‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

ಮುದ್ದೇಬಿಹಾಳ : ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ.ಇದರಿಂದ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶಿಲ್ದಾರ್ ಕಚೇರಿಯಲ್ಲಿ ಹಾಕಿದ್ದ ಟೆಂಟ್‌ನಲ್ಲಿ ಸಮಾವೇಶಗೊಂಡರು.

ಓಣಿಯ ನಿವಾಸಿ ನಾಗೇಶ ಜಾಧವ ಮಾತನಾಡಿ, ತಡೆಯಾಜ್ಞೆ ಇದೆ ಎಂದು ಹೇಳುತ್ತಿದ್ದಾರೆ.ಆದರೆ ಯಾವ ಜಾಗದ ಮೇಲೆ ತಡೆಯಾಜ್ಞೆ ಇದೆ ಎಂಬುದನ್ನು ಹೇಳುತ್ತಿಲ್ಲ.30-35 ವರ್ಷಗಳ ಹಿಂದೆ ಕೈ ಬರಹದ ಉತಾರೆಗಳು,ಹಕ್ಕುಪತ್ರಗಳಿದ್ದು ಅವುಗಳಿಗೆ ಉತಾರೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ನಿವಾಸಿ ರಿಯಾಜಹ್ಮದ ಉಣ್ಣಿಬಾವಿ ಮಾತನಾಡಿ, ‘ಉತಾರೆಗಾಗಿ ಮುಖ್ಯಾಧಿಕಾರಿಗೆ ನಾಲ್ಕು ಸಲ ಅರ್ಜಿ ಕೊಟ್ಟಿದ್ದೇನೆ.ಅಲ್ಲದೆ ಎಂ.ಎಲ್.ಎ ಮನೆಗೆ ಹೋಗಿ ಅರ್ಜಿ ಕೊಟ್ಟಿದ್ದೇನೆ.ಉತಾರೆ ತಗೊಂಡು ಏನು ಗಾಡಿ ತಗೊಳ್ಳುವನು ಇದ್ದೀಯಾ ಎಂದು ಎಂಎಲ್‌ಎ ಕೇಳುತ್ತಾರೆ.ಅವರು ಚಿನ್ನು ಧಣಿಗೆ ಹೇಳುತ್ತೇನೆ ಹೋಗು ಎಂದ್ರು, ಚಿನ್ನು ಧಣಿ ಚೀಫ್ ಆಫೀಸರ ಬಳಿ ಹೋಗಲು ಹೇಳಿದರು.ಚೀಫ್ ಆಫೀಸರ್ ಕೇಳಿದರೆ ಇವತ್ತು ಬಾ ನಾಳೆ ಬಾ ಎಂದು ಉಡಾಫೆ ಉತ್ತರ ಕೊಡುತ್ತಿದ್ದಾರೆ.ನಾನು ಸೌದಿಗೆ ಹೋಗುವವನು ಇದ್ದೇನೆ ಎಂದರೂ ನೀನು ಸೌದಿಗೆ ಹೋಗು ನಾನೇ ಗರಪಟ್ಟಿ ತುಂಬಿಕೊAಡು ಉತಾರೆ ನಿನ್ನ ಮನಿಗೆ ಕಳಿಸಿಕೊಡುತ್ತೇನೆ ಎಂದು ಬೇಜವಾಬ್ದಾರಿಯಿಂದ ಮುಖ್ಯಾಧಿಕಾರಿ ಮಾತನಾಡುತ್ತಿದ್ದಾರೆ.ಎಂ.ಎಲ್.ಎ ಮನಿಗೆ ಎರಡು ಬಾರಿ ಹೋಗಿದ್ದೇನೆ.ಅವರು ಚಿನ್ನು ಧಣಿ ಬಳಿ ಹೋಗು ಎನ್ನುವುದು,ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು’ ಎಂದು ತಿರುಗಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಣಿಯ ನಿವಾಸಿ ಮಹೆಬೂಬ ಮುಲ್ಲಾ ಮಾತನಾಡಿ, ‘ಇಂದಿರಾ ನಗರದಲ್ಲಿ ವಾಸಿಸುತ್ತಿರುವವರು ಬಡವರು,ದಲಿತರು, ಹಿಂದುಳಿದವರು, ಎಲ್ಲ ವರ್ಗದವರು ಇದ್ದಾರೆ.1972ರಲ್ಲಿ ಕಾನೂನು ಬದ್ಧವಾಗಿ ಉತಾರೆ ಇತ್ತು.