‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

ಮುದ್ದೇಬಿಹಾಳ : ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ.ಇದರಿಂದ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶಿಲ್ದಾರ್ ಕಚೇರಿಯಲ್ಲಿ ಹಾಕಿದ್ದ ಟೆಂಟ್‌ನಲ್ಲಿ ಸಮಾವೇಶಗೊಂಡರು.

ಓಣಿಯ ನಿವಾಸಿ ನಾಗೇಶ ಜಾಧವ ಮಾತನಾಡಿ, ತಡೆಯಾಜ್ಞೆ ಇದೆ ಎಂದು ಹೇಳುತ್ತಿದ್ದಾರೆ.ಆದರೆ ಯಾವ ಜಾಗದ ಮೇಲೆ ತಡೆಯಾಜ್ಞೆ ಇದೆ ಎಂಬುದನ್ನು ಹೇಳುತ್ತಿಲ್ಲ.30-35 ವರ್ಷಗಳ ಹಿಂದೆ ಕೈ ಬರಹದ ಉತಾರೆಗಳು,ಹಕ್ಕುಪತ್ರಗಳಿದ್ದು ಅವುಗಳಿಗೆ ಉತಾರೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ನಿವಾಸಿ ರಿಯಾಜಹ್ಮದ ಉಣ್ಣಿಬಾವಿ ಮಾತನಾಡಿ, ‘ಉತಾರೆಗಾಗಿ ಮುಖ್ಯಾಧಿಕಾರಿಗೆ ನಾಲ್ಕು ಸಲ ಅರ್ಜಿ ಕೊಟ್ಟಿದ್ದೇನೆ.ಅಲ್ಲದೆ ಎಂ.ಎಲ್.ಎ ಮನೆಗೆ ಹೋಗಿ ಅರ್ಜಿ ಕೊಟ್ಟಿದ್ದೇನೆ.ಉತಾರೆ ತಗೊಂಡು ಏನು ಗಾಡಿ ತಗೊಳ್ಳುವನು ಇದ್ದೀಯಾ ಎಂದು ಎಂಎಲ್‌ಎ ಕೇಳುತ್ತಾರೆ.ಅವರು ಚಿನ್ನು ಧಣಿಗೆ ಹೇಳುತ್ತೇನೆ ಹೋಗು ಎಂದ್ರು, ಚಿನ್ನು ಧಣಿ ಚೀಫ್ ಆಫೀಸರ ಬಳಿ ಹೋಗಲು ಹೇಳಿದರು.ಚೀಫ್ ಆಫೀಸರ್ ಕೇಳಿದರೆ ಇವತ್ತು ಬಾ ನಾಳೆ ಬಾ ಎಂದು ಉಡಾಫೆ ಉತ್ತರ ಕೊಡುತ್ತಿದ್ದಾರೆ.ನಾನು ಸೌದಿಗೆ ಹೋಗುವವನು ಇದ್ದೇನೆ ಎಂದರೂ ನೀನು ಸೌದಿಗೆ ಹೋಗು ನಾನೇ ಗರಪಟ್ಟಿ ತುಂಬಿಕೊAಡು ಉತಾರೆ ನಿನ್ನ ಮನಿಗೆ ಕಳಿಸಿಕೊಡುತ್ತೇನೆ ಎಂದು ಬೇಜವಾಬ್ದಾರಿಯಿಂದ ಮುಖ್ಯಾಧಿಕಾರಿ ಮಾತನಾಡುತ್ತಿದ್ದಾರೆ.ಎಂ.ಎಲ್.ಎ ಮನಿಗೆ ಎರಡು ಬಾರಿ ಹೋಗಿದ್ದೇನೆ.ಅವರು ಚಿನ್ನು ಧಣಿ ಬಳಿ ಹೋಗು ಎನ್ನುವುದು,ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು’ ಎಂದು ತಿರುಗಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಣಿಯ ನಿವಾಸಿ ಮಹೆಬೂಬ ಮುಲ್ಲಾ ಮಾತನಾಡಿ, ‘ಇಂದಿರಾ ನಗರದಲ್ಲಿ ವಾಸಿಸುತ್ತಿರುವವರು ಬಡವರು,ದಲಿತರು, ಹಿಂದುಳಿದವರು, ಎಲ್ಲ ವರ್ಗದವರು ಇದ್ದಾರೆ.1972ರಲ್ಲಿ ಕಾನೂನು ಬದ್ಧವಾಗಿ ಉತಾರೆ ಇತ್ತು.