ಸಂಭ್ರಮ: ನನ್ನಪ್ಪನ ಆದರ್ಶ ಗುಣಗಳೇ ನನಗೆ ಮಾರ್ಗದರ್ಶನ-ಡಾ.ಮುಲ್ಲಾ

ಡಿಸಿಜಿ ನ್ಯೂಸ್ ವಿಶೇಷ ವರದಿ
ಮುದ್ದೇಬಿಹಾಳ
: ಸದಾ ನಗುನಗುತ್ತಾ ರೋಗಿಗಳ ಜೊತೆ ಮಾತಾಡುತ್ತಾ ಮಾತಿನಲ್ಲೇ ರೋಗಿಗಳ ಅರ್ಧ ಕಾಯಿಲೆ ಗುಣಮುಖಗೊಳಿಸುವ ವಿಶೇಷ ಗುಣ ಹೊಂದಿರುವ ಮುದ್ದೇಬಿಹಾಳದ ಹಿರಿಯ ವೈದ್ಯರಾಗಿರುವ ಡಾ.ಎ.ಎಂ.ಮುಲ್ಲಾ ಅವರ ವೈದ್ಯಕೀಯ ಸೇವೆಗೆ ನಾಲ್ಕು ದಶಕಗಳು ಪೂರ್ಣಗೊಂಡಿದ್ದು 43ನೇ ವರ್ಷದತ್ತ ಮುಂದುವರೆದಿದೆ.

1983, ಡಿಸೆಂಬರ್ 20ಕ್ಕೆ ವೈದ್ಯಕೀಯ ಸೇವೆಯನ್ನು ಆರಂಭಿಸಿ 42 ವಸಂತಗಳನ್ನು ಪೂರೈಸಿ 43 ನೇ ವಸಂತಕ್ಕೆ ಪಾದಾರ್ಪಣೆ ಮಾಡುತ್ತಿರುವ ಸರಳ ಸಜ್ಜನಿಕೆಯ ವೈದ್ಯರು ಮುಲ್ಲಾ ಅವರು.ಮುದ್ದೇಬಿಹಾಳದ ಬಸ್ ನಿಲ್ದಾಣದ ಹಿಂಭಾಗದಲ್ಲಿ ಬರುವ ಸಿಟಿ ಕ್ಲಿನಿಕ್ ಹೆಸರಿನಲ್ಲಿ ವೃತ್ತಿ ನಡೆಸುತ್ತಿರುವ ಡಾ.ಮುಲ್ಲಾ ಅವರು, ಬಡವರ ಪರ ಕಾಳಜಿ ಉಳ್ಳವರು.

ಅವರ ಶಿಷ್ಯ ಬಳಗದವರಲ್ಲಿ ಡಾ.ಮುಲ್ಲಾ ಅವರ ಕುರಿತು ವ್ಯಕ್ತವಾಗುವ ಪ್ರೀತಿ ತುಂಬಿದ ಮಾತುಗಳೇ ಡಾ.ಮುಲ್ಲಾ ಎಂತಹ ಸರಳ ಜೀವಿ ಎನ್ನುವುದನ್ನು ತಿಳಿಸುತ್ತದೆ.ಅದರಲ್ಲಿ ಮುದ್ದೇಬಿಹಾಳ ಪಟ್ಟಣದ ಸಂತ ಕನಕದಾಸ ಶಾಲೆಯ ಸಹ ಶಿಕ್ಷಕ ಮಂಜುನಾಥ ಸಿ.ಕಬಾಡೆ ಅವರು ಡಾ.ಮುಲ್ಲಾ ಅವರ ಬಗ್ಗೆ ಹೇಳುವ ಮಾತುಗಳು ಹೀಗಿವೆ. ಶಿಕ್ಷಕ ವೃತ್ತಿಯಲ್ಲಿದ್ದ ಡಾ.ಮುಲ್ಲಾ ಅವರ ತಂದೆಯವರ ಮಾರ್ಗದರ್ಶನ ಮತ್ತು
ಆಶಿರ್ವಾದದಿಂದ ವೈದ್ಯಕೀಯ ಸೇವೆಗೆ ಅಣಿಯಾಗುವ ಡಾ.ಮುಲ್ಲಾ ಅವರು ಕಳೆದ ನಾಲ್ಕು ದಶಕಗಳಿಂದ ದಣಿವರಿಯದ ಸೇವೆಯನ್ನು ಜನತೆಗೆ ಮಾಡುತ್ತಾ ಬಂದಿದ್ದಾರೆ.ಅAದಿನಿAದ- ಇಂದಿನವರೆಗೂ ಸದಾ ತಮ್ಮ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ.. ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದಾರೆ.ಹಣ ಇಲ್ಲದೇ ಆಸ್ಪತ್ರೆಗೆ ಬಂದ ಹಲವಾರು ರೋಗಿಗಳಿಗೆ, ಅವರೇ ಔಷಧಿಗಾಗಿ ದುಡ್ಡು ಕೊಟ್ಟು ಚಿಕಿತ್ಸೆ ನೀಡಿ ಕಳಿಸಿರುವ ಅನೇಕ ಘಟನೆಗಳು ನನ್ನ ಕಣ್ಣ ಮುಂದೆ ನಡೆದಿವೆ ಎಂಬುದನ್ನು ನೆನಪಿಸಿಕೊಂಡರು.

