‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

ಮುದ್ದೇಬಿಹಾಳ : ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ.ಇದರಿಂದ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶಿಲ್ದಾರ್ ಕಚೇರಿಯಲ್ಲಿ ಹಾಕಿದ್ದ ಟೆಂಟ್‌ನಲ್ಲಿ ಸಮಾವೇಶಗೊಂಡರು.

ಓಣಿಯ ನಿವಾಸಿ ನಾಗೇಶ ಜಾಧವ ಮಾತನಾಡಿ, ತಡೆಯಾಜ್ಞೆ ಇದೆ ಎಂದು ಹೇಳುತ್ತಿದ್ದಾರೆ.ಆದರೆ ಯಾವ ಜಾಗದ ಮೇಲೆ ತಡೆಯಾಜ್ಞೆ ಇದೆ ಎಂಬುದನ್ನು ಹೇಳುತ್ತಿಲ್ಲ.30-35 ವರ್ಷಗಳ ಹಿಂದೆ ಕೈ ಬರಹದ ಉತಾರೆಗಳು,ಹಕ್ಕುಪತ್ರಗಳಿದ್ದು ಅವುಗಳಿಗೆ ಉತಾರೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ನಿವಾಸಿ ರಿಯಾಜಹ್ಮದ ಉಣ್ಣಿಬಾವಿ ಮಾತನಾಡಿ, ‘ಉತಾರೆಗಾಗಿ ಮುಖ್ಯಾಧಿಕಾರಿಗೆ ನಾಲ್ಕು ಸಲ ಅರ್ಜಿ ಕೊಟ್ಟಿದ್ದೇನೆ.ಅಲ್ಲದೆ ಎಂ.ಎಲ್.ಎ ಮನೆಗೆ ಹೋಗಿ ಅರ್ಜಿ ಕೊಟ್ಟಿದ್ದೇನೆ.ಉತಾರೆ ತಗೊಂಡು ಏನು ಗಾಡಿ ತಗೊಳ್ಳುವನು ಇದ್ದೀಯಾ ಎಂದು ಎಂಎಲ್‌ಎ ಕೇಳುತ್ತಾರೆ.ಅವರು ಚಿನ್ನು ಧಣಿಗೆ ಹೇಳುತ್ತೇನೆ ಹೋಗು ಎಂದ್ರು, ಚಿನ್ನು ಧಣಿ ಚೀಫ್ ಆಫೀಸರ ಬಳಿ ಹೋಗಲು ಹೇಳಿದರು.ಚೀಫ್ ಆಫೀಸರ್ ಕೇಳಿದರೆ ಇವತ್ತು ಬಾ ನಾಳೆ ಬಾ ಎಂದು ಉಡಾಫೆ ಉತ್ತರ ಕೊಡುತ್ತಿದ್ದಾರೆ.ನಾನು ಸೌದಿಗೆ ಹೋಗುವವನು ಇದ್ದೇನೆ ಎಂದರೂ ನೀನು ಸೌದಿಗೆ ಹೋಗು ನಾನೇ ಗರಪಟ್ಟಿ ತುಂಬಿಕೊAಡು ಉತಾರೆ ನಿನ್ನ ಮನಿಗೆ ಕಳಿಸಿಕೊಡುತ್ತೇನೆ ಎಂದು ಬೇಜವಾಬ್ದಾರಿಯಿಂದ ಮುಖ್ಯಾಧಿಕಾರಿ ಮಾತನಾಡುತ್ತಿದ್ದಾರೆ.ಎಂ.ಎಲ್.ಎ ಮನಿಗೆ ಎರಡು ಬಾರಿ ಹೋಗಿದ್ದೇನೆ.ಅವರು ಚಿನ್ನು ಧಣಿ ಬಳಿ ಹೋಗು ಎನ್ನುವುದು,ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು’ ಎಂದು ತಿರುಗಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಣಿಯ ನಿವಾಸಿ ಮಹೆಬೂಬ ಮುಲ್ಲಾ ಮಾತನಾಡಿ, ‘ಇಂದಿರಾ ನಗರದಲ್ಲಿ ವಾಸಿಸುತ್ತಿರುವವರು ಬಡವರು,ದಲಿತರು, ಹಿಂದುಳಿದವರು, ಎಲ್ಲ ವರ್ಗದವರು ಇದ್ದಾರೆ.1972ರಲ್ಲಿ ಕಾನೂನು ಬದ್ಧವಾಗಿ ಉತಾರೆ ಇತ್ತು.