ಈಗ ಕಂಪ್ಯೂಟರ್ ಉತಾರೆ ಬಂದ ಮೇಲೆ ಯಾರೊಬ್ಬರಿಗೂ ಉತಾರೆ ಕೊಡುತ್ತಿಲ್ಲ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಕ್ಕು ಪತ್ರಗಳನ್ನು ಬದಲಾಯಿಸಿದರು.ಹಕ್ಕುಪತ್ರ ಇದ್ದರೂ ಉತಾರೆ ಕೊಡುತ್ತಿಲ್ಲ.ಮಗನಿಗೆ ಎಂಜೀನಿಯರ್ ಓದಿಸಬೇಕು.ಮದುವೆ,ಶಾಲೆ ಶುಲ್ಕ ಕಟ್ಟಲು ಮನೆಯ ಮೇಲೆ ಸಾಲ ಪಡೆದುಕೊಳ್ಳಬೇಕಿದೆ. ಇದಕ್ಕೆ ಉತಾರೆ ಕೊಡುವಂತೆ ನೀಡಬೇಕು ಎಂದರೂ ನಿರ್ಲಕ್ಷö್ಯ ವಹಿಸಿದ್ದಾರೆ. ಕನಿಷ್ಠ 400 ಮನೆಗಳಿಗೆ ಉತಾರೆ ಕೊಡಬೇಕು.ಸರ್ವೆ ನಂ.57,58ಕ್ಕೆ ಸಂಬAಧಿಸಿದAತೆ ಉತಾರೆ ನೀಡಬೇಕು.ಅಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಿದ್ದಾರೆ.ಆದರೆ ಯಾವ ಜಾಗಕ್ಕೆ, ಎಷ್ಟು ಜಾಗಕ್ಕೆ ಸ್ಟೇ ಇದೆ ಎಂಬುದನ್ನು ಹೇಳುತ್ತಿಲ್ಲ.ಯಾರು ಸ್ಟೇ ತಂದಿದ್ದಾರೆ ಎಂದು ಮುಖ್ಯಾಧಿಕಾರಿ ಹೇಳುತ್ತಿಲ್ಲ’ ಎಂದು ಹರಿಹಾಯ್ದರು.
ಬಡಾವಣೆಯ ನಿವಾಸಿಗಳಾದ ಬಸವರಾಜ ಕೋಳೂರ, ಪರಶುರಾಮ ನಾಲತವಾಡ,ಬಾಬು ಬಳಗಾನೂರ, ಬುಡ್ಡಾ ಮುಲ್ಲಾ,ವಿಷ್ಣು ದಳವಾಯಿ, ಚಂದ್ರಶೇಖರ ಮಹಾಲಿಂಗಪೂರ,ಶಿವಪ್ಪ ಬೆನಕಟ್ಟಿ, ಬಸವರಾಜ ಕಲಾದಗಿ,ರಾಜು ಪಾತ್ರೋಟ,ನಾರಾಯಣ ಮಿರಜಕರ್, ಮಂಜು ಚಲವಾದಿ ನೂರಾರು ಜನ ಇದ್ದರು.
ತಹಶೀಲ್ದಾರ್ ಭೇಟಿ: ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ KEERTI CHALAK ಪ್ರತಿಭಟನಾಕಾರರ ಮನವಿ ಆಲಿಸಿದರು.ಅಲ್ಲಿನ ಜಾಗೆಯ ಮೇಲೆ ತಡೆಯಾಜ್ಞೆ ಇದ್ದು ಅದರ ಬಗ್ಗೆ ಪರಿಶೀಲನೆ ನಡೆಸಿ ಉತಾರೆ ನೀಡುವ ಬಗ್ಗೆ ಮುಖ್ಯಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ.ದರಣಿ ಹಿಂದಕ್ಕೆ ಪಡೆದುಕೊಳ್ಳುವಂತೆ ವಿನಂತಿಸಿದರೂ ಅದಕ್ಕೆ ಧರಣಿ ನಿರತರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಧರಣಿ ಮುಂದುವರೆಸಿದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.