‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

ಮುದ್ದೇಬಿಹಾಳ : ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ.ಇದರಿಂದ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶಿಲ್ದಾರ್ ಕಚೇರಿಯಲ್ಲಿ ಹಾಕಿದ್ದ ಟೆಂಟ್‌ನಲ್ಲಿ ಸಮಾವೇಶಗೊಂಡರು.

ಓಣಿಯ ನಿವಾಸಿ ನಾಗೇಶ ಜಾಧವ ಮಾತನಾಡಿ, ತಡೆಯಾಜ್ಞೆ ಇದೆ ಎಂದು ಹೇಳುತ್ತಿದ್ದಾರೆ.ಆದರೆ ಯಾವ ಜಾಗದ ಮೇಲೆ ತಡೆಯಾಜ್ಞೆ ಇದೆ ಎಂಬುದನ್ನು ಹೇಳುತ್ತಿಲ್ಲ.30-35 ವರ್ಷಗಳ ಹಿಂದೆ ಕೈ ಬರಹದ ಉತಾರೆಗಳು,ಹಕ್ಕುಪತ್ರಗಳಿದ್ದು ಅವುಗಳಿಗೆ ಉತಾರೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ನಿವಾಸಿ ರಿಯಾಜಹ್ಮದ ಉಣ್ಣಿಬಾವಿ ಮಾತನಾಡಿ, ‘ಉತಾರೆಗಾಗಿ ಮುಖ್ಯಾಧಿಕಾರಿಗೆ ನಾಲ್ಕು ಸಲ ಅರ್ಜಿ ಕೊಟ್ಟಿದ್ದೇನೆ.ಅಲ್ಲದೆ ಎಂ.ಎಲ್.ಎ ಮನೆಗೆ ಹೋಗಿ ಅರ್ಜಿ ಕೊಟ್ಟಿದ್ದೇನೆ.ಉತಾರೆ ತಗೊಂಡು ಏನು ಗಾಡಿ ತಗೊಳ್ಳುವನು ಇದ್ದೀಯಾ ಎಂದು ಎಂಎಲ್‌ಎ ಕೇಳುತ್ತಾರೆ.ಅವರು ಚಿನ್ನು ಧಣಿಗೆ ಹೇಳುತ್ತೇನೆ ಹೋಗು ಎಂದ್ರು, ಚಿನ್ನು ಧಣಿ ಚೀಫ್ ಆಫೀಸರ ಬಳಿ ಹೋಗಲು ಹೇಳಿದರು.ಚೀಫ್ ಆಫೀಸರ್ ಕೇಳಿದರೆ ಇವತ್ತು ಬಾ ನಾಳೆ ಬಾ ಎಂದು ಉಡಾಫೆ ಉತ್ತರ ಕೊಡುತ್ತಿದ್ದಾರೆ.ನಾನು ಸೌದಿಗೆ ಹೋಗುವವನು ಇದ್ದೇನೆ ಎಂದರೂ ನೀನು ಸೌದಿಗೆ ಹೋಗು ನಾನೇ ಗರಪಟ್ಟಿ ತುಂಬಿಕೊAಡು ಉತಾರೆ ನಿನ್ನ ಮನಿಗೆ ಕಳಿಸಿಕೊಡುತ್ತೇನೆ ಎಂದು ಬೇಜವಾಬ್ದಾರಿಯಿಂದ ಮುಖ್ಯಾಧಿಕಾರಿ ಮಾತನಾಡುತ್ತಿದ್ದಾರೆ.ಎಂ.ಎಲ್.ಎ ಮನಿಗೆ ಎರಡು ಬಾರಿ ಹೋಗಿದ್ದೇನೆ.ಅವರು ಚಿನ್ನು ಧಣಿ ಬಳಿ ಹೋಗು ಎನ್ನುವುದು,ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು’ ಎಂದು ತಿರುಗಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಣಿಯ ನಿವಾಸಿ ಮಹೆಬೂಬ ಮುಲ್ಲಾ ಮಾತನಾಡಿ, ‘ಇಂದಿರಾ ನಗರದಲ್ಲಿ ವಾಸಿಸುತ್ತಿರುವವರು ಬಡವರು,ದಲಿತರು, ಹಿಂದುಳಿದವರು, ಎಲ್ಲ ವರ್ಗದವರು ಇದ್ದಾರೆ.1972ರಲ್ಲಿ ಕಾನೂನು ಬದ್ಧವಾಗಿ ಉತಾರೆ ಇತ್ತು.