ಈಗ ಕಂಪ್ಯೂಟರ್ ಉತಾರೆ ಬಂದ ಮೇಲೆ ಯಾರೊಬ್ಬರಿಗೂ ಉತಾರೆ ಕೊಡುತ್ತಿಲ್ಲ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಕ್ಕು ಪತ್ರಗಳನ್ನು ಬದಲಾಯಿಸಿದರು.ಹಕ್ಕುಪತ್ರ ಇದ್ದರೂ ಉತಾರೆ ಕೊಡುತ್ತಿಲ್ಲ.ಮಗನಿಗೆ ಎಂಜೀನಿಯರ್ ಓದಿಸಬೇಕು.ಮದುವೆ,ಶಾಲೆ ಶುಲ್ಕ ಕಟ್ಟಲು ಮನೆಯ ಮೇಲೆ ಸಾಲ ಪಡೆದುಕೊಳ್ಳಬೇಕಿದೆ. ಇದಕ್ಕೆ ಉತಾರೆ ಕೊಡುವಂತೆ ನೀಡಬೇಕು ಎಂದರೂ ನಿರ್ಲಕ್ಷö್ಯ ವಹಿಸಿದ್ದಾರೆ. ಕನಿಷ್ಠ 400 ಮನೆಗಳಿಗೆ ಉತಾರೆ ಕೊಡಬೇಕು.ಸರ್ವೆ ನಂ.57,58ಕ್ಕೆ ಸಂಬAಧಿಸಿದAತೆ ಉತಾರೆ ನೀಡಬೇಕು.ಅಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಿದ್ದಾರೆ.ಆದರೆ ಯಾವ ಜಾಗಕ್ಕೆ, ಎಷ್ಟು ಜಾಗಕ್ಕೆ ಸ್ಟೇ ಇದೆ ಎಂಬುದನ್ನು ಹೇಳುತ್ತಿಲ್ಲ.ಯಾರು ಸ್ಟೇ ತಂದಿದ್ದಾರೆ ಎಂದು ಮುಖ್ಯಾಧಿಕಾರಿ ಹೇಳುತ್ತಿಲ್ಲ’ ಎಂದು ಹರಿಹಾಯ್ದರು.
ಬಡಾವಣೆಯ ನಿವಾಸಿಗಳಾದ ಬಸವರಾಜ ಕೋಳೂರ, ಪರಶುರಾಮ ನಾಲತವಾಡ,ಬಾಬು ಬಳಗಾನೂರ, ಬುಡ್ಡಾ ಮುಲ್ಲಾ,ವಿಷ್ಣು ದಳವಾಯಿ, ಚಂದ್ರಶೇಖರ ಮಹಾಲಿಂಗಪೂರ,ಶಿವಪ್ಪ ಬೆನಕಟ್ಟಿ, ಬಸವರಾಜ ಕಲಾದಗಿ,ರಾಜು ಪಾತ್ರೋಟ,ನಾರಾಯಣ ಮಿರಜಕರ್, ಮಂಜು ಚಲವಾದಿ ನೂರಾರು ಜನ ಇದ್ದರು.
ತಹಶೀಲ್ದಾರ್ ಭೇಟಿ: ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ KEERTI CHALAK ಪ್ರತಿಭಟನಾಕಾರರ ಮನವಿ ಆಲಿಸಿದರು.ಅಲ್ಲಿನ ಜಾಗೆಯ ಮೇಲೆ ತಡೆಯಾಜ್ಞೆ ಇದ್ದು ಅದರ ಬಗ್ಗೆ ಪರಿಶೀಲನೆ ನಡೆಸಿ ಉತಾರೆ ನೀಡುವ ಬಗ್ಗೆ ಮುಖ್ಯಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ.ದರಣಿ ಹಿಂದಕ್ಕೆ ಪಡೆದುಕೊಳ್ಳುವಂತೆ ವಿನಂತಿಸಿದರೂ ಅದಕ್ಕೆ ಧರಣಿ ನಿರತರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಧರಣಿ ಮುಂದುವರೆಸಿದರು.

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