ದಸ್ತು ಬರಹಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಆರ್.ಬಾಗವಾನ ಅವರು ಮಾತನಾಡಿ, ಮುದ್ದೇಬಿಹಾಳದಲ್ಲಿ ಡಾ.ಪದಕಿ ನಂತರದ ಸ್ಥಾನ ಡಾ.ಮುಲ್ಲಾ ಅವರಿಗೆ ಇದೆ.ಮೃದುಮನಸ್ಸಿನವರು,ಮಾತುಗಳಲ್ಲೇ ರೋಗಿಯ ನೋವು,ರೋಗ ಕಡಿಮೆ ಮಾಡುವ ಕೈಗುಣ ಮುಲ್ಲಾರವರದ್ದು.ಮುದ್ದೇಬಿಹಾಳದಲ್ಲಿರುವ ವೈದ್ಯರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ ಮೊದಲಿಗರು ಡಾ.ಮುಲ್ಲಾ ಅವರು.ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಜನಮುಖಿ ಕಾರ್ಯಗಳನ್ನು ಕೈಗೊಂಡಿದ್ದಾರೆ.ಕುAಟೋಜಿ ಜಾತ್ರೆಯೊಂದರ ಸಮಯದಲ್ಲಿ ನೀರು ಕುಡಿದು ಅಸ್ವಸ್ಥಗೊಂಡಿದ್ದ ನೂರಾರು ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಿ ಮಾನವೀಯ ಸೇವೆ ಸಲ್ಲಿಸಿರುವ ಹೃದಯವಂತ ಡಾ.ಮುಲ್ಲಾರವರು ಎಂದು ನೆನಪಿಸಿಕೊಂಡರು.

ಇವರ ಆಸ್ಪತ್ರೆಗೆ ಮುದ್ದೇಬಿಹಾಳ ನಗರವಷ್ಟೇ ಅಲ್ಲದೇ ಬಂಟನೂರದ ನೇತ್ರಾವತಿ ಮಠ ಮಾತನಾಡಿ, ಡಾ.ಮುಲ್ಲಾ ಅವರು ಶಾಂತ ಸ್ವಭಾವದ ವ್ಯಕ್ತಿ. ಹಣದ ಮುಖ ನೋಡುವುದಿಲ್ಲ.ರೋಗಿಯ ಮುಖ ನೋಡುತ್ತಾರೆ ಎಂದು ಹೇಳಿಕೊಂಡರೆ ನೀಲಮ್ಮ ಚಲವಾದಿ, ನೇಬಗೇರಿಯ ಬಸವರಾಜ ಬಿರಾದಾರ, ಡಾ.ಮುಲ್ಲಾ ಅವರ ಜನಸೇವೆಯನ್ನು ನೆನಪಿಸಿಕೊಂಡರು.

ಡಿಸಿಜಿ ನ್ಯೂಸ್‌ನೊಂದಿಗೆ ಮಾತನಾಡಿದ ಡಾ.ಎ.ಎಂ.ಮುಲ್ಲಾ ಅವರು, ವೈದ್ಯಕೀಯ ಸೇವೆಗೆ ಬಂದು ನಾಲ್ಕು ದಶಕಗಳೇ ಉರುಳಿವೆ.ಮುದ್ದೇಬಿಹಾಳದ ಜನತೆ ಸಾಕಷ್ಟು ಅಭಿಮಾನ,ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ.ಬಡವರ ಪರ ಕಾಳಜಿಯನ್ನು ತೋರಬೇಕಾಗಿದ್ದರೆ ಅದು ನಮ್ಮ ತಂದೆಯವರ ಮಾರ್ಗದರ್ಶನ,ಆಶೀರ್ವಾದದ ಫಲ.ಬಡವರ ಸೇವೆ ಫಲಾಪೇಕ್ಷೆಇಲ್ಲದೇ ಮಾಡಿದರೆ ಮೇಲಿರುವ ಭಗವಂತ ಏನು ಕೊಡಬೇಕು ಅದನ್ನು ಕೊಟ್ಟೇ ಕೊಡುತ್ತಾನೆ ಎನ್ನುವ ನಂಬಿಕೆಯಿAದ ನಾನು ಜನಸೇವೆಯಲ್ಲಿ ನಿರತನಾಗಿದ್ದೇನೆ.ಎಂದಿಗೂ ಪ್ರಶಸ್ತಿ,ಮಾನ,ಸನ್ಮಾನಕ್ಕೆ ಆಸೆ ಪಟ್ಟಿಲ್ಲ.ಜನರಿಗೆ ನಾನು ಕೊಟ್ಟ ಚಿಕಿತ್ಸೆ ಫಲ ನೀಡಿ ಗುಣಮುಖರಾಗಿ ಅವರು ಬಂದು ಹರಸುವಾಗ ಆಡುವ ಮಾತುಗಳೇ ನನಗೆ ಬಹುಮಾನ ಎಂದು ಹೇಳಿಕೊಂಡರು.

ಇಂತಹ ಜನಸೇವೆ ಸಲ್ಲಿಸುತ್ತಿರುವ ಡಾ.ಮುಲ್ಲಾರವರ ಸಾರ್ವಜನಿಕ ಸೇವೆಯನ್ನು ಸರ್ಕಾರ,ಸಂಘ ಸಂಸ್ಥೆಗಳು ಗುರುತಿಸಬೇಕಾಗಿದೆ. ಬಡವರ ಪರವಾಗಿರುವ ನಿಮಗಿದೋ ಅವಿಭಜಿತ ಮುದ್ದೇಬಿಹಾಳ ತಾಲ್ಲೂಕಿನ ಸಮಸ್ತ ಜನತೆಯ ಪರವಾಗಿ ಸರ್ ನಿಮಗೆ ಶುಭ ಹಾರೈಕೆಗಳು…

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