ಈಗ ಕಂಪ್ಯೂಟರ್ ಉತಾರೆ ಬಂದ ಮೇಲೆ ಯಾರೊಬ್ಬರಿಗೂ ಉತಾರೆ ಕೊಡುತ್ತಿಲ್ಲ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಕ್ಕು ಪತ್ರಗಳನ್ನು ಬದಲಾಯಿಸಿದರು.ಹಕ್ಕುಪತ್ರ ಇದ್ದರೂ ಉತಾರೆ ಕೊಡುತ್ತಿಲ್ಲ.ಮಗನಿಗೆ ಎಂಜೀನಿಯರ್ ಓದಿಸಬೇಕು.ಮದುವೆ,ಶಾಲೆ ಶುಲ್ಕ ಕಟ್ಟಲು ಮನೆಯ ಮೇಲೆ ಸಾಲ ಪಡೆದುಕೊಳ್ಳಬೇಕಿದೆ. ಇದಕ್ಕೆ ಉತಾರೆ ಕೊಡುವಂತೆ ನೀಡಬೇಕು ಎಂದರೂ ನಿರ್ಲಕ್ಷö್ಯ ವಹಿಸಿದ್ದಾರೆ. ಕನಿಷ್ಠ 400 ಮನೆಗಳಿಗೆ ಉತಾರೆ ಕೊಡಬೇಕು.ಸರ್ವೆ ನಂ.57,58ಕ್ಕೆ ಸಂಬAಧಿಸಿದAತೆ ಉತಾರೆ ನೀಡಬೇಕು.ಅಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಿದ್ದಾರೆ.ಆದರೆ ಯಾವ ಜಾಗಕ್ಕೆ, ಎಷ್ಟು ಜಾಗಕ್ಕೆ ಸ್ಟೇ ಇದೆ ಎಂಬುದನ್ನು ಹೇಳುತ್ತಿಲ್ಲ.ಯಾರು ಸ್ಟೇ ತಂದಿದ್ದಾರೆ ಎಂದು ಮುಖ್ಯಾಧಿಕಾರಿ ಹೇಳುತ್ತಿಲ್ಲ’ ಎಂದು ಹರಿಹಾಯ್ದರು.
ಬಡಾವಣೆಯ ನಿವಾಸಿಗಳಾದ ಬಸವರಾಜ ಕೋಳೂರ, ಪರಶುರಾಮ ನಾಲತವಾಡ,ಬಾಬು ಬಳಗಾನೂರ, ಬುಡ್ಡಾ ಮುಲ್ಲಾ,ವಿಷ್ಣು ದಳವಾಯಿ, ಚಂದ್ರಶೇಖರ ಮಹಾಲಿಂಗಪೂರ,ಶಿವಪ್ಪ ಬೆನಕಟ್ಟಿ, ಬಸವರಾಜ ಕಲಾದಗಿ,ರಾಜು ಪಾತ್ರೋಟ,ನಾರಾಯಣ ಮಿರಜಕರ್, ಮಂಜು ಚಲವಾದಿ ನೂರಾರು ಜನ ಇದ್ದರು.
ತಹಶೀಲ್ದಾರ್ ಭೇಟಿ: ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ KEERTI CHALAK ಪ್ರತಿಭಟನಾಕಾರರ ಮನವಿ ಆಲಿಸಿದರು.ಅಲ್ಲಿನ ಜಾಗೆಯ ಮೇಲೆ ತಡೆಯಾಜ್ಞೆ ಇದ್ದು ಅದರ ಬಗ್ಗೆ ಪರಿಶೀಲನೆ ನಡೆಸಿ ಉತಾರೆ ನೀಡುವ ಬಗ್ಗೆ ಮುಖ್ಯಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ.ದರಣಿ ಹಿಂದಕ್ಕೆ ಪಡೆದುಕೊಳ್ಳುವಂತೆ ವಿನಂತಿಸಿದರೂ ಅದಕ್ಕೆ ಧರಣಿ ನಿರತರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಧರಣಿ ಮುಂದುವರೆಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