ಈಗ ಕಂಪ್ಯೂಟರ್ ಉತಾರೆ ಬಂದ ಮೇಲೆ ಯಾರೊಬ್ಬರಿಗೂ ಉತಾರೆ ಕೊಡುತ್ತಿಲ್ಲ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಕ್ಕು ಪತ್ರಗಳನ್ನು ಬದಲಾಯಿಸಿದರು.ಹಕ್ಕುಪತ್ರ ಇದ್ದರೂ ಉತಾರೆ ಕೊಡುತ್ತಿಲ್ಲ.ಮಗನಿಗೆ ಎಂಜೀನಿಯರ್ ಓದಿಸಬೇಕು.ಮದುವೆ,ಶಾಲೆ ಶುಲ್ಕ ಕಟ್ಟಲು ಮನೆಯ ಮೇಲೆ ಸಾಲ ಪಡೆದುಕೊಳ್ಳಬೇಕಿದೆ. ಇದಕ್ಕೆ ಉತಾರೆ ಕೊಡುವಂತೆ ನೀಡಬೇಕು ಎಂದರೂ ನಿರ್ಲಕ್ಷö್ಯ ವಹಿಸಿದ್ದಾರೆ. ಕನಿಷ್ಠ 400 ಮನೆಗಳಿಗೆ ಉತಾರೆ ಕೊಡಬೇಕು.ಸರ್ವೆ ನಂ.57,58ಕ್ಕೆ ಸಂಬAಧಿಸಿದAತೆ ಉತಾರೆ ನೀಡಬೇಕು.ಅಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಿದ್ದಾರೆ.ಆದರೆ ಯಾವ ಜಾಗಕ್ಕೆ, ಎಷ್ಟು ಜಾಗಕ್ಕೆ ಸ್ಟೇ ಇದೆ ಎಂಬುದನ್ನು ಹೇಳುತ್ತಿಲ್ಲ.ಯಾರು ಸ್ಟೇ ತಂದಿದ್ದಾರೆ ಎಂದು ಮುಖ್ಯಾಧಿಕಾರಿ ಹೇಳುತ್ತಿಲ್ಲ’ ಎಂದು ಹರಿಹಾಯ್ದರು.
ಬಡಾವಣೆಯ ನಿವಾಸಿಗಳಾದ ಬಸವರಾಜ ಕೋಳೂರ, ಪರಶುರಾಮ ನಾಲತವಾಡ,ಬಾಬು ಬಳಗಾನೂರ, ಬುಡ್ಡಾ ಮುಲ್ಲಾ,ವಿಷ್ಣು ದಳವಾಯಿ, ಚಂದ್ರಶೇಖರ ಮಹಾಲಿಂಗಪೂರ,ಶಿವಪ್ಪ ಬೆನಕಟ್ಟಿ, ಬಸವರಾಜ ಕಲಾದಗಿ,ರಾಜು ಪಾತ್ರೋಟ,ನಾರಾಯಣ ಮಿರಜಕರ್, ಮಂಜು ಚಲವಾದಿ ನೂರಾರು ಜನ ಇದ್ದರು.
ತಹಶೀಲ್ದಾರ್ ಭೇಟಿ: ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ KEERTI CHALAK ಪ್ರತಿಭಟನಾಕಾರರ ಮನವಿ ಆಲಿಸಿದರು.ಅಲ್ಲಿನ ಜಾಗೆಯ ಮೇಲೆ ತಡೆಯಾಜ್ಞೆ ಇದ್ದು ಅದರ ಬಗ್ಗೆ ಪರಿಶೀಲನೆ ನಡೆಸಿ ಉತಾರೆ ನೀಡುವ ಬಗ್ಗೆ ಮುಖ್ಯಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ.ದರಣಿ ಹಿಂದಕ್ಕೆ ಪಡೆದುಕೊಳ್ಳುವಂತೆ ವಿನಂತಿಸಿದರೂ ಅದಕ್ಕೆ ಧರಣಿ ನಿರತರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಧರಣಿ ಮುಂದುವರೆಸಿದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